<p><strong>ಶಿವಮೊಗ್ಗ: </strong>ಹೊರದೇಶಗಳಲ್ಲಿ ಔಷಧಮುಕ್ತ ಸಾಂಬಾರು ಬೆಳೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಬೆಳೆಗಾರರು ಕೀಟನಾಶಕ ಬಳಕೆ ಕಡಿಮೆ ಮಾಡುವ ಆಧುನಿಕ ಬೇಸಾಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೊಚ್ಚಿನ್ ಅಡಿಕೆ ಮತ್ತು ಸಾಂಬಾರು ಬೆಳೆ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಹೋಮಿ ಚೆರಿಯನ್ ಸಲಹೆ ನೀಡಿದರು.<br /> <br /> ನಗರದ ನವಿಲೆಯ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಕೊಚ್ಚಿನ್ ಅಡಿಕೆ ಮತ್ತು ಸಾಂಬಾರು ಬೆಳೆ ಅಭಿವೃದ್ಧಿ ನಿರ್ದೇಶನಾಲಯ ಸಂಯುಕ್ತವಾಗಿ ಸಾಂಬಾರು ಬೆಳೆ ಕುರಿತು ಹಮ್ಮಿಕೊಂಡಿರುವ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದೇಶದ ಮಣ್ಣು ಹಾಗೂ ವಾತಾವರಣ ಸಾಂಬಾರು ಬೆಳೆಗೆ ಯೋಗ್ಯವಾಗಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಸಾಂಬಾರು ಪದಾರ್ಥ ರಫ್ತು ಮಾಡುವ ದೇಶವೂ ಭಾರತವಾಗಿದೆ. ಆದರೆ, ಗುಣಮಟ್ಟ ಕಾಯ್ದುಕೊಂಡು ಆಮದುದಾರರನ್ನು ಆಕರ್ಷಿಸುವಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ ಎಂದರು.<br /> <br /> ಇಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಾಂಬಾರು ಬೆಳೆ ಉತ್ಪಾದನೆಯಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಈ ನಿಟ್ಟಿನಲ್ಲಿ ನಮ್ಮ ದೇಶ ಹಿಡಿತವನ್ನು ಕಾಪಾಡಿಕೊಳ್ಳಬೇಕಾದರೆ ಉತ್ಪಾದನೆ ಜತೆಗೆ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಿದೆ ಎಂದರು.<br /> <br /> ಆಮದಾರರು ಔಷಧಮುಕ್ತ ಸಾಂಬಾರು ಬೆಳೆಯನ್ನು ಎದುರು ನೋಡುತ್ತಿದ್ದಾರೆ. ಅವರಿಗೆ ಅಂತಹ ಬೆಳೆಯನ್ನು ನೀಡಲು ಬೆಳೆಗಾರರಿಗೆ ಔಷಧಮುಕ್ತ ಬೇಸಾಯದ ಕ್ರಮಗಳನ್ನು ತಿಳಿಸಿಕೊಡಬೇಕು ಎಂದರು.<br /> <br /> ಅಂತರ ಬೆಳೆ: ಕೊಯಮತ್ತೂರಿನ ಟಿಎನ್ಎ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ.ಎನ್.ಕುಮಾರ್ ಮಾತನಾಡಿ, ಅಡಿಕೆ ಮತ್ತು ತೆಂಗು ಬೆಳೆ ಈ ಭಾಗದಲ್ಲಿ ಹೆಚ್ಚು ಬೆಳೆಯಲಾಗುತ್ತಿದೆ. ಹಾಗಾಗಿ ಈ ಬೆಳೆಗಳೊಂದಿಗೆ ಸಾಂಬಾರು ಪದಾರ್ಥಗಳನ್ನೂ ಬೆಳೆದರೆ ಉತ್ತಮ ಲಾಭ ಪಡೆಯಬಹುದು. ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದರು.