<p><strong>ಧಾರವಾಡ:</strong> ‘ಅಶ್ಲೀಲ, ದ್ವಂದ್ವಾರ್ಥದ ಸಂಭಾಷಣೆಗಳುಳ್ಳ ಸಿನಿಮಾಗಳಿಗೆ ಕಡಿವಾಣ ಹಾಕಬೇಕು. ಇವುಗಳ ಬದಲು ಸಮಾಜ ಬದಲಾಯಿಸುವ, ಜನರನ್ನು ಒಳ್ಳೆಯ ದಾರಿಯತ್ತ ಕೊಂಡೊಯ್ಯುವ ಸಿನಿಮಾಗಳು ಹೆಚ್ಚು ಬರಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.<br /> <br /> ಇಲ್ಲಿಯ ಕರ್ನಾಟಕ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯ ಸರ್ಕಾರದ 2010 ಹಾಗೂ 2011ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> ‘ಕ್ರೌರ್ಯವನ್ನು ವೈಭವೀಕರಿಸುವ ಚಿತ್ರಗಳೂ ಸೇರಿದಂತೆ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವ ಸಿನಿಮಾಗಳೂ ಬೇಡ. ಸಮಾಜವನ್ನು ಬದಲಾಯಿಸುವ ಕಥಾವಸ್ತುವುಳ್ಳ ಸಿನಿಮಾಗಳು ಹೆಚ್ಚು ಸಂಖ್ಯೆಯಲ್ಲಿ ಬರಬೇಕು.<br /> <br /> ಇಂಥ ಚಿತ್ರಗಳಿಗೆ ನಮ್ಮ ಸರ್ಕಾರ ಹೆಚ್ಚು ಉತ್ತೇಜನ ನೀಡುತ್ತದೆ. ನಮ್ಮ ಬದುಕು, ಸಂಸ್ಕೃತಿ ಇತಿಹಾಸ, ಮೌಲ್ಯಗಳನ್ನು ಹಿಡಿದಿಡುವ ಸಿನಿಮಾಗಳು ಬೇಕು. ಏಕೆಂದರೆ ಸಿನಿಮಾ ಅತ್ಯಂತ ಪ್ರಭಾವಿ ಮಾಧ್ಯಮವಾಗಿದೆ’ ಎಂದರು.<br /> <br /> ‘ನಮ್ಮ ಸರ್ಕಾರ ಬಂದ ಮೇಲೆ 100 ಸಿನಿಮಾಗಳಿಗೆ ತಲಾ ₨ 10 ಲಕ್ಷ ಸಹಾಯಧನವನ್ನು ನೀಡಲು ನಿರ್ಧರಿಸಲಾಗಿದೆ. ಇದಕ್ಕೂ ಮುನ್ನ 75 ಸಿನಿಮಾಗಳಿಗೆ ಸಹಾಯ ಧನ ನೀಡಲಾಗುತ್ತಿತ್ತು. ಚಿತ್ರೋದ್ಯಮಕ್ಕೆ ಅಗತ್ಯವಿರುವ ಎಲ್ಲ ಬಗೆಯ ಸಹಾಯವನ್ನು ನೀಡಲು ಸರ್ಕಾರ ಸಿದ್ಧವಿದೆ’ ಎಂದರು.<br /> <br /> <strong>ಪ್ರೀತಿ ಮರೆಯಲಾಗದು; ಪುನೀತ್</strong><br /> 2010ನೇ ಸಾಲಿನ ಅತ್ಯುತ್ತಮ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪುನಿತ್ ರಾಜಕುಮಾರ್, ‘ನನಗೆ ಅತ್ಯಂತ ದೊಡ್ಡ ಪ್ರಶಸ್ತಿ ನೀಡಿದ್ದಕ್ಕಾಗಿ ತುಂಬಾ ಸಂತೋಷವಾಗಿದೆ. ನೀವು ಕನ್ನಡ ಚಿತ್ರರಂಗದ ಮೇಲೆ ಇಟ್ಟ ಪ್ರೀತಿ ವಿಶ್ವಾಸವನ್ನು ಮರೆಯಲಾಗುವುದಿಲ್ಲ’ ಎಂದು ಭಾವುಕರಾಗಿ ನುಡಿದರು.<br /> <br /> 2010ನೇ ಸಾಲಿನ ಡಾ.ರಾಜಕುಮಾರ್ ಪ್ರಶಸ್ತಿಯನ್ನು ಎಸ್.ಶಿವರಾಂ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಭಾರ್ಗವ, ಅತ್ಯುತ್ತಮ ನಟಿ ಪ್ರಶಸ್ತಿಯನ್ನು ನಟಿ, ಸಂಸದೆ ರಮ್ಯಾ ಸ್ವೀಕರಿಸಿದರು. ಡಾ.ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಬೇಕಿದ್ದ ಅಂಬರೀಷ್ ಗೈರುಹಾಜರಾಗಿದ್ದರು.<br /> 2011ನೇ ಸಾಲಿನ ಡಾ.ರಾಜಕುಮಾರ್ ಪ್ರಶಸ್ತಿಯನ್ನು ಹಂಸಲೇಖ, ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಅನಂತನಾಗ್, ಅತ್ಯುತ್ತಮ ನಟ ಪ್ರಶಸ್ತಿಯನ್ನು ಅರ್ಜುನ್ ಸರ್ಜಾ, ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಭಾವನಾ ಸ್ವೀಕರಿಸಿದರು.<br /> <br /> ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ಡಿ.ರಾಜೇಂದ್ರ ಬಾಬು ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪತ್ನಿ ಸುಮಿತ್ರಾ ಪ್ರಶಸ್ತಿ ಸ್ವೀಕರಿಸಿದರು. ಅತ್ಯುತ್ತಮ ಗೀತೆ ರಚನೆಕಾರ ಪ್ರಶಸ್ತಿ ಸ್ವೀಕರಿಸಬೇಕಿದ್ದ ಡಾ.ಬರಗೂರು ರಾಮಚಂದ್ರಪ್ಪ ಹಾಗೂ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಗೆ ಆಯ್ಕೆಯಾಗಿದ್ದ ಅಗ್ನಿ ಶ್ರೀಧರ್ ಗೈರು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಅಶ್ಲೀಲ, ದ್ವಂದ್ವಾರ್ಥದ ಸಂಭಾಷಣೆಗಳುಳ್ಳ ಸಿನಿಮಾಗಳಿಗೆ ಕಡಿವಾಣ ಹಾಕಬೇಕು. ಇವುಗಳ ಬದಲು ಸಮಾಜ ಬದಲಾಯಿಸುವ, ಜನರನ್ನು ಒಳ್ಳೆಯ ದಾರಿಯತ್ತ ಕೊಂಡೊಯ್ಯುವ ಸಿನಿಮಾಗಳು ಹೆಚ್ಚು ಬರಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.<br /> <br /> ಇಲ್ಲಿಯ ಕರ್ನಾಟಕ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯ ಸರ್ಕಾರದ 2010 ಹಾಗೂ 2011ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> ‘ಕ್ರೌರ್ಯವನ್ನು ವೈಭವೀಕರಿಸುವ ಚಿತ್ರಗಳೂ ಸೇರಿದಂತೆ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವ ಸಿನಿಮಾಗಳೂ ಬೇಡ. ಸಮಾಜವನ್ನು ಬದಲಾಯಿಸುವ ಕಥಾವಸ್ತುವುಳ್ಳ ಸಿನಿಮಾಗಳು ಹೆಚ್ಚು ಸಂಖ್ಯೆಯಲ್ಲಿ ಬರಬೇಕು.<br /> <br /> ಇಂಥ ಚಿತ್ರಗಳಿಗೆ ನಮ್ಮ ಸರ್ಕಾರ ಹೆಚ್ಚು ಉತ್ತೇಜನ ನೀಡುತ್ತದೆ. ನಮ್ಮ ಬದುಕು, ಸಂಸ್ಕೃತಿ ಇತಿಹಾಸ, ಮೌಲ್ಯಗಳನ್ನು ಹಿಡಿದಿಡುವ ಸಿನಿಮಾಗಳು ಬೇಕು. ಏಕೆಂದರೆ ಸಿನಿಮಾ ಅತ್ಯಂತ ಪ್ರಭಾವಿ ಮಾಧ್ಯಮವಾಗಿದೆ’ ಎಂದರು.