<p><strong>ಲಕ್ಷ್ಮೇಶ್ವರ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಶಿಕ್ಷಣದ ಅವಶ್ಯಕತೆ ಇದೆ. ಆದರೆ ಅದರೊಂದಿಗೆ ಯುವ ಜನತೆಯಲ್ಲಿ ನೈತಿಕತೆ ಹೊಣೆಗಾರಿಕೆ ಬೆಳೆಸುವ ಶಿಕ್ಷಣವನ್ನು ಬೋಧಿಸಬೇಕು’ ಎಂದು ಮುಂಬೈನ ರಾಮಕೃಷ್ಣ ಮಿಷನ್ನ ಸರ್ವಲೋಕಾನಂದ ಸ್ವಾಮೀಜಿ ಹೇಳಿದರು.<br /> <br /> ಅಗಡಿ ತಾಂತ್ರಿಕ ಮತ್ತು ಎಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ 10ನೇ ವಾರ್ಷಿಕೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.<br /> <br /> ‘ಆಧ್ಯಾತ್ಮಿಕ ತಳಹದಿಯ ಮೇಲೆ ನಿರ್ಮಾಣವಾಗಿರುವ ಭಾರತಕ್ಕೆ ಜಗತ್ತಿನ ಯಾವ ರಾಷ್ಟ್ರವೂ ಸರಿ ಸಮಾನ ಆಗಲಾರದು. ಇಂದಿನ ಯುವ ಜನತೆ ಈ ಸತ್ಯವನ್ನು ಸದಾ ನೆನಪಿನಲ್ಲಿ ಇಟ್ಟುಕೊಂಡು ತಾಯಿ ನಾಡಿನ ಋಣ ತೀರಿಸಲು ನಿಷ್ಠೆಯಿಂದ ದೇಶ ಸೇವೆ ಮಾಡಲು ಮುಂದಾಗಬೇಕು. ಗ್ರಾಮೀಣ ಪ್ರದೇಶವಾಗಿರುವ ಲಕ್ಷ್ಮೇಶ್ವರದಲ್ಲಿ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಿರುವ ಅಗಡಿ ಕುಟುಂಬದ ಸಾಧನೆ ನಿಜಕ್ಕೂ ಇತರರಿಗೆ ಮಾದರಿ ಆಗಿದೆ’ ಎಂದರು.<br /> <br /> ಮುಂಬೈನ ಡಿಸಿಡಬ್ಲು ಸಾಫ್ಟ್ವೇರ್ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಮುದಿತ್ ಜೈನ್ ಮಾತನಾಡಿ, ‘ಮನುಷ್ಯನ ಬದುಕು ಸುಖದ ದಾರಿ ಅಲ್ಲ. ನಿರಂತರ ದುಡಿಮೆ ಹಾಗೂ ಪರಿಶ್ರಮ ಪಡುವವರಿಗೆ ಮಾತ್ರ ಈ ಜೀವನ ಸುಖ ನೀಡಬಲ್ಲದು. ಕೇವಲ ತಾಂತ್ರಿಕ ಶಿಕ್ಷಣ ಪಡೆಯುವುದೊಂದೇ ವಿದ್ಯಾರ್ಥಿಗಳ ಗುರಿಯಾಗಿರದೆ ಅದರೊಂದಿಗೆ ಜನ ಸೇವೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು. ಅಗಡಿ ಕಾಲೇಜಿನಲ್ಲಿ ವಿದ್ಯೆ ಕಲಿತ ಮಕ್ಕಳಿಗೆ ನಮ್ಮ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಮಾಡಿಕೊಡಲಾಗುವುದು’ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಅಧ್ಯಕ್ಷ ಹರ್ಷವರ್ಧನ ಅಗಡಿ ಮಾತನಾಡಿದರು. ಸಂಸ್ಥೆ ನಿರ್ದೇಶಕ ಡಾ.ಅರುಣ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಕಮಲಮ್ಮ ಅಗಡಿ, ಗೀತಾ ಅಗಡಿ, ಸೇರಿದಂತೆ ಮತ್ತಿತರರು ಹಾಜರಿದ್ದರು. ಡಾ.ಬಿ.ಎಂ. ಅಗಡಿ ಸ್ವಾಗತಿಸಿದರು. ಪ್ರಾಚಾರ್ಯ ಡಾ.ಅಶೋಕ ಛಾಪಗಾಂವ್ ವಾರ್ಷಿಕ ವರದಿ ಮಂಡಿಸಿದರು. ಅನುಶ್ರೀ ಕಿಣಿ ಹಾಗೂ ಭಾಗ್ಯಶ್ರೀ ಮಠದ ನಿರೂಪಿಸಿದರು. ಪ್ರೊ.