<p><strong>ಬಂಟ್ವಾಳ: </strong>ಲೋಕಸಭಾ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕಾರ್ಯ ಆರಂಭವಾಗಿದೆ. ಇದೀಗ ಜಾರಿಯಲ್ಲಿರುವ ‘ಚುನಾವಣಾ ನೀತಿ ಸಂಹಿತೆ’ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಬರುತ್ತಿರುವ ಆರೋಪಗಳು ಮತ್ತು ದೂರುಗಳು ಇಲ್ಲಿನ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರನ್ನು ಬೇಸ್ತು ಬೀಳಿಸತೊಡಗಿದೆ.<br /> <br /> ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿ ಎ.ವಿ.ಗಣೇಶ್ ಅವರು ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಬುಧವಾರ ಸಂಜೆ ಕರೆದಿದ್ದ ಗುತ್ತಿಗೆ ಆಧಾರಿತ ಪಂಪ್ ಆಪರೇಟರ್ಗಳ ಸಭೆಗೆ ಚುನಾವಣಾ ಅಧಿಕಾರಿಗಳು ಧಾವಿಸಿ ಬಳಿಕ ವಾಪಾಸಾಗಿದ್ದಾರೆ.<br /> <br /> ಆರಂಭದಲ್ಲಿ ಬಂಟ್ವಾಳ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿಗೆ ದೂರವಾಣಿ ಕರೆಯೊಂದು ಬಂದಿದ್ದು, ಬಂಟ್ವಾಳ ಪುರಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ ಬಗ್ಗೆ ರಾಜಕೀಯ ಪ್ರೇರಿತ ಸಭೆ ನಡೆಯುತ್ತಿದೆ ಎಂದು ಆರೋಪಿಸಲಾಗಿತ್ತು.<br /> <br /> ಈ ಬಗ್ಗೆ ಕಂದಾಯ ಇಲಾಖೆ ಸಿಬ್ಬಂದಿಯನ್ನು ಕಳುಹಿಸಿದಾಗ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಿಬ್ಬಂದಿ ಚರ್ಚೆ ನಡೆಯುತ್ತಿರುವುದು ಕಂಡು ಬಂದಿದೆ. ಕುಡಿಯುವ ನೀರಿನ ಪೂರೈಕೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲವಾದರೂ ಚುನಾವಣೆ ವೇಳೆ ಈ ಬಗ್ಗೆ (ಮೂಲಸೌಕರ್ಯ)ಸಾಕಷ್ಟು ದೂರುಗಳು ಬರುವ ನಿರೀಕ್ಷೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಭೆ ನಡೆಸಲಾಗಿದೆ ಎಂದು ಮುಖ್ಯಾಧಿಕಾರಿ ಅವರು ತಹಶೀಲ್ದಾರರಿಗೆ ಸ್ಪಷ್ಟಪಡಿಸಿದ್ದಾರೆ.<br /> <br /> ಕಳೆದ ಪುರಸಭೆ ಚುನಾವಣೆ ವೇಳೆ ಇಲ್ಲಿನ ಚಂಡ್ತಿಮಾರು ಪರಿಶಿಷ್ಟ ಕಾಲೊನಿಗೆ ಮಂಜೂರಾದ ಸ್ಟೀಲು ಕಪಾಟು ವಿತರಣೆ ಮಾಡಿರುವ ಪ್ರಕರಣದಲ್ಲಿ ಅಂದಿನ ಮುಖ್ಯಾಧಿಕಾರಿ ಆರ್.ವಿ.ಜತ್ತನ್ನ ಅಮಾನತುಗೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು. <br /> <br /> ಇನ್ನೊಂದೆಡೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಸಮೀಪದ ಮಣಿ ಎಂಬಲ್ಲಿ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ ಅವರು ಇತ್ತೀಚೆಗೆ ರಾತ್ರೋರಾತ್ರಿ ಕೊಳವೆ ಬಾವಿ ತೋಡಿಸುತ್ತಿದ್ದಾರೆ ಎಂಬ ದೂರು ಬಂದಿದ್ದು, ಅಲ್ಲಿಯೂ ಅವರ ಸ್ವಂತ ಜಮೀನಿನಲ್ಲಿ ಕೊಳವೆ ಬಾವಿ ಕೊರೆದಿರುವುದು ಕಂಡು ಬಂದಿದೆ. ಕಳೆದ ಶನಿವಾರ ಕಲ್ಲಡ್ಕದಲ್ಲಿ ನಡೆದ ಕಾಂಗ್ರೆಸ್ ಸಾಮರಸ್ಯ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಉಪಸ್ಥಿತಿಯಲ್ಲಿ ಸ್ಥಳೀಯ ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಅವರು ಆರ್ಎಸ್ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ಟರ ವಿರುದ್ಧ ವೈಯಕ್ತಿಕ ನಿಂದನೆ ಮಾಡಿರುವ ಬಗ್ಗೆಯೂ ದೂರುಗಳು ಬಂದಿದ್ದರೂ, ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ.<br /> <br /> ಈ ನಡುವೆ ಕಳೆದ ಭಾನುವಾರ ಪುಂಜಾಲಕಟ್ಟೆಯಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು, ಕಾಂಗ್ರೆಸ್ ಅಭ್ಯರ್ಥಿ ಬಿ.ಜನಾರ್ದನ ಪೂಜಾರಿ, ಆರ್ಎಸ್ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಮತ್ತಿತರರು ಭಾಷಣ ಮಾಡಿರುವ ಬಗ್ಗೆಯೂ ಚುನಾವಣಾಧಿಕಾರಿಗಳು ವೀಡಿಯೋ ಪರಿಶೀಲನೆ ನಡೆಸಿದ್ದು, ಅಲ್ಲಿ ರಾಜಕೀಯ ಭಾಷಣ ಕಂಡು ಬಂದಿಲ್ಲ ಎಂದು ಚುನಾವಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆಲವೊಂದು ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮತ್ತು ಹಣ ಹಂಚಿಕೆ ಹಾಗೂ ವಾಹನದಲ್ಲಿ ಹಣದ ಕಂತೆ ಸಾಗಾಟ ಮಾಡಲಾಗುತ್ತಿದೆ ಎಂಬ ನಕಲಿ ಕರೆಗಳು ಪೊಲೀಸರನ್ನು ಸಾಕಷ್ಟು ಬಾರಿ ಬೇಸ್ತು ಬೀಳಿಸಿವೆ ಎಂಬುದು ಇಲ್ಲಿನ ಪೊಲೀಸರ ಅಳಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ: </strong>ಲೋಕಸಭಾ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕಾರ್ಯ ಆರಂಭವಾಗಿದೆ. ಇದೀಗ ಜಾರಿಯಲ್ಲಿರುವ ‘ಚುನಾವಣಾ ನೀತಿ ಸಂಹಿತೆ’ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಬರುತ್ತಿರುವ ಆರೋಪಗಳು ಮತ್ತು ದೂರುಗಳು ಇಲ್ಲಿನ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರನ್ನು ಬೇಸ್ತು ಬೀಳಿಸತೊಡಗಿದೆ.<br /> <br /> ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿ ಎ.ವಿ.ಗಣೇಶ್ ಅವರು ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಬುಧವಾರ ಸಂಜೆ ಕರೆದಿದ್ದ ಗುತ್ತಿಗೆ ಆಧಾರಿತ ಪಂಪ್ ಆಪರೇಟರ್ಗಳ ಸಭೆಗೆ ಚುನಾವಣಾ ಅಧಿಕಾರಿಗಳು ಧಾವಿಸಿ ಬಳಿಕ ವಾಪಾಸಾಗಿದ್ದಾರೆ.<br /> <br /> ಆರಂಭದಲ್ಲಿ ಬಂಟ್ವಾಳ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿಗೆ ದೂರವಾಣಿ ಕರೆಯೊಂದು ಬಂದಿದ್ದು, ಬಂಟ್ವಾಳ ಪುರಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ ಬಗ್ಗೆ ರಾಜಕೀಯ ಪ್ರೇರಿತ ಸಭೆ ನಡೆಯುತ್ತಿದೆ ಎಂದು ಆರೋಪಿಸಲಾಗಿತ್ತು.