<br /> <br /> ಸಾಂಬಾರು ಪದಾರ್ಥಗಳನ್ನ ಬೆಳೆಯುವಾಗ ವಾತಾವರಣ ಬದಲಾವಣೆಯಿಂದ ಬೆಳೆ ಹಾನಿಯಾಗುವ ಸಾಧ್ಯತೆಗಳಿದ್ದು, ಕೆಲವು ಸಂಶೋಧನೆಗಳ ಲಾಭ ಪಡೆದು, ರೈತರು ಇಳುವರಿ ಹೆಚ್ಚಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.<br /> <br /> ಸಮನ್ವಯತೆ ದೊಡ್ಡ ಸವಾಲು: ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯಗಳ ವಿಶೇಷಾಧಿಕಾರಿ ಡಾ.ಪಿ.ಎಂ.ಸಾಲಿಮಠ ಮಾತನಾಡಿ, ಸಾಂಬಾರು ಪದಾರ್ಥಗಳ ಉತ್ಪಾದನೆ ಮತ್ತು ಗುಣಮಟ್ಟ ಎರಡಲ್ಲೂ ಸಮನ್ವಯತೆ ಕಾಯ್ದುಕೊಳ್ಳುವುದು ಈಗ ದೊಡ್ಡ ಸವಾಲಾಗಿದೆ ಎಂದರು. <br /> <br /> ಸಮ್ಮೇಳನದಲ್ಲಿ ನವಿಲೆ ಕೃಷಿ ಕಾಲೇಜಿನ ಡೀನ್ ಡಾ.ಎಂ. ಮಂಜುನಾಥ್ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧ್ಯಕ್ಷ ಡಾ.ಎ.ಎಸ್.ಕುಮಾರಸ್ವಾಮಿ, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಡಾ.ಎಂ.ವಿಶ್ವನಾಥ ಉಪಸ್ಥಿತರಿದ್ದರು.<br /> <br /> ಸಮ್ಮೇಳನದಲ್ಲಿ ವಿಶ್ವವಿದ್ಯಾಲಯ ಸಂಶೋಧನಾ ವಿಭಾಗದ ನಿರ್ದೇಶಕ ಡಾ.ಬಿ.ಸತ್ಯನಾರಾಯಣರೆಡ್ಡಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಂಶೋಧನಾ ವಿಭಾಗದ ಸಹಾಯಕ ನಿರ್ದೇಶಕ ಡಾ.ವೈ.ವಿಶ್ವನಾಥಶೆಟ್ಟಿ ವಂದಿಸಿದರು. ಚೇತನ್ ಮತ್ತು ತಂಡ ಪ್ರಾರ್ಥಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಹೊರದೇಶಗಳಲ್ಲಿ ಔಷಧಮುಕ್ತ ಸಾಂಬಾರು ಬೆಳೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಬೆಳೆಗಾರರು ಕೀಟನಾಶಕ ಬಳಕೆ ಕಡಿಮೆ ಮಾಡುವ ಆಧುನಿಕ ಬೇಸಾಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೊಚ್ಚಿನ್ ಅಡಿಕೆ ಮತ್ತು ಸಾಂಬಾರು ಬೆಳೆ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಹೋಮಿ ಚೆರಿಯನ್ ಸಲಹೆ ನೀಡಿದರು.<br /> <br /> ನಗರದ ನವಿಲೆಯ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಕೊಚ್ಚಿನ್ ಅಡಿಕೆ ಮತ್ತು ಸಾಂಬಾರು ಬೆಳೆ ಅಭಿವೃದ್ಧಿ ನಿರ್ದೇಶನಾಲಯ ಸಂಯುಕ್ತವಾಗಿ ಸಾಂಬಾರು ಬೆಳೆ ಕುರಿತು ಹಮ್ಮಿಕೊಂಡಿರುವ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದೇಶದ ಮಣ್ಣು ಹಾಗೂ ವಾತಾವರಣ ಸಾಂಬಾರು ಬೆಳೆಗೆ ಯೋಗ್ಯವಾಗಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಸಾಂಬಾರು ಪದಾರ್ಥ ರಫ್ತು ಮಾಡುವ ದೇಶವೂ ಭಾರತವಾಗಿದೆ. ಆದರೆ, ಗುಣಮಟ್ಟ ಕಾಯ್ದುಕೊಂಡು ಆಮದುದಾರರನ್ನು ಆಕರ್ಷಿಸುವಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ ಎಂದರು.