<p><strong>ಇಸ್ಲಾಮಾಬಾದ್ (ಐಎಎನ್ಎಸ್):</strong> ‘ಪಾಕಿಸ್ತಾನ ಮತ್ತು ಕಾಶ್ಮೀರವನ್ನು ಬೇರ್ಪಡಿಸಲು ಸಾಧ್ಯವಿಲ್ಲ’ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ಹೇಳಿದ್ದಾರೆ.<br /> <br /> ‘ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ನಿರ್ಣಯಗಳು ಮತ್ತು ಕಾಶ್ಮೀರದ ಜನರ ಬಯಕೆಯಂತೆ ಬಗೆಹರಿಸಬೇಕು. ಹಾಗಾದಲ್ಲಿ ಈ ವಲಯದಲ್ಲಿ ಶಾಂತಿ ನೆಲೆಸಲು ಸಾಧ್ಯ’ ಎಂದು ಬುಧವಾರ ಇಲ್ಲಿನ ರಾಷ್ಟ್ರೀಯ ರಕ್ಷಣಾ ವಿ.ವಿಯಲ್ಲಿ ನಡೆದ ಸಮಾವೇಶದಲ್ಲಿ ಅವರು ತಿಳಿಸಿದರು.<br /> <br /> ‘ಶತ್ರುಗಳು ಭಯೋತ್ಪಾದನೆಗೆ ಪ್ರಚೋದನೆ ನೀಡುವ ಮೂಲಕ ಪಾಕಿಸ್ತಾನದ ಆಂತರಿಕ ಭದ್ರತೆಗೆ ಧಕ್ಕೆ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ರೀತಿಯ ಕೆಟ್ಟ ಸಂಚುಗಳನ್ನು ಎದುರಿಸುವ ಶಕ್ತಿ ಪಾಕ್ಗೆ ಇದೆ’ ಎಂದು ರಹೀಲ್ ಹೇಳಿರುವುದನ್ನು ‘ಡಾನ್’ ದಿನಪತ್ರಿಕೆ ವರದಿ ಮಾಡಿದೆ.<br /> <br /> <strong>ಭಾರತದ ತೀಕ್ಷ್ಣ ಪ್ರತಿಕ್ರಿಯೆ: </strong>ರಹೀಲ್ ಷರೀಫ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ. ಕೆ. ಸಿಂಗ್ ಅವರು, ‘ಪಾಕಿಸ್ತಾನವು ತಪ್ಪು ಭಾವನೆಗಳನ್ನು ಇಟ್ಟುಕೊಂಡಿರಲಿ. ಆದರೆ ವಾಸ್ತವ ಪರಿಸ್ಥಿತಿಗೆ ಅದು ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಐಎಎನ್ಎಸ್):</strong> ‘ಪಾಕಿಸ್ತಾನ ಮತ್ತು ಕಾಶ್ಮೀರವನ್ನು ಬೇರ್ಪಡಿಸಲು ಸಾಧ್ಯವಿಲ್ಲ’ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ಹೇಳಿದ್ದಾರೆ.<br /> <br /> ‘ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ನಿರ್ಣಯಗಳು ಮತ್ತು ಕಾಶ್ಮೀರದ ಜನರ ಬಯಕೆಯಂತೆ ಬಗೆಹರಿಸಬೇಕು. ಹಾಗಾದಲ್ಲಿ ಈ ವಲಯದಲ್ಲಿ ಶಾಂತಿ ನೆಲೆಸಲು ಸಾಧ್ಯ’ ಎಂದು ಬುಧವಾರ ಇಲ್ಲಿನ ರಾಷ್ಟ್ರೀಯ ರಕ್ಷಣಾ ವಿ.ವಿಯಲ್ಲಿ ನಡೆದ ಸಮಾವೇಶದಲ್ಲಿ ಅವರು ತಿಳಿಸಿದರು.<br /> <br /> ‘ಶತ್ರುಗಳು ಭಯೋತ್ಪಾದನೆಗೆ ಪ್ರಚೋದನೆ ನೀಡುವ ಮೂಲಕ ಪಾಕಿಸ್ತಾನದ ಆಂತರಿಕ ಭದ್ರತೆಗೆ ಧಕ್ಕೆ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ರೀತಿಯ ಕೆಟ್ಟ ಸಂಚುಗಳನ್ನು ಎದುರಿಸುವ ಶಕ್ತಿ ಪಾಕ್ಗೆ ಇದೆ’ ಎಂದು ರಹೀಲ್ ಹೇಳಿರುವುದನ್ನು ‘ಡಾನ್’ ದಿನಪತ್ರಿಕೆ ವರದಿ ಮಾಡಿದೆ.<br /> <br /> <strong>ಭಾರತದ ತೀಕ್ಷ್ಣ ಪ್ರತಿಕ್ರಿಯೆ: </strong>ರಹೀಲ್ ಷರೀಫ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ. ಕೆ. ಸಿಂಗ್ ಅವರು, ‘ಪಾಕಿಸ್ತಾನವು ತಪ್ಪು ಭಾವನೆಗಳನ್ನು ಇಟ್ಟುಕೊಂಡಿರಲಿ. ಆದರೆ ವಾಸ್ತವ ಪರಿಸ್ಥಿತಿಗೆ ಅದು ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>