<p><strong>ದಾವಣಗೆರೆ: </strong>ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸತ್ ಸದಸ್ಯ ಜಿ.ಎಂ.ಸಿದ್ದೇಶ್ವರ ಗುರುವಾರ ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಸಲ್ಲಿಸುವ ಬಗ್ಗೆ ಮಾಧ್ಯಮದವರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಗುರುವಾರ ಶುಭದಿನ ಎಂದು ಪರಿಗಣಿಸಿ ಪಕ್ಷದ ಬಿ–ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ. ಇದೇ 26ರಂದು ಮೆರವಣಿಗೆ ಮೂಲಕ ತೆರಳಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.<br /> <br /> ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆಗೆ ಜಿ.ಎಂ.ಸಿದ್ದೇಶ್ವರ ಮಾತನಾಡಿ, ‘ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿಗೆ<br /> ಗೆಲುವು ಖಚಿತ. 10 ವರ್ಷದಿಂದ ಹಳ್ಳಿಹಳ್ಳಿಗೆ<br /> <br /> ಸುತ್ತಿ ಕೆಲಸ ಮಾಡಿದ್ದೇನೆ. ಸಾಕಷ್ಟು ಕಾರ್ಯಕರ್ತರನ್ನು ಭೇಟಿ ಮಾಡಿದ್ದೇನೆ. ನನ್ನ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಸಹಕಾರಿ<br /> ಆಗಲಿವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರು, ಹಿಂದುಳಿದ ವರ್ಗದ ಜನರು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಎಂದು ಬಯಸುತ್ತಿದ್ದಾರೆ. ಮೋದಿ ಅಲೆಯೇ ಸೃಷ್ಟಿಯಾಗಿದೆ’ ಎಂದು ಹೇಳಿದರು.<br /> <br /> ಕಾಂಗ್ರೆಸ್ ಮುಖಂಡರೊಬ್ಬರ ನಿಮ್ಮ ಮೇಲೆ ಹಫ್ತಾ ವಸೂಲಿ ಆರೋಪ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಕಾಮಾಲೆ ಕಣ್ಣಿನ ಕಾಂಗ್ರೆಸ್ಗೆ ಎಲ್ಲವೂ ಹಳದಿಯಂತೆ ಕಾಣಿಸುತ್ತದೆ. ಹಫ್ತಾ ವಸೂಲಿ ಕಾಂಗ್ರೆಸ್ ಸಂಸ್ಕೃತಿ. ನಮ್ಮ ತಂದೆ ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾನು ನಡೆಯುತ್ತಿದ್ದೇನೆ’ ಎಂದು ತಿರುಗೇಟು ನೀಡಿದರು.<br /> <br /> ಪಕ್ಷದಲ್ಲಿ ಇರುವ ಗೊಂದಲದ ಬಗ್ಗೆ ಕೇಳಿದ ಪ್ರಶ್ನೆಗೆ ‘ನನಗೋಸ್ಕರ ಮಾಜಿ ಶಾಸಕರು ಸಹಿಸಿಕೊಂಡು ಕೆಲಸ ಮಾಡುತ್ತಾರೆ. ಟಿ. ಗುರುಸಿದ್ದನಗೌಡ ಜಗಳೂರು ಭಾಗದಲ್ಲಿ ಪ್ರಚಾರ ಮಾಡಿದ್ದಾರೆ; ಬಿ.ಪಿ.ಹರೀಶ್ ಕೂಡ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ<br /> ಬಗ್ಗೆ ಯಾವುದೇ ಗೊಂದಲ ಬೇಡ’ ಎಂದು ಹೇಳಿದರು.