<br /> <br /> ‘ನಮ್ಮ ಸರ್ಕಾರ ಬಂದ ಮೇಲೆ 100 ಸಿನಿಮಾಗಳಿಗೆ ತಲಾ ₨ 10 ಲಕ್ಷ ಸಹಾಯಧನವನ್ನು ನೀಡಲು ನಿರ್ಧರಿಸಲಾಗಿದೆ. ಇದಕ್ಕೂ ಮುನ್ನ 75 ಸಿನಿಮಾಗಳಿಗೆ ಸಹಾಯ ಧನ ನೀಡಲಾಗುತ್ತಿತ್ತು. ಚಿತ್ರೋದ್ಯಮಕ್ಕೆ ಅಗತ್ಯವಿರುವ ಎಲ್ಲ ಬಗೆಯ ಸಹಾಯವನ್ನು ನೀಡಲು ಸರ್ಕಾರ ಸಿದ್ಧವಿದೆ’ ಎಂದರು.<br /> <br /> <strong>ಪ್ರೀತಿ ಮರೆಯಲಾಗದು; ಪುನೀತ್</strong><br /> 2010ನೇ ಸಾಲಿನ ಅತ್ಯುತ್ತಮ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪುನಿತ್ ರಾಜಕುಮಾರ್, ‘ನನಗೆ ಅತ್ಯಂತ ದೊಡ್ಡ ಪ್ರಶಸ್ತಿ ನೀಡಿದ್ದಕ್ಕಾಗಿ ತುಂಬಾ ಸಂತೋಷವಾಗಿದೆ. ನೀವು ಕನ್ನಡ ಚಿತ್ರರಂಗದ ಮೇಲೆ ಇಟ್ಟ ಪ್ರೀತಿ ವಿಶ್ವಾಸವನ್ನು ಮರೆಯಲಾಗುವುದಿಲ್ಲ’ ಎಂದು ಭಾವುಕರಾಗಿ ನುಡಿದರು.<br /> <br /> 2010ನೇ ಸಾಲಿನ ಡಾ.ರಾಜಕುಮಾರ್ ಪ್ರಶಸ್ತಿಯನ್ನು ಎಸ್.ಶಿವರಾಂ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಭಾರ್ಗವ, ಅತ್ಯುತ್ತಮ ನಟಿ ಪ್ರಶಸ್ತಿಯನ್ನು ನಟಿ, ಸಂಸದೆ ರಮ್ಯಾ ಸ್ವೀಕರಿಸಿದರು. ಡಾ.ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಬೇಕಿದ್ದ ಅಂಬರೀಷ್ ಗೈರುಹಾಜರಾಗಿದ್ದರು.<br /> 2011ನೇ ಸಾಲಿನ ಡಾ.ರಾಜಕುಮಾರ್ ಪ್ರಶಸ್ತಿಯನ್ನು ಹಂಸಲೇಖ, ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಅನಂತನಾಗ್, ಅತ್ಯುತ್ತಮ ನಟ ಪ್ರಶಸ್ತಿಯನ್ನು ಅರ್ಜುನ್ ಸರ್ಜಾ, ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಭಾವನಾ ಸ್ವೀಕರಿಸಿದರು.<br /> <br /> ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ಡಿ.ರಾಜೇಂದ್ರ ಬಾಬು ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪತ್ನಿ ಸುಮಿತ್ರಾ ಪ್ರಶಸ್ತಿ ಸ್ವೀಕರಿಸಿದರು. ಅತ್ಯುತ್ತಮ ಗೀತೆ ರಚನೆಕಾರ ಪ್ರಶಸ್ತಿ ಸ್ವೀಕರಿಸಬೇಕಿದ್ದ ಡಾ.ಬರಗೂರು ರಾಮಚಂದ್ರಪ್ಪ ಹಾಗೂ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಗೆ ಆಯ್ಕೆಯಾಗಿದ್ದ ಅಗ್ನಿ ಶ್ರೀಧರ್ ಗೈರು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>