<br /> <br /> ಇಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಾಂಬಾರು ಬೆಳೆ ಉತ್ಪಾದನೆಯಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಈ ನಿಟ್ಟಿನಲ್ಲಿ ನಮ್ಮ ದೇಶ ಹಿಡಿತವನ್ನು ಕಾಪಾಡಿಕೊಳ್ಳಬೇಕಾದರೆ ಉತ್ಪಾದನೆ ಜತೆಗೆ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಿದೆ ಎಂದರು.<br /> <br /> ಆಮದಾರರು ಔಷಧಮುಕ್ತ ಸಾಂಬಾರು ಬೆಳೆಯನ್ನು ಎದುರು ನೋಡುತ್ತಿದ್ದಾರೆ. ಅವರಿಗೆ ಅಂತಹ ಬೆಳೆಯನ್ನು ನೀಡಲು ಬೆಳೆಗಾರರಿಗೆ ಔಷಧಮುಕ್ತ ಬೇಸಾಯದ ಕ್ರಮಗಳನ್ನು ತಿಳಿಸಿಕೊಡಬೇಕು ಎಂದರು.<br /> <br /> ಅಂತರ ಬೆಳೆ: ಕೊಯಮತ್ತೂರಿನ ಟಿಎನ್ಎ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ.ಎನ್.ಕುಮಾರ್ ಮಾತನಾಡಿ, ಅಡಿಕೆ ಮತ್ತು ತೆಂಗು ಬೆಳೆ ಈ ಭಾಗದಲ್ಲಿ ಹೆಚ್ಚು ಬೆಳೆಯಲಾಗುತ್ತಿದೆ. ಹಾಗಾಗಿ ಈ ಬೆಳೆಗಳೊಂದಿಗೆ ಸಾಂಬಾರು ಪದಾರ್ಥಗಳನ್ನೂ ಬೆಳೆದರೆ ಉತ್ತಮ ಲಾಭ ಪಡೆಯಬಹುದು. ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದರು.<br /> <br /> ಸಾಂಬಾರು ಪದಾರ್ಥಗಳನ್ನ ಬೆಳೆಯುವಾಗ ವಾತಾವರಣ ಬದಲಾವಣೆಯಿಂದ ಬೆಳೆ ಹಾನಿಯಾಗುವ ಸಾಧ್ಯತೆಗಳಿದ್ದು, ಕೆಲವು ಸಂಶೋಧನೆಗಳ ಲಾಭ ಪಡೆದು, ರೈತರು ಇಳುವರಿ ಹೆಚ್ಚಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.<br /> <br /> ಸಮನ್ವಯತೆ ದೊಡ್ಡ ಸವಾಲು: ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯಗಳ ವಿಶೇಷಾಧಿಕಾರಿ ಡಾ.ಪಿ.ಎಂ.ಸಾಲಿಮಠ ಮಾತನಾಡಿ, ಸಾಂಬಾರು ಪದಾರ್ಥಗಳ ಉತ್ಪಾದನೆ ಮತ್ತು ಗುಣಮಟ್ಟ ಎರಡಲ್ಲೂ ಸಮನ್ವಯತೆ ಕಾಯ್ದುಕೊಳ್ಳುವುದು ಈಗ ದೊಡ್ಡ ಸವಾಲಾಗಿದೆ ಎಂದರು. <br /> <br /> ಸಮ್ಮೇಳನದಲ್ಲಿ ನವಿಲೆ ಕೃಷಿ ಕಾಲೇಜಿನ ಡೀನ್ ಡಾ.ಎಂ. ಮಂಜುನಾಥ್ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧ್ಯಕ್ಷ ಡಾ.ಎ.ಎಸ್.ಕುಮಾರಸ್ವಾಮಿ, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಡಾ.ಎಂ.ವಿಶ್ವನಾಥ ಉಪಸ್ಥಿತರಿದ್ದರು.<br /> <br /> ಸಮ್ಮೇಳನದಲ್ಲಿ ವಿಶ್ವವಿದ್ಯಾಲಯ ಸಂಶೋಧನಾ ವಿಭಾಗದ ನಿರ್ದೇಶಕ ಡಾ.ಬಿ.ಸತ್ಯನಾರಾಯಣರೆಡ್ಡಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಂಶೋಧನಾ ವಿಭಾಗದ ಸಹಾಯಕ ನಿರ್ದೇಶಕ ಡಾ.ವೈ.ವಿಶ್ವನಾಥಶೆಟ್ಟಿ ವಂದಿಸಿದರು. ಚೇತನ್ ಮತ್ತು ತಂಡ ಪ್ರಾರ್ಥಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>