<p>ಹಾಸನ: ‘ಲೋಕಸಭಾ ಚುನಾವಣೆಯ ಬಳಿಕ ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಿದ್ಧತೆ ನಡೆಸಿದ್ದಾರೆ. ಆದರೆ, ಅಂಥವರಿಗೆ ಕಾಂಗ್ರೆಸ್ನ ಬಾಗಿಲು ಸದಾ ಮುಚ್ಚಿರುತ್ತದೆ’ ಎಂದು ಹಾಸನ ಕ್ಷೇತ್ರದ ಘೋಷಿತ ಅಭ್ಯರ್ಥಿ ಎ. ಮಂಜು ತಿಳಿಸಿದರು.<br /> <br /> ಹಾಸನ ಲೋಕಭಾ ಕ್ಷೇತ್ರದಿಂದ ಶಾಸಕ ಎ. ಮಂಜು ಅವರನ್ನು ಕಣಕ್ಕೆ ಇಳಿಸುವುದಾಗಿ ಕಾಂಗ್ರೆಸ್ ಘೋಷಿಸಿದ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಈ ವಿಷಯವನ್ನು ಹೇಳಿದರು.<br /> <br /> ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಅವರು ಸಭೆಯಲ್ಲಿ ಈ ವಿಷಯವನ್ನು ಮೊದಲು ಪ್ರಸ್ತಾಪ ಮಾಡಿ, ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರ ಅಕ್ಕಪಕ್ಕದಲ್ಲಿ ಕಾಣಿಸಿಕೊಳ್ಳುವ ಪ್ರಯತ್ನವನ್ನು ರೇವಣ್ಣ ಮಾಡುತ್ತಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ಸಂಭವವಿದೆ ಎಂದು ಹೇಳಿದರು.<br /> <br /> ಎಚ್.ಡಿ. ದೇವೇಗೌಡ ಅವರು ಈ ಚುನಾವಣೆಯಲ್ಲಿ ಸೋಲುವುದು ಖಚಿತ. ಅವರು ಸೋಲುತ್ತಿದ್ದಂತೆ ಅವರ ಒಬ್ಬ ಪುತ್ರ ಬಿಜೆಪಿಗೆ ಹಾಗೂ ಇನ್ನೊಬ್ಬ ಪುತ್ರ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಅವರು ಈಗಾಗಲೇ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ’ ಎಂದು ತಿಳಿಸಿದರು.<br /> <br /> ಅವಕಾಶ ನೀಡಬಾರದು: ಇದನ್ನು ಬೇರೆ ರೀತಿಯಿಂದ ವಿಶ್ಲೇಷಿಸಿದ ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಶಿವರಾಮು, ‘ಹಾಸನದಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸುವಂಥ ನಾಯಕರೇ ಇಲ್ಲ ಎಂಬ ಭಾವನೆ ಕಾಂಗ್ರೆಸ್ನ ಕೆಲವು ಮುಖಂಡರಲ್ಲೂ ಮೂಡಿದೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಅದನ್ನೇ ಆಧಾರವನ್ನಾಗಿಟ್ಟುಕೊಂಡು ರೇವಣ್ಣ ಅವರು ಗೆಲ್ಲುವ ಅಭ್ಯರ್ಥಿ ಎಂದು ಭಾವಿಸಿ ಪಕ್ಷಕ್ಕೆ ಸೇರಿಸುವ ಸಾಧ್ಯತೆ ಇದೆ. ಇದಕ್ಕೆ ಅವಕಾಶ ನೀಡಬಾರದು. ಎಲ್ಲರೂ ರಾತ್ರಿ– ಹಗಲು ದುಡಿದು ಮಂಜು ಅವರನ್ನು ಗೆಲ್ಲಿಸಲೇಬೇಕು’ ಎಂದರು.<br /> <br /> ‘ರೇವಣ್ಣ ಕಾಂಗ್ರೆಸ್ ಸೇರುವ ಪ್ರಯತ್ನ ಮಾಡಿದ್ದಾರೆ ಎಂಬುದು ಊಹಾಪೋಹವಲ್ಲ, ಈ ಬಗ್ಗೆ ಈಗಾಗಲೇ ಮೂರು ಸುತ್ತಿನ ಮಾತುಕತೆಯಾಗಿದೆ. ಎಲ್ಲಿ, ಯಾವಾಗ ಎಂದು ಹೇಳಲು ಇದು ಸಕಾಲವಲ್ಲ. ಅವರಿಗೆ ಕಾಂಗ್ರೆಸ್ ಬಾಗಿಲು ಮುಚ್ಚುವಂತಾಗಬೇಕಾದರೆ ಮಂಜು ಗೆಲುವು ಅನಿವಾರ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ಲೋಕಸಭಾ ಚುನಾವಣೆಯ ಬಳಿಕ ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಿದ್ಧತೆ ನಡೆಸಿದ್ದಾರೆ. ಆದರೆ, ಅಂಥವರಿಗೆ ಕಾಂಗ್ರೆಸ್ನ ಬಾಗಿಲು ಸದಾ ಮುಚ್ಚಿರುತ್ತದೆ’ ಎಂದು ಹಾಸನ ಕ್ಷೇತ್ರದ ಘೋಷಿತ ಅಭ್ಯರ್ಥಿ ಎ. ಮಂಜು ತಿಳಿಸಿದರು.