ಪ್ರಭಾಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಶಿಕ್ಷಣದ ಅವಶ್ಯಕತೆ ಇದೆ. ಆದರೆ ಅದರೊಂದಿಗೆ ಯುವ ಜನತೆಯಲ್ಲಿ ನೈತಿಕತೆ ಹೊಣೆಗಾರಿಕೆ ಬೆಳೆಸುವ ಶಿಕ್ಷಣವನ್ನು ಬೋಧಿಸಬೇಕು’ ಎಂದು ಮುಂಬೈನ ರಾಮಕೃಷ್ಣ ಮಿಷನ್ನ ಸರ್ವಲೋಕಾನಂದ ಸ್ವಾಮೀಜಿ ಹೇಳಿದರು.<br /> <br /> ಅಗಡಿ ತಾಂತ್ರಿಕ ಮತ್ತು ಎಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ 10ನೇ ವಾರ್ಷಿಕೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.<br /> <br /> ‘ಆಧ್ಯಾತ್ಮಿಕ ತಳಹದಿಯ ಮೇಲೆ ನಿರ್ಮಾಣವಾಗಿರುವ ಭಾರತಕ್ಕೆ ಜಗತ್ತಿನ ಯಾವ ರಾಷ್ಟ್ರವೂ ಸರಿ ಸಮಾನ ಆಗಲಾರದು. ಇಂದಿನ ಯುವ ಜನತೆ ಈ ಸತ್ಯವನ್ನು ಸದಾ ನೆನಪಿನಲ್ಲಿ ಇಟ್ಟುಕೊಂಡು ತಾಯಿ ನಾಡಿನ ಋಣ ತೀರಿಸಲು ನಿಷ್ಠೆಯಿಂದ ದೇಶ ಸೇವೆ ಮಾಡಲು ಮುಂದಾಗಬೇಕು. ಗ್ರಾಮೀಣ ಪ್ರದೇಶವಾಗಿರುವ ಲಕ್ಷ್ಮೇಶ್ವರದಲ್ಲಿ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಿರುವ ಅಗಡಿ ಕುಟುಂಬದ ಸಾಧನೆ ನಿಜಕ್ಕೂ ಇತರರಿಗೆ ಮಾದರಿ ಆಗಿದೆ’ ಎಂದರು.<br /> <br /> ಮುಂಬೈನ ಡಿಸಿಡಬ್ಲು ಸಾಫ್ಟ್ವೇರ್ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಮುದಿತ್ ಜೈನ್ ಮಾತನಾಡಿ, ‘ಮನುಷ್ಯನ ಬದುಕು ಸುಖದ ದಾರಿ ಅಲ್ಲ. ನಿರಂತರ ದುಡಿಮೆ ಹಾಗೂ ಪರಿಶ್ರಮ ಪಡುವವರಿಗೆ ಮಾತ್ರ ಈ ಜೀವನ ಸುಖ ನೀಡಬಲ್ಲದು. ಕೇವಲ ತಾಂತ್ರಿಕ ಶಿಕ್ಷಣ ಪಡೆಯುವುದೊಂದೇ ವಿದ್ಯಾರ್ಥಿಗಳ ಗುರಿಯಾಗಿರದೆ ಅದರೊಂದಿಗೆ ಜನ ಸೇವೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು. ಅಗಡಿ ಕಾಲೇಜಿನಲ್ಲಿ ವಿದ್ಯೆ ಕಲಿತ ಮಕ್ಕಳಿಗೆ ನಮ್ಮ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಮಾಡಿಕೊಡಲಾಗುವುದು’ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಅಧ್ಯಕ್ಷ ಹರ್ಷವರ್ಧನ ಅಗಡಿ ಮಾತನಾಡಿದರು. ಸಂಸ್ಥೆ ನಿರ್ದೇಶಕ ಡಾ.ಅರುಣ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಕಮಲಮ್ಮ ಅಗಡಿ, ಗೀತಾ ಅಗಡಿ, ಸೇರಿದಂತೆ ಮತ್ತಿತರರು ಹಾಜರಿದ್ದರು. ಡಾ.ಬಿ.ಎಂ. ಅಗಡಿ ಸ್ವಾಗತಿಸಿದರು. ಪ್ರಾಚಾರ್ಯ ಡಾ.ಅಶೋಕ ಛಾಪಗಾಂವ್ ವಾರ್ಷಿಕ ವರದಿ ಮಂಡಿಸಿದರು. ಅನುಶ್ರೀ ಕಿಣಿ ಹಾಗೂ ಭಾಗ್ಯಶ್ರೀ ಮಠದ ನಿರೂಪಿಸಿದರು. ಪ್ರೊ.ಪ್ರಭಾಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>