<p><strong>ಕವಿತಾಳ: </strong>1956–2015ರ ವರೆಗೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಸರ್ಕಾರಗಳು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ತಾರತಮ್ಯ ನೀತಿ ಅನುಸರಿಸಿವೆ ಈ ಕುರಿತು ನಂಜುಂಡಪ್ಪ ವರದಿಯಲ್ಲಿ ಸ್ಪಷ್ಟ ಮಾಹಿತಿ ಇದೆ ಎಂದು ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು.<br /> <br /> ಪಟ್ಟಣದ ಕಲ್ಮಠಕ್ಕೆ ಭಾನುವಾರ ಭೇಟಿ ನೀಡಿದ ಅವರು ಜೂ.26ರಂದು ಕವಿತಾಳಕ್ಕೆ ಬರುವ ಜನ ಜಾಗೃತಿ ಜಾಥಾ ಕುರಿತು ಬಸವಲಿಂಗ ಸ್ವಾಮೀಜಿ ಜೊತೆ ಚರ್ಚಿಸಿ ನಂತರ ಮಾತನಾಡಿದರು.<br /> <br /> ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು ಎನ್ನುವುದು ನಮ್ಮ ಪ್ರಥಮ ಬೇಡಿಕೆ ಅದು ಈಡೇರದಿದ್ದರೆ ಪ್ರತ್ಯೇಕ ರಾಜ್ಯದ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.<br /> <br /> ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಂದಾಜು 7,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಅದರ ದುಷ್ಪರಿಣಾಮಗಳನ್ನು ಎದುರಿಸುತ್ತಿರುವ ಈ ಭಾಗದ ಜಿಲ್ಲೆಗಳ ಜನರಿಗೆ ನೀಡುತ್ತಿರುವುದು ಕೇವಲ ಶೇ30ರಷ್ಟು ವಿದ್ಯುತ್ ಮಾತ್ರ ಉಳಿದ ವಿದ್ಯುತ್ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನೀಡಲಾಗುತ್ತಿದೆ.<br /> <br /> ಉಡುಪಿ ಜಿಲ್ಲೆಯಲ್ಲಿ ಅಂದಾಜು 600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಆ ಜಿಲ್ಲೆಗೆ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಒದಗಿಸಲಾಗುತ್ತಿದೆ ಇದು ಸರ್ಕಾರಗಳ ತಾರತಮ್ಯ ನೀತಿಗೆ ಒಂದು ಉದಾಹರಣೆ ಮಾತ್ರ ಎಂದರು.<br /> <br /> ಕೃಷ್ಣಾ, ತುಂಗಭದ್ರ, ಘಟಪ್ರಭಾ ಮತ್ತು ಭೀಮಾ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಅಂದಾಜು 1056 ಟಿ.ಎಂ.ಸಿ. ನೀರು ಹಂಚಿಕೆಯಾಗಿದ್ದು ಸರ್ಕಾರಗಳು ಎಷ್ಟು ಪ್ರಮಾಣದ ನೀರನ್ನು ಸದ್ಬಳಕೆ ಮಾಡಿಕೊಂಡಿವೆ ಎಂದು ಸ್ಪಷ್ಟಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.<br /> <br /> ಕರ್ನಾಟಕ ಏಕೀಕರಣದ ನಂತರ ಉತ್ತರ ಕರ್ನಾಟಕ ಮತ್ತು ರಾಜ್ಯದ ಉಳಿದ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರಗಳು ಖರ್ಚು ಮಾಡಿದ ಹಣದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.<br /> <br /> ಪ್ರಾದೇಶಿಕ ಅಸಮಾನತೆ ಕುರಿತು ಈ ಭಾಗದ ಜನರಲ್ಲಿ ಜಾಗೃತಿ ಮೂಡಿಸಲು 3ಸಾವಿರ ಕಲಾವಿದರ ತಂಡ ಜಾಗೃತಿ ಜಾಥಾ ನಡೆಸಲಿದ್ದು ಜೂ.24ರಂದು ಕವಿತಾಳಕ್ಕೆ ಬರಲಿದೆ ಮತ್ತು 28ರಂದು ರಾಯಚೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.<br /> <br /> ತಾವು ನಡೆಸುತ್ತಿರುವ ಹೋರಾಟ ಯಾವುದೇ ವ್ಯಕ್ತಿ ಅಥವಾ ಸರ್ಕಾರದ ವಿರುದ್ಧ ಅಲ್ಲ 2008ರಿಂದ ಯಾವುದೇ ಅಧಿಕಾರ ಇಲ್ಲದಿದ್ದರೂ ಹೋರಾಟ ನಡೆಸಿದ್ದೇನೆ ಎಂದರು. ಮುಖಂಡರಾದ ರಜಾಕ್ ಉಸ್ತಾದ್, ಬಿ.ಎ.