<br /> <br /> ಕಳೆದ ವಿಧಾನಸಭಾ ಚುನಾವಣೆ ವೇಳೆ ಮನೆಯೊಂದು ಮೂರು ಬಾಗಿಲು ಎಂಬ ಸ್ಥಿತಿಗೆ ಬಿಜೆಪಿ ತಲುಪಿತ್ತು. ಇದೀಗ ಬಿಜೆಪಿ, ಕೆಜೆಪಿ ಹಾಗೂ ಬಿಎಸ್ಆರ್ ಕಾಂಗ್ರೆಸ್ ಗುರುತಿಸಿಕೊಂಡಿದ್ದ ಮುಖಂಡರೆಲ್ಲಾ ಒಂದಾಗಿದ್ದೇವೆ. ಹೀಗಾಗಿ, ಲೋಕಸಭಾ ಚುನಾವಣೆಯಲ್ಲಿ ಗೆಲುವು ಸುಲಭ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಪತ್ನಿ ಗಾಯತ್ರಿ ಸಿದ್ದೇಶ್ವರ, ಸಹೋದರ ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಘಟಕದ ಅಧ್ಯಕ್ಷ ಅಣಬೇರು ಜೀವನಮೂರ್ತಿ, ಎಚ್.ಎನ್.ಗುರುನಾಥ್, ವೀರೇಶ್, ಬಿ.ಎಂ.ಸತೀಶ್ ಮೊದಲಾದವರು ಹಾಜರಿದ್ದರು.<br /> <br /> <strong>ಇಬ್ಬರಿಂದ ಮೂರು ನಾಮಪತ್ರ<br /> ದಾವಣಗೆರೆ: </strong>ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಗುರುವಾರ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರ ಸಲ್ಲಿಸಿದರು. ವಿವರ ಈ ಕೆಳಕಂಡಂತೆ ಇದೆ.</p>.<p><strong>ಸಂಖ್ಯೆ ಅಭ್ಯರ್ಥಿ ಪಕ್ಷ </strong><br /> 1. ಜಿ.ಎಂ.ಸಿದ್ದೇಶ್ವರ ಬಿಜೆಪಿ<br /> 2. ಸುಬಾನ್ ಖಾನ್ ಪಕ್ಷೇತರ<br /> 3. ಸುಬಾನ್ ಖಾನ್ ಎಎಪಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸತ್ ಸದಸ್ಯ ಜಿ.ಎಂ.ಸಿದ್ದೇಶ್ವರ ಗುರುವಾರ ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಸಲ್ಲಿಸುವ ಬಗ್ಗೆ ಮಾಧ್ಯಮದವರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಗುರುವಾರ ಶುಭದಿನ ಎಂದು ಪರಿಗಣಿಸಿ ಪಕ್ಷದ ಬಿ–ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ. ಇದೇ 26ರಂದು ಮೆರವಣಿಗೆ ಮೂಲಕ ತೆರಳಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.<br /> <br /> ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆಗೆ ಜಿ.ಎಂ.ಸಿದ್ದೇಶ್ವರ ಮಾತನಾಡಿ, ‘ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿಗೆ<br /> ಗೆಲುವು ಖಚಿತ. 10 ವರ್ಷದಿಂದ ಹಳ್ಳಿಹಳ್ಳಿಗೆ<br /> <br /> ಸುತ್ತಿ ಕೆಲಸ ಮಾಡಿದ್ದೇನೆ. ಸಾಕಷ್ಟು ಕಾರ್ಯಕರ್ತರನ್ನು ಭೇಟಿ ಮಾಡಿದ್ದೇನೆ. ನನ್ನ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಸಹಕಾರಿ<br /> ಆಗಲಿವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರು, ಹಿಂದುಳಿದ ವರ್ಗದ ಜನರು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಎಂದು ಬಯಸುತ್ತಿದ್ದಾರೆ. ಮೋದಿ ಅಲೆಯೇ ಸೃಷ್ಟಿಯಾಗಿದೆ’ ಎಂದು ಹೇಳಿದರು.