<br /> <br /> ಹಾಸನ ಲೋಕಭಾ ಕ್ಷೇತ್ರದಿಂದ ಶಾಸಕ ಎ. ಮಂಜು ಅವರನ್ನು ಕಣಕ್ಕೆ ಇಳಿಸುವುದಾಗಿ ಕಾಂಗ್ರೆಸ್ ಘೋಷಿಸಿದ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಈ ವಿಷಯವನ್ನು ಹೇಳಿದರು.<br /> <br /> ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಅವರು ಸಭೆಯಲ್ಲಿ ಈ ವಿಷಯವನ್ನು ಮೊದಲು ಪ್ರಸ್ತಾಪ ಮಾಡಿ, ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರ ಅಕ್ಕಪಕ್ಕದಲ್ಲಿ ಕಾಣಿಸಿಕೊಳ್ಳುವ ಪ್ರಯತ್ನವನ್ನು ರೇವಣ್ಣ ಮಾಡುತ್ತಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ಸಂಭವವಿದೆ ಎಂದು ಹೇಳಿದರು.<br /> <br /> ಎಚ್.ಡಿ. ದೇವೇಗೌಡ ಅವರು ಈ ಚುನಾವಣೆಯಲ್ಲಿ ಸೋಲುವುದು ಖಚಿತ. ಅವರು ಸೋಲುತ್ತಿದ್ದಂತೆ ಅವರ ಒಬ್ಬ ಪುತ್ರ ಬಿಜೆಪಿಗೆ ಹಾಗೂ ಇನ್ನೊಬ್ಬ ಪುತ್ರ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಅವರು ಈಗಾಗಲೇ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ’ ಎಂದು ತಿಳಿಸಿದರು.<br /> <br /> ಅವಕಾಶ ನೀಡಬಾರದು: ಇದನ್ನು ಬೇರೆ ರೀತಿಯಿಂದ ವಿಶ್ಲೇಷಿಸಿದ ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಶಿವರಾಮು, ‘ಹಾಸನದಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸುವಂಥ ನಾಯಕರೇ ಇಲ್ಲ ಎಂಬ ಭಾವನೆ ಕಾಂಗ್ರೆಸ್ನ ಕೆಲವು ಮುಖಂಡರಲ್ಲೂ ಮೂಡಿದೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಅದನ್ನೇ ಆಧಾರವನ್ನಾಗಿಟ್ಟುಕೊಂಡು ರೇವಣ್ಣ ಅವರು ಗೆಲ್ಲುವ ಅಭ್ಯರ್ಥಿ ಎಂದು ಭಾವಿಸಿ ಪಕ್ಷಕ್ಕೆ ಸೇರಿಸುವ ಸಾಧ್ಯತೆ ಇದೆ. ಇದಕ್ಕೆ ಅವಕಾಶ ನೀಡಬಾರದು. ಎಲ್ಲರೂ ರಾತ್ರಿ– ಹಗಲು ದುಡಿದು ಮಂಜು ಅವರನ್ನು ಗೆಲ್ಲಿಸಲೇಬೇಕು’ ಎಂದರು.<br /> <br /> ‘ರೇವಣ್ಣ ಕಾಂಗ್ರೆಸ್ ಸೇರುವ ಪ್ರಯತ್ನ ಮಾಡಿದ್ದಾರೆ ಎಂಬುದು ಊಹಾಪೋಹವಲ್ಲ, ಈ ಬಗ್ಗೆ ಈಗಾಗಲೇ ಮೂರು ಸುತ್ತಿನ ಮಾತುಕತೆಯಾಗಿದೆ. ಎಲ್ಲಿ, ಯಾವಾಗ ಎಂದು ಹೇಳಲು ಇದು ಸಕಾಲವಲ್ಲ. ಅವರಿಗೆ ಕಾಂಗ್ರೆಸ್ ಬಾಗಿಲು ಮುಚ್ಚುವಂತಾಗಬೇಕಾದರೆ ಮಂಜು ಗೆಲುವು ಅನಿವಾರ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>