<p><strong>ಬೆಂಗಳೂರು:</strong> ‘ದೇಶದಲ್ಲಿ ಜಾತಿ ಹಾಗೂ ಧರ್ಮ ಲಾಬಿಗಳ ನಡುವೆ ಅಭಿವೃದ್ಧಿಗಾಗಿ ಮಹಿಳೆಯರು ಲಾಬಿ ಮಾಡಬೇಕು’ ಎಂದು ಮಣಿಪಾಲ ಗ್ಲೋಬಲ್ ಎಜುಕೇಷನ್ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನದಾಸ್ ಪೈ ತಿಳಿಸಿದರು.<br /> <br /> ಮಹಿಳಾ ಉದ್ಯಮಿಗಳ ಮಹಾ ಒಕ್ಕೂಟದ ರಾಜ್ಯ ಶಾಖೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> ‘ಮಹಿಳೆಯರು ಅವಕಾಶಗಳನ್ನು ಪಡೆಯಲು ಹಾಗೂ ಸವಾಲುಗಳನ್ನು ಎದುರಿಸಿ ನಿಲ್ಲಲು ಸ್ವಲ್ಪ ಮಟ್ಟಿಗೆ ಲಾಬಿ ಮಾಡಬೇಕಿದೆ’ ಎಂದು ತಿಳಿಸಿದರು.<br /> <br /> ‘ಚೀನಾದಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಮಹಿಳಾ ಉದ್ಯೋಗಿಗಳು ದುಡಿಯುತ್ತಿರುವುದರಿಂದ ಆರ್ಥಿಕ ಅಭಿವೃದ್ಧಿ ಶರವೇಗದಲ್ಲಿ ಸಾಗಿದೆ. ದೇಶದಲ್ಲಿ ಮಹಿಳೆಯರಿಗೆ ಉತ್ತಮ ಶಿಕ್ಷಣ ದೊರೆಯುತ್ತಿದ್ದರೂ, ಉದ್ಯೋಗ ವಲಯದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಿದೆ’ ಎಂದು ಪೈ ಹೇಳಿದರು.<br /> <br /> ‘ಮಹಿಳೆಯರು ಸಂಘಟಿತರಾದಾಗ ಮಾತ್ರ ಸವಾಲುಗಳನ್ನು ದಿಟ್ಟತನದಿಂದ ಎದುರಿಸಲು ಸಾಧ್ಯ’ ಎಂದು ಅವರು ನುಡಿದರು.<br /> ಬಿ–ಪ್ಯಾಕ್ನ ರೇವತಿ ಅಶೋಕ್, ‘ನಗರ ಹಾಗೂ ಗ್ರಾಮೀಣ ಭಾಗದ ಮಹಿಳೆಯರ ಸಮಸ್ಯೆಗಳು ವಿಭಿನ್ನವಾಗಿದ್ದು, ಅವುಗಳಿಗೆ ಸೂಕ್ತ ಪರಿಹಾರ ಕಂಡುಹಿಡಿಯುವ ಅಗತ್ಯವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದಲ್ಲಿ ಜಾತಿ ಹಾಗೂ ಧರ್ಮ ಲಾಬಿಗಳ ನಡುವೆ ಅಭಿವೃದ್ಧಿಗಾಗಿ ಮಹಿಳೆಯರು ಲಾಬಿ ಮಾಡಬೇಕು’ ಎಂದು ಮಣಿಪಾಲ ಗ್ಲೋಬಲ್ ಎಜುಕೇಷನ್ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನದಾಸ್ ಪೈ ತಿಳಿಸಿದರು.<br /> <br /> ಮಹಿಳಾ ಉದ್ಯಮಿಗಳ ಮಹಾ ಒಕ್ಕೂಟದ ರಾಜ್ಯ ಶಾಖೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> ‘ಮಹಿಳೆಯರು ಅವಕಾಶಗಳನ್ನು ಪಡೆಯಲು ಹಾಗೂ ಸವಾಲುಗಳನ್ನು ಎದುರಿಸಿ ನಿಲ್ಲಲು ಸ್ವಲ್ಪ ಮಟ್ಟಿಗೆ ಲಾಬಿ ಮಾಡಬೇಕಿದೆ’ ಎಂದು ತಿಳಿಸಿದರು.<br /> <br /> ‘ಚೀನಾದಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಮಹಿಳಾ ಉದ್ಯೋಗಿಗಳು ದುಡಿಯುತ್ತಿರುವುದರಿಂದ ಆರ್ಥಿಕ ಅಭಿವೃದ್ಧಿ ಶರವೇಗದಲ್ಲಿ ಸಾಗಿದೆ. ದೇಶದಲ್ಲಿ ಮಹಿಳೆಯರಿಗೆ ಉತ್ತಮ ಶಿಕ್ಷಣ ದೊರೆಯುತ್ತಿದ್ದರೂ, ಉದ್ಯೋಗ ವಲಯದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಿದೆ’ ಎಂದು ಪೈ ಹೇಳಿದರು.<br /> <br /> ‘ಮಹಿಳೆಯರು ಸಂಘಟಿತರಾದಾಗ ಮಾತ್ರ ಸವಾಲುಗಳನ್ನು ದಿಟ್ಟತನದಿಂದ ಎದುರಿಸಲು ಸಾಧ್ಯ’ ಎಂದು ಅವರು ನುಡಿದರು.<br /> ಬಿ–ಪ್ಯಾಕ್ನ ರೇವತಿ ಅಶೋಕ್, ‘ನಗರ ಹಾಗೂ ಗ್ರಾಮೀಣ ಭಾಗದ ಮಹಿಳೆಯರ ಸಮಸ್ಯೆಗಳು ವಿಭಿನ್ನವಾಗಿದ್ದು, ಅವುಗಳಿಗೆ ಸೂಕ್ತ ಪರಿಹಾರ ಕಂಡುಹಿಡಿಯುವ ಅಗತ್ಯವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>