<br /> <br /> ಈ ಬಗ್ಗೆ ಕಂದಾಯ ಇಲಾಖೆ ಸಿಬ್ಬಂದಿಯನ್ನು ಕಳುಹಿಸಿದಾಗ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಿಬ್ಬಂದಿ ಚರ್ಚೆ ನಡೆಯುತ್ತಿರುವುದು ಕಂಡು ಬಂದಿದೆ. ಕುಡಿಯುವ ನೀರಿನ ಪೂರೈಕೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲವಾದರೂ ಚುನಾವಣೆ ವೇಳೆ ಈ ಬಗ್ಗೆ (ಮೂಲಸೌಕರ್ಯ)ಸಾಕಷ್ಟು ದೂರುಗಳು ಬರುವ ನಿರೀಕ್ಷೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಭೆ ನಡೆಸಲಾಗಿದೆ ಎಂದು ಮುಖ್ಯಾಧಿಕಾರಿ ಅವರು ತಹಶೀಲ್ದಾರರಿಗೆ ಸ್ಪಷ್ಟಪಡಿಸಿದ್ದಾರೆ.<br /> <br /> ಕಳೆದ ಪುರಸಭೆ ಚುನಾವಣೆ ವೇಳೆ ಇಲ್ಲಿನ ಚಂಡ್ತಿಮಾರು ಪರಿಶಿಷ್ಟ ಕಾಲೊನಿಗೆ ಮಂಜೂರಾದ ಸ್ಟೀಲು ಕಪಾಟು ವಿತರಣೆ ಮಾಡಿರುವ ಪ್ರಕರಣದಲ್ಲಿ ಅಂದಿನ ಮುಖ್ಯಾಧಿಕಾರಿ ಆರ್.ವಿ.ಜತ್ತನ್ನ ಅಮಾನತುಗೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು. <br /> <br /> ಇನ್ನೊಂದೆಡೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಸಮೀಪದ ಮಣಿ ಎಂಬಲ್ಲಿ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ ಅವರು ಇತ್ತೀಚೆಗೆ ರಾತ್ರೋರಾತ್ರಿ ಕೊಳವೆ ಬಾವಿ ತೋಡಿಸುತ್ತಿದ್ದಾರೆ ಎಂಬ ದೂರು ಬಂದಿದ್ದು, ಅಲ್ಲಿಯೂ ಅವರ ಸ್ವಂತ ಜಮೀನಿನಲ್ಲಿ ಕೊಳವೆ ಬಾವಿ ಕೊರೆದಿರುವುದು ಕಂಡು ಬಂದಿದೆ. ಕಳೆದ ಶನಿವಾರ ಕಲ್ಲಡ್ಕದಲ್ಲಿ ನಡೆದ ಕಾಂಗ್ರೆಸ್ ಸಾಮರಸ್ಯ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಉಪಸ್ಥಿತಿಯಲ್ಲಿ ಸ್ಥಳೀಯ ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಅವರು ಆರ್ಎಸ್ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ಟರ ವಿರುದ್ಧ ವೈಯಕ್ತಿಕ ನಿಂದನೆ ಮಾಡಿರುವ ಬಗ್ಗೆಯೂ ದೂರುಗಳು ಬಂದಿದ್ದರೂ, ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ.<br /> <br /> ಈ ನಡುವೆ ಕಳೆದ ಭಾನುವಾರ ಪುಂಜಾಲಕಟ್ಟೆಯಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು, ಕಾಂಗ್ರೆಸ್ ಅಭ್ಯರ್ಥಿ ಬಿ.ಜನಾರ್ದನ ಪೂಜಾರಿ, ಆರ್ಎಸ್ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಮತ್ತಿತರರು ಭಾಷಣ ಮಾಡಿರುವ ಬಗ್ಗೆಯೂ ಚುನಾವಣಾಧಿಕಾರಿಗಳು ವೀಡಿಯೋ ಪರಿಶೀಲನೆ ನಡೆಸಿದ್ದು, ಅಲ್ಲಿ ರಾಜಕೀಯ ಭಾಷಣ ಕಂಡು ಬಂದಿಲ್ಲ ಎಂದು ಚುನಾವಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆಲವೊಂದು ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮತ್ತು ಹಣ ಹಂಚಿಕೆ ಹಾಗೂ ವಾಹನದಲ್ಲಿ ಹಣದ ಕಂತೆ ಸಾಗಾಟ ಮಾಡಲಾಗುತ್ತಿದೆ ಎಂಬ ನಕಲಿ ಕರೆಗಳು ಪೊಲೀಸರನ್ನು ಸಾಕಷ್ಟು ಬಾರಿ ಬೇಸ್ತು ಬೀಳಿಸಿವೆ ಎಂಬುದು ಇಲ್ಲಿನ ಪೊಲೀಸರ ಅಳಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>