<p><strong>ಹುಬ್ಬಳ್ಳಿ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮತ ಮತ್ತು ಒಂದು ಸ್ಥಾನಕ್ಕೂ ಮಹತ್ವ ಇದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಮನವಿ ಮಾಡಿದರು.<br /> <br /> ದೇಶದಲ್ಲಿ ಬದಲಾವಣೆ ತರುವ ಸಲುವಾಗಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಅವರು ರ್ಯಾಲಿಯಲ್ಲಿ ಪ್ರತಿಪಾದಿಸಿದರು.<br /> <br /> ‘1998ರಲ್ಲಿ ಒಂದು ಸ್ಥಾನ ಕೊರತೆ ಬಿದ್ದುದರಿಂದ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಪತನವಾಯಿತು. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷದ ಎ.ಆರ್.ಕೃಷ್ಣಮೂರ್ತಿ ಕೇವಲ ಒಂದು ಮತದಿಂದ ಪರಾಭವಗೊಂಡರು. ಹೀಗಾಗಿ ಒಂದೊಂದು ಮತವೂ ಅಭ್ಯರ್ಥಿಯ ಹಣೆಬರಹವನ್ನು ನಿರ್ಧರಿಸುತ್ತದೆ’ ಎಂದರು.<br /> <br /> ‘ಇದು ಸಂಕ್ರಮಣ ಕಾಲ. ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಎಲ್ಲರೂ ಪ್ರಾರ್ಥನೆ ಮಾಡಬೇಕು. ರಾಜ್ಯದ ಪ್ರತಿ ಮನೆಯಲ್ಲೂ ಮೋದಿ ಜಪ ನಡೆಯಬೇಕು. ಬಿಜೆಪಿಗೆ 272ಕ್ಕೂ ಅಧಿಕ ಸ್ಥಾನಗಳು ಲಭಿಸಬೇಕು ಎಂಬುದಾಗಿ ಪ್ರಾರ್ಥಿಸಿ’ ಎಂದೂ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮತ ಮತ್ತು ಒಂದು ಸ್ಥಾನಕ್ಕೂ ಮಹತ್ವ ಇದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಮನವಿ ಮಾಡಿದರು.<br /> <br /> ದೇಶದಲ್ಲಿ ಬದಲಾವಣೆ ತರುವ ಸಲುವಾಗಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಅವರು ರ್ಯಾಲಿಯಲ್ಲಿ ಪ್ರತಿಪಾದಿಸಿದರು.<br /> <br /> ‘1998ರಲ್ಲಿ ಒಂದು ಸ್ಥಾನ ಕೊರತೆ ಬಿದ್ದುದರಿಂದ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಪತನವಾಯಿತು. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷದ ಎ.ಆರ್.ಕೃಷ್ಣಮೂರ್ತಿ ಕೇವಲ ಒಂದು ಮತದಿಂದ ಪರಾಭವಗೊಂಡರು. ಹೀಗಾಗಿ ಒಂದೊಂದು ಮತವೂ ಅಭ್ಯರ್ಥಿಯ ಹಣೆಬರಹವನ್ನು ನಿರ್ಧರಿಸುತ್ತದೆ’ ಎಂದರು.<br /> <br /> ‘ಇದು ಸಂಕ್ರಮಣ ಕಾಲ. ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಎಲ್ಲರೂ ಪ್ರಾರ್ಥನೆ ಮಾಡಬೇಕು. ರಾಜ್ಯದ ಪ್ರತಿ ಮನೆಯಲ್ಲೂ ಮೋದಿ ಜಪ ನಡೆಯಬೇಕು. ಬಿಜೆಪಿಗೆ 272ಕ್ಕೂ ಅಧಿಕ ಸ್ಥಾನಗಳು ಲಭಿಸಬೇಕು ಎಂಬುದಾಗಿ ಪ್ರಾರ್ಥಿಸಿ’ ಎಂದೂ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>