<br /> <br /> ಕಾಂಗ್ರೆಸ್ ಮುಖಂಡರೊಬ್ಬರ ನಿಮ್ಮ ಮೇಲೆ ಹಫ್ತಾ ವಸೂಲಿ ಆರೋಪ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಕಾಮಾಲೆ ಕಣ್ಣಿನ ಕಾಂಗ್ರೆಸ್ಗೆ ಎಲ್ಲವೂ ಹಳದಿಯಂತೆ ಕಾಣಿಸುತ್ತದೆ. ಹಫ್ತಾ ವಸೂಲಿ ಕಾಂಗ್ರೆಸ್ ಸಂಸ್ಕೃತಿ. ನಮ್ಮ ತಂದೆ ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾನು ನಡೆಯುತ್ತಿದ್ದೇನೆ’ ಎಂದು ತಿರುಗೇಟು ನೀಡಿದರು.<br /> <br /> ಪಕ್ಷದಲ್ಲಿ ಇರುವ ಗೊಂದಲದ ಬಗ್ಗೆ ಕೇಳಿದ ಪ್ರಶ್ನೆಗೆ ‘ನನಗೋಸ್ಕರ ಮಾಜಿ ಶಾಸಕರು ಸಹಿಸಿಕೊಂಡು ಕೆಲಸ ಮಾಡುತ್ತಾರೆ. ಟಿ. ಗುರುಸಿದ್ದನಗೌಡ ಜಗಳೂರು ಭಾಗದಲ್ಲಿ ಪ್ರಚಾರ ಮಾಡಿದ್ದಾರೆ; ಬಿ.ಪಿ.ಹರೀಶ್ ಕೂಡ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ<br /> ಬಗ್ಗೆ ಯಾವುದೇ ಗೊಂದಲ ಬೇಡ’ ಎಂದು ಹೇಳಿದರು.<br /> <br /> ಕಳೆದ ವಿಧಾನಸಭಾ ಚುನಾವಣೆ ವೇಳೆ ಮನೆಯೊಂದು ಮೂರು ಬಾಗಿಲು ಎಂಬ ಸ್ಥಿತಿಗೆ ಬಿಜೆಪಿ ತಲುಪಿತ್ತು. ಇದೀಗ ಬಿಜೆಪಿ, ಕೆಜೆಪಿ ಹಾಗೂ ಬಿಎಸ್ಆರ್ ಕಾಂಗ್ರೆಸ್ ಗುರುತಿಸಿಕೊಂಡಿದ್ದ ಮುಖಂಡರೆಲ್ಲಾ ಒಂದಾಗಿದ್ದೇವೆ. ಹೀಗಾಗಿ, ಲೋಕಸಭಾ ಚುನಾವಣೆಯಲ್ಲಿ ಗೆಲುವು ಸುಲಭ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಪತ್ನಿ ಗಾಯತ್ರಿ ಸಿದ್ದೇಶ್ವರ, ಸಹೋದರ ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಘಟಕದ ಅಧ್ಯಕ್ಷ ಅಣಬೇರು ಜೀವನಮೂರ್ತಿ, ಎಚ್.ಎನ್.ಗುರುನಾಥ್, ವೀರೇಶ್, ಬಿ.ಎಂ.ಸತೀಶ್ ಮೊದಲಾದವರು ಹಾಜರಿದ್ದರು.<br /> <br /> <strong>ಇಬ್ಬರಿಂದ ಮೂರು ನಾಮಪತ್ರ<br /> ದಾವಣಗೆರೆ: </strong>ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಗುರುವಾರ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರ ಸಲ್ಲಿಸಿದರು. ವಿವರ ಈ ಕೆಳಕಂಡಂತೆ ಇದೆ.</p>.<p><strong>ಸಂಖ್ಯೆ ಅಭ್ಯರ್ಥಿ ಪಕ್ಷ </strong><br /> 1. ಜಿ.ಎಂ.ಸಿದ್ದೇಶ್ವರ ಬಿಜೆಪಿ<br /> 2. ಸುಬಾನ್ ಖಾನ್ ಪಕ್ಷೇತರ<br /> 3. ಸುಬಾನ್ ಖಾನ್ ಎಎಪಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>