<p><strong>ಕಮಲನಗರ:</strong> ಸಮಾಜದ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ತಿದ್ದಿ ಸಮಾಜಕ್ಕೆ ನೈತಿಕ ಶಿಕ್ಷಣದ ಸಂದೇಶಗಳನ್ನು ನೀಡಿದ ಕನಕದಾಸರು, ಸಾಮಾಜಿಕ ಪರಿವರ್ತನೆಯ ಹರಿಕಾರ ಎಂದು ಮುಖಂಡ ಪಂಡಿತರಾವ್ ಚಿದ್ರಿ ಹೇಳಿದರು.<br /> <br /> ಇಲ್ಲಿಗೆ ಸಮೀಪದ ಹೊಳಸಮುದ್ರ ಗ್ರಾಮದ ಬೀರಗೊಂಡೇಶ್ವರ ಮಂದಿರದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಕನಕದಾಸರ 526ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಸಮಾಜದಲ್ಲಿ ಸಮಾನತೆ ಸಾರುವ ಮೂಲಕ ಮಹಾನ್ ಕ್ರಾಂತಿ ಮಾಡಿದ ಕನಕದಾಸರ ತತ್ವ, ಆದರ್ಶಗಳನ್ನು ಎಲ್ಲರೂ ಮೂಗೂಡಿಸಿಕೊಳ್ಳಬೇಕು ಎಂದರು.<br /> <br /> ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಮೃತರಾವ್ ಚಿಮಕೋಡೆ ಮಾತನಾಡಿ, ದಾಸಶ್ರೇಷ್ಠ ಕನಕದಾಸರು ಯಾವುದೇ ಒಂದು ಜಾತಿ, ಜನಾಂಗಕ್ಕೆ ಸೀಮತರಲ್ಲ. ಜಾತಿ, ಭೇದ ಮರೆತು ಬದುಕಬೇಕೆಂದು ಸಾರಿದ ಅವರ ಕೀರ್ತನೆಗಳ ಸಾರ ಎಲ್ಲರೂ ಅರಿತುಕೊಳ್ಳಬೇಕು ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಸದಸ್ಯ ಮಹಾದೇವ ಕೋಟೆ, ಜಿಲ್ಲಾ ದಾಸ ಸಾಹಿತ್ಯ ಪರಿಷತ್ ಅಧ್ಯಕ್ಷ ಬಾಲಾಜಿ ಮೇತ್ರೆ, ಮುಖಂಡ ಅನಿಲ ಕುಲಕರ್ಣಿ, ಬಾಲಾಜಿ ನರೋಟೆ, ರವೀಂದ್ರ ಬಳತ್ ಮಾತನಾಡಿದರು.<br /> <br /> ಮುಖಂಡ ಗೋಪಾಲರಾವ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.<br /> <br /> ರಮೇಶ ಬಿರಾದಾರ್, ಸಂತೋಷ ಜೋಳದಾಬಕೆ, ನಾರಾಯಣ ರಾಂಪುರೆ, ನಿರಂಜಪ್ಪ ಪತ್ರೆ, ತಾನಾಜಿ ತೋರಣೇಕರ್, ಗುಂಡಪ್ಪ ಮುಧಾಳೆ, ಶಿವಾಜಿ ಮೇತ್ರೆ, ಭಾಲ್ಕೇಶ್ವರ್ ಹುಡಗೆ, ಶಾಲಿವಾನ ವಳಗಣೆ ಮತ್ತಿತರರು ಇದ್ದರು.<br /> <br /> ಎಂ.ಮಲ್ಲಿಕಾರ್ಜುನ್ ಸ್ವಾಗತಿಸಿದರು. ತುಕಾರಾಮ ಯರೋಳೆ ವಂದಿಸಿದರು. ದೀಪಕ್ ಏಕಾತಪುರೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ಸಮಾಜದ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ತಿದ್ದಿ ಸಮಾಜಕ್ಕೆ ನೈತಿಕ ಶಿಕ್ಷಣದ ಸಂದೇಶಗಳನ್ನು ನೀಡಿದ ಕನಕದಾಸರು, ಸಾಮಾಜಿಕ ಪರಿವರ್ತನೆಯ ಹರಿಕಾರ ಎಂದು ಮುಖಂಡ ಪಂಡಿತರಾವ್ ಚಿದ್ರಿ ಹೇಳಿದರು.<br /> <br /> ಇಲ್ಲಿಗೆ ಸಮೀಪದ ಹೊಳಸಮುದ್ರ ಗ್ರಾಮದ ಬೀರಗೊಂಡೇಶ್ವರ ಮಂದಿರದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಕನಕದಾಸರ 526ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಸಮಾಜದಲ್ಲಿ ಸಮಾನತೆ ಸಾರುವ ಮೂಲಕ ಮಹಾನ್ ಕ್ರಾಂತಿ ಮಾಡಿದ ಕನಕದಾಸರ ತತ್ವ, ಆದರ್ಶಗಳನ್ನು ಎಲ್ಲರೂ ಮೂಗೂಡಿಸಿಕೊಳ್ಳಬೇಕು ಎಂದರು.<br /> <br /> ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಮೃತರಾವ್ ಚಿಮಕೋಡೆ ಮಾತನಾಡಿ, ದಾಸಶ್ರೇಷ್ಠ ಕನಕದಾಸರು ಯಾವುದೇ ಒಂದು ಜಾತಿ, ಜನಾಂಗಕ್ಕೆ ಸೀಮತರಲ್ಲ. ಜಾತಿ, ಭೇದ ಮರೆತು ಬದುಕಬೇಕೆಂದು ಸಾರಿದ ಅವರ ಕೀರ್ತನೆಗಳ ಸಾರ ಎಲ್ಲರೂ ಅರಿತುಕೊಳ್ಳಬೇಕು ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಸದಸ್ಯ ಮಹಾದೇವ ಕೋಟೆ, ಜಿಲ್ಲಾ ದಾಸ ಸಾಹಿತ್ಯ ಪರಿಷತ್ ಅಧ್ಯಕ್ಷ ಬಾಲಾಜಿ ಮೇತ್ರೆ, ಮುಖಂಡ ಅನಿಲ ಕುಲಕರ್ಣಿ, ಬಾಲಾಜಿ ನರೋಟೆ, ರವೀಂದ್ರ ಬಳತ್ ಮಾತನಾಡಿದರು.<br /> <br /> ಮುಖಂಡ ಗೋಪಾಲರಾವ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.<br /> <br /> ರಮೇಶ ಬಿರಾದಾರ್, ಸಂತೋಷ ಜೋಳದಾಬಕೆ, ನಾರಾಯಣ ರಾಂಪುರೆ, ನಿರಂಜಪ್ಪ ಪತ್ರೆ, ತಾನಾಜಿ ತೋರಣೇಕರ್, ಗುಂಡಪ್ಪ ಮುಧಾಳೆ, ಶಿವಾಜಿ ಮೇತ್ರೆ, ಭಾಲ್ಕೇಶ್ವರ್ ಹುಡಗೆ, ಶಾಲಿವಾನ ವಳಗಣೆ ಮತ್ತಿತರರು ಇದ್ದರು.<br /> <br /> ಎಂ.ಮಲ್ಲಿಕಾರ್ಜುನ್ ಸ್ವಾಗತಿಸಿದರು. ತುಕಾರಾಮ ಯರೋಳೆ ವಂದಿಸಿದರು. ದೀಪಕ್ ಏಕಾತಪುರೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>