<p>ಮಂಡ್ಯ: ದಕ್ಷಿಣ ಕನ್ನಡ ಸಂಪದ್ಭರಿತವಾಗಲು ದೇಶ–ವಿದೇಶಕ್ಕೆ ವಲಸೆ ಹೋದ ದಕ್ಷಿಣ ಕನ್ನಡಿಗರೂ ಕಾರಣ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಎ.ವಿ. ನಾವಡ ಹೇಳಿದರು.<br /> <br /> ನಗರದ ಕಲಾಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ಕರಾವಳಿ ಸಾಂಸ್ಕೃತಿಕ ಒಕ್ಕೂಟದ ವಾರ್ಷಿಕೋತ್ಸವ ಉದ್ಘಾಟನೆ ಮಾಡಿ ಮಾತನಾಡಿದರು.<br /> <br /> ವಿವಿಧ ಕಾರಣಗಳಿಗಾಗಿ ದಕ್ಷಿಣ ಕನ್ನಡದಿಂದ ವಲಸೆ ಹೋದವರು, ಜಿಲ್ಲೆಯಲ್ಲಿ ಶಾಲಾ–ಕಾಲೇಜು ತೆರೆಯಲು, ದೇವಸ್ಥಾನಗಳ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕಾಣಿಕೆಯನ್ನು ನೀಡುತ್ತಿದ್ದಾರೆ ಎಂದರು.<br /> <br /> ಮಂಡ್ಯದ ಜನರೊಂದಿಗೆ ಬೆರೆತಿರುವ ಕರಾವಳಿಯ ಜನರು, ಪ್ರತಿಭಾ ಪುರಸ್ಕಾರ, ಭರತನಾಟ್ಯ, ಯಕ್ಷಗಾನ ಸೇರಿದಂತೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.<br /> <br /> <br /> ಅಖಿಲ ಕರ್ನಾಟಕ ಕರಾವಳಿ ಸಾಂಸ್ಕೃತಿಕ ಒಕ್ಕೂಟ ಅಧ್ಯಕ್ಷ ಜಗನ್ನಾಥ ಎಸ್. ಶೆಟ್ಟಿ, ಮಾಜಿ ಸಚಿವ ಎಂ.ಎಸ್. ಆತ್ಮಾನಂದ, ಡಾ.ವಿ.ಎಲ್.ನಂದೀಶ್, ನಿವೃತ್ತ ಅಧಿಕಾರಿ ಗೋಪಾಲಕೃಷ್ಣೇಗೌಡ ಇದ್ದರು.<br /> <br /> <strong>ಬೀರೇಶ್ವರಸ್ವಾಮಿ ದೊಡ್ಡ ಹಬ್ಬ</strong><br /> ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ‘ಅರುವನಹಳ್ಳಿ ಬೀರೇಶ್ವರಸ್ವಾಮಿ ದೇವರ ದೊಡ್ಡ ಹಬ್ಬ’ವು ಮಾ.4 ಮಧ್ಯಾಹ್ನ 12.30ಕ್ಕೆ ಅರುವನಹಳ್ಳಿಯಲ್ಲಿ ನಡೆಯಲಿದೆ. ಕಾಳಿಕಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ದಕ್ಷಿಣ ಕನ್ನಡ ಸಂಪದ್ಭರಿತವಾಗಲು ದೇಶ–ವಿದೇಶಕ್ಕೆ ವಲಸೆ ಹೋದ ದಕ್ಷಿಣ ಕನ್ನಡಿಗರೂ ಕಾರಣ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಎ.ವಿ. ನಾವಡ ಹೇಳಿದರು.<br /> <br /> ನಗರದ ಕಲಾಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ಕರಾವಳಿ ಸಾಂಸ್ಕೃತಿಕ ಒಕ್ಕೂಟದ ವಾರ್ಷಿಕೋತ್ಸವ ಉದ್ಘಾಟನೆ ಮಾಡಿ ಮಾತನಾಡಿದರು.<br /> <br /> ವಿವಿಧ ಕಾರಣಗಳಿಗಾಗಿ ದಕ್ಷಿಣ ಕನ್ನಡದಿಂದ ವಲಸೆ ಹೋದವರು, ಜಿಲ್ಲೆಯಲ್ಲಿ ಶಾಲಾ–ಕಾಲೇಜು ತೆರೆಯಲು, ದೇವಸ್ಥಾನಗಳ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕಾಣಿಕೆಯನ್ನು ನೀಡುತ್ತಿದ್ದಾರೆ ಎಂದರು.<br /> <br /> ಮಂಡ್ಯದ ಜನರೊಂದಿಗೆ ಬೆರೆತಿರುವ ಕರಾವಳಿಯ ಜನರು, ಪ್ರತಿಭಾ ಪುರಸ್ಕಾರ, ಭರತನಾಟ್ಯ, ಯಕ್ಷಗಾನ ಸೇರಿದಂತೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.<br /> <br /> <br /> ಅಖಿಲ ಕರ್ನಾಟಕ ಕರಾವಳಿ ಸಾಂಸ್ಕೃತಿಕ ಒಕ್ಕೂಟ ಅಧ್ಯಕ್ಷ ಜಗನ್ನಾಥ ಎಸ್. ಶೆಟ್ಟಿ, ಮಾಜಿ ಸಚಿವ ಎಂ.ಎಸ್. ಆತ್ಮಾನಂದ, ಡಾ.ವಿ.ಎಲ್.ನಂದೀಶ್, ನಿವೃತ್ತ ಅಧಿಕಾರಿ ಗೋಪಾಲಕೃಷ್ಣೇಗೌಡ ಇದ್ದರು.<br /> <br /> <strong>ಬೀರೇಶ್ವರಸ್ವಾಮಿ ದೊಡ್ಡ ಹಬ್ಬ</strong><br /> ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ‘ಅರುವನಹಳ್ಳಿ ಬೀರೇಶ್ವರಸ್ವಾಮಿ ದೇವರ ದೊಡ್ಡ ಹಬ್ಬ’ವು ಮಾ.4 ಮಧ್ಯಾಹ್ನ 12.30ಕ್ಕೆ ಅರುವನಹಳ್ಳಿಯಲ್ಲಿ ನಡೆಯಲಿದೆ. ಕಾಳಿಕಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>