<p><strong>ಬೆಂಗಳೂರು: </strong>‘ವಕೀಲರು ಕ್ರಿಯಾಶೀಲತೆ ಹಾಗೂ ನಿಷ್ಪಕ್ಷಪಾತವಾಗಿ ದುಡಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಒಳ್ಳೆಯ ಅರ್ಥ ಬರುತ್ತದೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಅಭಿಪ್ರಾಯಪಟ್ಟರು.<br /> <br /> ಬಿ.ಎಂ.ಎಸ್. ಕಾನೂನು ಕಾಲೇಜಿನಲ್ಲಿ ಸೋಮವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ವಕೀಲ ವೃತ್ತಿಯ ಶ್ರೇಷ್ಠತೆಯನ್ನು ಕಾಯುವ ನಿಟ್ಟಿನಲ್ಲಿ ಯುವ ವಕೀಲರನ್ನು ರೂಪಿಸಬೇಕಿದ್ದು, ಶಿಕ್ಷಣ ಸಂಸ್ಥೆಗಳು ಕಲಿಕಾ ಕ್ರಮವನ್ನು ಮೇಲ್ದರ್ಜೆಗೇರಿಸಬೇಕಿದೆ’ ಎಂದು ಹೇಳಿದರು. <br /> <br /> ‘ಸಂವಿಧಾನ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡವರು ಮಾತ್ರ ಉತ್ತಮ ವಕೀಲರಾಗಲು ಸಾಧ್ಯ. ಶ್ರೀಸಾಮಾನ್ಯನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಕೀಲರು ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು. ‘ಅಪರಾಧಶಾಸ್ತ್ರ, ಮನಃಶಾಸ್ತ್ರ ಗಳನ್ನು ಸೂಕ್ಷ್ಮವಾಗಿ ಅರಿತುಕೊಂಡು ವಕೀಲರು ಈ ವೃತ್ತಿಯಲ್ಲಿ ಮುಂದುವರಿಯಬೇಕು. ಆಗ ಯಶಸ್ಸು ಗಳಿಸಲು ಸಾಧ್ಯ’ ಎಂದು ತಿಳಿಸಿದರು.<br /> <br /> ಕಾಲೇಜಿನ ಟ್ರಸ್ಟಿ ಪಿ.ದಯಾನಂದ ಪೈ, ‘ಯುವ ಸಮುದಾಯ ಎಂಜಿನಿಯರಿಂಗ್ ಹಾಗೂ ವೈದ್ಯ ವೃತ್ತಿಯೆಡೆಗೆ ಹೆಚ್ಚು ಆಕರ್ಷಿತ ಆಗುತ್ತಿದೆ. ಅವರು ವಕೀಲ ವೃತ್ತಿಯೆಡೆಗೆ ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ವಕೀಲರು ಕ್ರಿಯಾಶೀಲತೆ ಹಾಗೂ ನಿಷ್ಪಕ್ಷಪಾತವಾಗಿ ದುಡಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಒಳ್ಳೆಯ ಅರ್ಥ ಬರುತ್ತದೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಅಭಿಪ್ರಾಯಪಟ್ಟರು.<br /> <br /> ಬಿ.ಎಂ.ಎಸ್. ಕಾನೂನು ಕಾಲೇಜಿನಲ್ಲಿ ಸೋಮವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ವಕೀಲ ವೃತ್ತಿಯ ಶ್ರೇಷ್ಠತೆಯನ್ನು ಕಾಯುವ ನಿಟ್ಟಿನಲ್ಲಿ ಯುವ ವಕೀಲರನ್ನು ರೂಪಿಸಬೇಕಿದ್ದು, ಶಿಕ್ಷಣ ಸಂಸ್ಥೆಗಳು ಕಲಿಕಾ ಕ್ರಮವನ್ನು ಮೇಲ್ದರ್ಜೆಗೇರಿಸಬೇಕಿದೆ’ ಎಂದು ಹೇಳಿದರು. <br /> <br /> ‘ಸಂವಿಧಾನ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡವರು ಮಾತ್ರ ಉತ್ತಮ ವಕೀಲರಾಗಲು ಸಾಧ್ಯ. ಶ್ರೀಸಾಮಾನ್ಯನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಕೀಲರು ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು. ‘ಅಪರಾಧಶಾಸ್ತ್ರ, ಮನಃಶಾಸ್ತ್ರ ಗಳನ್ನು ಸೂಕ್ಷ್ಮವಾಗಿ ಅರಿತುಕೊಂಡು ವಕೀಲರು ಈ ವೃತ್ತಿಯಲ್ಲಿ ಮುಂದುವರಿಯಬೇಕು. ಆಗ ಯಶಸ್ಸು ಗಳಿಸಲು ಸಾಧ್ಯ’ ಎಂದು ತಿಳಿಸಿದರು.<br /> <br /> ಕಾಲೇಜಿನ ಟ್ರಸ್ಟಿ ಪಿ.ದಯಾನಂದ ಪೈ, ‘ಯುವ ಸಮುದಾಯ ಎಂಜಿನಿಯರಿಂಗ್ ಹಾಗೂ ವೈದ್ಯ ವೃತ್ತಿಯೆಡೆಗೆ ಹೆಚ್ಚು ಆಕರ್ಷಿತ ಆಗುತ್ತಿದೆ. ಅವರು ವಕೀಲ ವೃತ್ತಿಯೆಡೆಗೆ ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>