<p><strong>ಬೆಂಗಳೂರು: </strong>ಬಿಜೆಪಿ ನೇತೃತ್ವದ ಎನ್ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಹೇಳಿದರು.<br /> <br /> ದೇವಾಂಗ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಂಗಳೂರು ಕೇಂದ್ರ ಲೋಕಸಭಾ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.<br /> <br /> ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಹಿಳಾ ಮಸೂದೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆದರೆ ಇದಕ್ಕೆ ವಿರೋಧ ಪಕ್ಷಗಳ ಸಹಕಾರ ಸಿಗಲಿಲ್ಲ ಎಂದರು.<br /> <br /> ನರೇಂದ್ರ ಮೋದಿ ಪ್ರಧಾನಿ ಆಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಮೀಸಲಾತಿ ನೀಡಲು ತೀರ್ಮಾನಿಸಿದ್ದು, ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲೇ ಈ ಮಸೂದೆಯನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.<br /> ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇತ್ತೀಚೆಗೆ ಬಿಎಂಟಿಸಿ ಬಸ್ನಲ್ಲೇ ಮಹಿಳೆ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಲಾಗಿದೆ ಎಂದು ಹೇಳಿದರು.<br /> <br /> ಶಾಸಕ ಅರವಿಂದ ಲಿಂಬಾವಳಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಮಹಿಳೆಯರ ರಕ್ಷಣೆಗೆ ವಿಶೇಷ ಒತ್ತು ನೀಡಲಾಗಿತ್ತು. ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮ ಪಕ್ಷ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು ಎಂದು ತಿಳಿಸಿದರು.<br /> <br /> ಮಹಿಳೆಯರಿಗೆ ರಕ್ಷಣೆ ಕೊಡಲಾಗದ ಕಾಂಗ್ರೆಸ್ ಸರ್ಕಾರ ಅವರ ಸಬಲೀಕರಣ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.<br /> <br /> ಶಾಸಕ ಎಸ್.ಸುರೇಶ್ಕುಮಾರ್ ಮಾತನಾಡಿದರು, ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ತಾರಾ ಅನೂರಾಧ, ಶಿಲ್ಪಾ ಗಣೇಶ್, ಪದ್ಮಾ ಮುಖ್ಯಮಂತ್ರಿ ಚಂದ್ರು, ಪೂರ್ಣಿಮಾ ಪ್ರಕಾಶ್, ಸಚ್ಚಿದಾನಂದ ಮೂರ್ತಿ, ಬಿಬಿಎಂಪಿ ಸದಸ್ಯರಾದ ಗೋಪಿ, ಭಾಗ್ಯ, ಮಮತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿ ನೇತೃತ್ವದ ಎನ್ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಹೇಳಿದರು.<br /> <br /> ದೇವಾಂಗ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಂಗಳೂರು ಕೇಂದ್ರ ಲೋಕಸಭಾ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.<br /> <br /> ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಹಿಳಾ ಮಸೂದೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆದರೆ ಇದಕ್ಕೆ ವಿರೋಧ ಪಕ್ಷಗಳ ಸಹಕಾರ ಸಿಗಲಿಲ್ಲ ಎಂದರು.<br /> <br /> ನರೇಂದ್ರ ಮೋದಿ ಪ್ರಧಾನಿ ಆಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಮೀಸಲಾತಿ ನೀಡಲು ತೀರ್ಮಾನಿಸಿದ್ದು, ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲೇ ಈ ಮಸೂದೆಯನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.<br /> ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇತ್ತೀಚೆಗೆ ಬಿಎಂಟಿಸಿ ಬಸ್ನಲ್ಲೇ ಮಹಿಳೆ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಲಾಗಿದೆ ಎಂದು ಹೇಳಿದರು.<br /> <br /> ಶಾಸಕ ಅರವಿಂದ ಲಿಂಬಾವಳಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಮಹಿಳೆಯರ ರಕ್ಷಣೆಗೆ ವಿಶೇಷ ಒತ್ತು ನೀಡಲಾಗಿತ್ತು. ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮ ಪಕ್ಷ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು ಎಂದು ತಿಳಿಸಿದರು.<br /> <br /> ಮಹಿಳೆಯರಿಗೆ ರಕ್ಷಣೆ ಕೊಡಲಾಗದ ಕಾಂಗ್ರೆಸ್ ಸರ್ಕಾರ ಅವರ ಸಬಲೀಕರಣ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.<br /> <br /> ಶಾಸಕ ಎಸ್.ಸುರೇಶ್ಕುಮಾರ್ ಮಾತನಾಡಿದರು, ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ತಾರಾ ಅನೂರಾಧ, ಶಿಲ್ಪಾ ಗಣೇಶ್, ಪದ್ಮಾ ಮುಖ್ಯಮಂತ್ರಿ ಚಂದ್ರು, ಪೂರ್ಣಿಮಾ ಪ್ರಕಾಶ್, ಸಚ್ಚಿದಾನಂದ ಮೂರ್ತಿ, ಬಿಬಿಎಂಪಿ ಸದಸ್ಯರಾದ ಗೋಪಿ, ಭಾಗ್ಯ, ಮಮತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>