<p>ಸಿಂಧನೂರು: ಕೆನರಾ ಬ್ಯಾಂಕ್ ಕೇವಲ ಹಣಕಾಸಿನ ವ್ಯವಹಾರ ಮಾಡುವ ಮೂಲಕ ಲಾಭ ಹಾನಿ ಚಿಂತಿಸದೇ, ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಟ್ಟುಕೊಂಡು ಸಮಾಜಮುಖಿ ಕಾರ್ಯ ಮಾಡುತ್ತಿದೆ ಎಂದು ಗುಲ್ಬರ್ಗ ವಲಯದ ಜನರಲ್ ಮ್ಯಾನೇಜರ್ ಬಿ. ಕೃಷ್ಣರೆಡ್ಡಿ ಹೇಳಿದರು.<br /> <br /> ನಗರದ ದುದ್ದುಪೂಡಿ ಮಹಿಳಾ ಕಾಲೇಜಿನಲ್ಲಿ ಸ್ಥಳೀಯ ಕೆನರಾ ಬ್ಯಾಂಕ್, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಬೆಂಗಳೂರು, ದುದ್ದುಪೂಡಿ ಕಾಲೇಜು ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.<br /> <br /> ಕ್ಯಾನ್ಸರ್ನ್ನು ಪ್ರಾರಂಭದ ಹಂತದಲ್ಲಿ ಗುರುತಿಸುವ ಕಾರ್ಯ ಅಗತ್ಯ. ಬಡಜನರು ದೂರದ ಪಟ್ಟಣಗಳಿಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟದಾಯಕ ಸ್ಥಿತಿಯಾಗಿದೆ. ಈ ಹಿನ್ನಲೆಯಲ್ಲಿ ಇಂಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.<br /> <br /> ಬೆಂಗಳೂರಿನ ಕರ್ನಾಟಕ ಕ್ಯಾನ್ಸರ್ ಸೊಸೈಟಿ ಡಾ. ಕುಲಕರ್ಣಿ ಮಾತನಾಡಿ, ರಾಜ್ಯದಲ್ಲಿ ಕ್ಯಾನ್ಸರ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಲ್ಲೂ ಯುವ ಜನಾಂಗ ಗುಟ್ಕಾ, ಧೂಮಪಾನ ದುಶ್ಚಟಗಳಿಂದ ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ. ತಂಬಾಕು ಸೇವನೆ, ಸಿಗರೇಟ್ ಚಟಗಳನ್ನು ರೂಢಿಸಿಕೊಂಡವರು ಅವುಗಳನ್ನು ತ್ಯಜಿಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ಶಿಬಿರದಲ್ಲಿ ಡಾ.ಎಂ.ಆರ್. ಕುಲಕರ್ಣಿ, ಡಾ.ಸತ್ಯವತಿ, ಡಾ.ಸಿಂಧೂರಿ, ಡಾ.ಯಾಸ್ಮೀನ್, ಡಾ.ಆನಂದ ಮೆಹತಾ, ಡಾ. ಜಹೀರ 400ಕ್ಕೂ ಅಧಿಕ ರೋಗಿಗಳ ತಪಾಸಣೆ ನಡೆಸಿ, ಸೂಕ್ತ ಸಲಹೆ ನೀಡಿದರು.<br /> <br /> ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಡಿ. ವಾಸುದೇವರಾವ್, ಸ್ಥಳೀಯ ಶಾಖೆಯ ವ್ಯವಸ್ಥಾಪಕ ವಿರೂಪಾಕ್ಷಿ, ಸಾಯಿನಾಥ್, ಡಿ.ರಾಮಕೃಷ್ಣಮೂರ್ತಿ, ಗುಲ್ಬರ್ಗ ವಿಭಾಗದ ಎನ್ಎಸ್ಎಸ್ ಸಂಯೋಜನಕಾಧಿಕಾರಿ ಎಸ್.ಶಿವರಾಜ, ಕೆ.ಶರಣಬಸವ ವಕೀಲ, ಆರ್.ಸಿ.ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ಕೆನರಾ ಬ್ಯಾಂಕ್ ಕೇವಲ ಹಣಕಾಸಿನ ವ್ಯವಹಾರ ಮಾಡುವ ಮೂಲಕ ಲಾಭ ಹಾನಿ ಚಿಂತಿಸದೇ, ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಟ್ಟುಕೊಂಡು ಸಮಾಜಮುಖಿ ಕಾರ್ಯ ಮಾಡುತ್ತಿದೆ ಎಂದು ಗುಲ್ಬರ್ಗ ವಲಯದ ಜನರಲ್ ಮ್ಯಾನೇಜರ್ ಬಿ. ಕೃಷ್ಣರೆಡ್ಡಿ ಹೇಳಿದರು.<br /> <br /> ನಗರದ ದುದ್ದುಪೂಡಿ ಮಹಿಳಾ ಕಾಲೇಜಿನಲ್ಲಿ ಸ್ಥಳೀಯ ಕೆನರಾ ಬ್ಯಾಂಕ್, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಬೆಂಗಳೂರು, ದುದ್ದುಪೂಡಿ ಕಾಲೇಜು ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.<br /> <br /> ಕ್ಯಾನ್ಸರ್ನ್ನು ಪ್ರಾರಂಭದ ಹಂತದಲ್ಲಿ ಗುರುತಿಸುವ ಕಾರ್ಯ ಅಗತ್ಯ. ಬಡಜನರು ದೂರದ ಪಟ್ಟಣಗಳಿಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟದಾಯಕ ಸ್ಥಿತಿಯಾಗಿದೆ. ಈ ಹಿನ್ನಲೆಯಲ್ಲಿ ಇಂಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.<br /> <br /> ಬೆಂಗಳೂರಿನ ಕರ್ನಾಟಕ ಕ್ಯಾನ್ಸರ್ ಸೊಸೈಟಿ ಡಾ. ಕುಲಕರ್ಣಿ ಮಾತನಾಡಿ, ರಾಜ್ಯದಲ್ಲಿ ಕ್ಯಾನ್ಸರ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಲ್ಲೂ ಯುವ ಜನಾಂಗ ಗುಟ್ಕಾ, ಧೂಮಪಾನ ದುಶ್ಚಟಗಳಿಂದ ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ. ತಂಬಾಕು ಸೇವನೆ, ಸಿಗರೇಟ್ ಚಟಗಳನ್ನು ರೂಢಿಸಿಕೊಂಡವರು ಅವುಗಳನ್ನು ತ್ಯಜಿಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ಶಿಬಿರದಲ್ಲಿ ಡಾ.ಎಂ.ಆರ್. ಕುಲಕರ್ಣಿ, ಡಾ.ಸತ್ಯವತಿ, ಡಾ.ಸಿಂಧೂರಿ, ಡಾ.ಯಾಸ್ಮೀನ್, ಡಾ.ಆನಂದ ಮೆಹತಾ, ಡಾ. ಜಹೀರ 400ಕ್ಕೂ ಅಧಿಕ ರೋಗಿಗಳ ತಪಾಸಣೆ ನಡೆಸಿ, ಸೂಕ್ತ ಸಲಹೆ ನೀಡಿದರು.<br /> <br /> ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಡಿ. ವಾಸುದೇವರಾವ್, ಸ್ಥಳೀಯ ಶಾಖೆಯ ವ್ಯವಸ್ಥಾಪಕ ವಿರೂಪಾಕ್ಷಿ, ಸಾಯಿನಾಥ್, ಡಿ.ರಾಮಕೃಷ್ಣಮೂರ್ತಿ, ಗುಲ್ಬರ್ಗ ವಿಭಾಗದ ಎನ್ಎಸ್ಎಸ್ ಸಂಯೋಜನಕಾಧಿಕಾರಿ ಎಸ್.ಶಿವರಾಜ, ಕೆ.ಶರಣಬಸವ ವಕೀಲ, ಆರ್.ಸಿ.ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>