ಕರೀಂಸಾಬ್, ವಿಜಯಭಾಸ್ಕರ ಕೋಸ್ಗಿ, ಅಮರೇಶ ದಿನ್ನಿ, ಬಸಲಿಂಗಯ್ಯ, ನಾಗರಾಜ ಹೂಗಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ: </strong>1956–2015ರ ವರೆಗೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಸರ್ಕಾರಗಳು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ತಾರತಮ್ಯ ನೀತಿ ಅನುಸರಿಸಿವೆ ಈ ಕುರಿತು ನಂಜುಂಡಪ್ಪ ವರದಿಯಲ್ಲಿ ಸ್ಪಷ್ಟ ಮಾಹಿತಿ ಇದೆ ಎಂದು ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು.<br /> <br /> ಪಟ್ಟಣದ ಕಲ್ಮಠಕ್ಕೆ ಭಾನುವಾರ ಭೇಟಿ ನೀಡಿದ ಅವರು ಜೂ.26ರಂದು ಕವಿತಾಳಕ್ಕೆ ಬರುವ ಜನ ಜಾಗೃತಿ ಜಾಥಾ ಕುರಿತು ಬಸವಲಿಂಗ ಸ್ವಾಮೀಜಿ ಜೊತೆ ಚರ್ಚಿಸಿ ನಂತರ ಮಾತನಾಡಿದರು.<br /> <br /> ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು ಎನ್ನುವುದು ನಮ್ಮ ಪ್ರಥಮ ಬೇಡಿಕೆ ಅದು ಈಡೇರದಿದ್ದರೆ ಪ್ರತ್ಯೇಕ ರಾಜ್ಯದ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.<br /> <br /> ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಂದಾಜು 7,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಅದರ ದುಷ್ಪರಿಣಾಮಗಳನ್ನು ಎದುರಿಸುತ್ತಿರುವ ಈ ಭಾಗದ ಜಿಲ್ಲೆಗಳ ಜನರಿಗೆ ನೀಡುತ್ತಿರುವುದು ಕೇವಲ ಶೇ30ರಷ್ಟು ವಿದ್ಯುತ್ ಮಾತ್ರ ಉಳಿದ ವಿದ್ಯುತ್ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನೀಡಲಾಗುತ್ತಿದೆ.<br /> <br /> ಉಡುಪಿ ಜಿಲ್ಲೆಯಲ್ಲಿ ಅಂದಾಜು 600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಆ ಜಿಲ್ಲೆಗೆ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಒದಗಿಸಲಾಗುತ್ತಿದೆ ಇದು ಸರ್ಕಾರಗಳ ತಾರತಮ್ಯ ನೀತಿಗೆ ಒಂದು ಉದಾಹರಣೆ ಮಾತ್ರ ಎಂದರು.<br /> <br /> ಕೃಷ್ಣಾ, ತುಂಗಭದ್ರ, ಘಟಪ್ರಭಾ ಮತ್ತು ಭೀಮಾ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಅಂದಾಜು 1056 ಟಿ.ಎಂ.ಸಿ. ನೀರು ಹಂಚಿಕೆಯಾಗಿದ್ದು ಸರ್ಕಾರಗಳು ಎಷ್ಟು ಪ್ರಮಾಣದ ನೀರನ್ನು ಸದ್ಬಳಕೆ ಮಾಡಿಕೊಂಡಿವೆ ಎಂದು ಸ್ಪಷ್ಟಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.<br /> <br /> ಕರ್ನಾಟಕ ಏಕೀಕರಣದ ನಂತರ ಉತ್ತರ ಕರ್ನಾಟಕ ಮತ್ತು ರಾಜ್ಯದ ಉಳಿದ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರಗಳು ಖರ್ಚು ಮಾಡಿದ ಹಣದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.<br /> <br /> ಪ್ರಾದೇಶಿಕ ಅಸಮಾನತೆ ಕುರಿತು ಈ ಭಾಗದ ಜನರಲ್ಲಿ ಜಾಗೃತಿ ಮೂಡಿಸಲು 3ಸಾವಿರ ಕಲಾವಿದರ ತಂಡ ಜಾಗೃತಿ ಜಾಥಾ ನಡೆಸಲಿದ್ದು ಜೂ.24ರಂದು ಕವಿತಾಳಕ್ಕೆ ಬರಲಿದೆ ಮತ್ತು 28ರಂದು ರಾಯಚೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.<br /> <br /> ತಾವು ನಡೆಸುತ್ತಿರುವ ಹೋರಾಟ ಯಾವುದೇ ವ್ಯಕ್ತಿ ಅಥವಾ ಸರ್ಕಾರದ ವಿರುದ್ಧ ಅಲ್ಲ 2008ರಿಂದ ಯಾವುದೇ ಅಧಿಕಾರ ಇಲ್ಲದಿದ್ದರೂ ಹೋರಾಟ ನಡೆಸಿದ್ದೇನೆ ಎಂದರು. ಮುಖಂಡರಾದ ರಜಾಕ್ ಉಸ್ತಾದ್, ಬಿ.ಎ.ಕರೀಂಸಾಬ್, ವಿಜಯಭಾಸ್ಕರ ಕೋಸ್ಗಿ, ಅಮರೇಶ ದಿನ್ನಿ, ಬಸಲಿಂಗಯ್ಯ, ನಾಗರಾಜ ಹೂಗಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>