<p><strong>ಕುಷ್ಟಗಿ:</strong> ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಮತ್ತು ಅಸಮಾಧಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಪ್ರಮುಖರಿಗೆ ಗಾಳ ಹಾಕಿದೆ.<br /> <br /> ಜೆಡಿಎಸ್ ಪಕ್ಷದ ಜಿ.ಪಂ. ಮಾಜಿ ಅಧ್ಯಕ್ಷೆ ಮಾಲತಿ ನಾಯಕ್, ಮಾಜಿ ಸದಸ್ಯರಾದ ಪ್ರಕಾಶ್ ರಾಠೋಡ್, ಕೆಜೆಪಿ ಮುಖಂಡ ಮತ್ತು ಜಿ.ಪಂ ಮಾಜಿ ಸದಸ್ಯ ಫಕೀರಪ್ಪ ಚಳಗೇರಿ, ಹಾಲಿ ಜಿ.ಪಂ. ಸದಸ್ಯೆ ಹನಮಕ್ಕ ಚೌಡ್ಕಿ ಅವರ ಪತಿ ಹನಮಂತಪ್ಪ ಚೌಡ್ಕಿ ಮತ್ತಿತರರನ್ನು ಭೇಟಿ ಮಾಡಿದ ಲೋಕಸಭೆ ಚುನಾವಣೆ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ ಪಕ್ಷಕ್ಕೆ ಅಧಿಕೃತ ಆಹ್ವಾನ ನೀಡಿದರು ಎಂದು ತಿಳಿಸಲಾಗಿದೆ.<br /> <br /> ಈ ವಿಷಯವನ್ನು ‘<strong>ಪ್ರಜಾವಾಣಿ’</strong>ಗೆ ದೃಢಪಡಿಸಿದ ಸಚಿವ ಶಿವರಾಜ ತಂಗಡಗಿ, ಇನ್ನೂ ಅನೇಕ ಪ್ರಮುಖರು ಕಾಂಗ್ರೆಸ್ ಸೇರಲಿದ್ದಾರೆ. ಕನಕಗಿರಿ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಮುಕುಂದರಾವ ಭವಾನಿಮಠ ಅವರನ್ನು ಹೊರತುಪಡಿಸಿ ಉಳಿದೆಲ್ಲ ಬಿಎಸ್ಆರ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಳ್ಳುವರು ಎಂದರು.<br /> <br /> ಅಲ್ಲದೇ ಜಿ.ಪಂ.ನ ಬಿಜೆಪಿ ಸದಸ್ಯ ಪರಸಪ್ಪ ಕತ್ತಿ ಸೇರಿದಂತೆ ಇನ್ನೂ ಕೆಲ ಜಿ.ಪಂ. ಸದಸ್ಯರು ಸಹ ಕಾಂಗ್ರೆಸ್ನೊಂದಿಗೆ ಗುರುತಿಸಿಕೊಳ್ಳಲಿದ್ದು ಕಾನೂನಿನ ತಾಂತ್ರಿಕ ತೊಡಕು ಇರುವ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಬಾಹ್ಯಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂಬದನ್ನು ತಂಗಡಗಿ ಬಹಿರಂಗಪಡಿಸಿದರು. ಜಿ.ಪಂ. ಮಾಜಿ ಅಧ್ಯಕ್ಷೆ ಜೆಡಿಎಸ್ನ ಮಾಲತಿ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಮತ್ತು ಅಸಮಾಧಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಪ್ರಮುಖರಿಗೆ ಗಾಳ ಹಾಕಿದೆ.<br /> <br /> ಜೆಡಿಎಸ್ ಪಕ್ಷದ ಜಿ.ಪಂ. ಮಾಜಿ ಅಧ್ಯಕ್ಷೆ ಮಾಲತಿ ನಾಯಕ್, ಮಾಜಿ ಸದಸ್ಯರಾದ ಪ್ರಕಾಶ್ ರಾಠೋಡ್, ಕೆಜೆಪಿ ಮುಖಂಡ ಮತ್ತು ಜಿ.ಪಂ ಮಾಜಿ ಸದಸ್ಯ ಫಕೀರಪ್ಪ ಚಳಗೇರಿ, ಹಾಲಿ ಜಿ.ಪಂ. ಸದಸ್ಯೆ ಹನಮಕ್ಕ ಚೌಡ್ಕಿ ಅವರ ಪತಿ ಹನಮಂತಪ್ಪ ಚೌಡ್ಕಿ ಮತ್ತಿತರರನ್ನು ಭೇಟಿ ಮಾಡಿದ ಲೋಕಸಭೆ ಚುನಾವಣೆ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ ಪಕ್ಷಕ್ಕೆ ಅಧಿಕೃತ ಆಹ್ವಾನ ನೀಡಿದರು ಎಂದು ತಿಳಿಸಲಾಗಿದೆ.<br /> <br /> ಈ ವಿಷಯವನ್ನು ‘<strong>ಪ್ರಜಾವಾಣಿ’</strong>ಗೆ ದೃಢಪಡಿಸಿದ ಸಚಿವ ಶಿವರಾಜ ತಂಗಡಗಿ, ಇನ್ನೂ ಅನೇಕ ಪ್ರಮುಖರು ಕಾಂಗ್ರೆಸ್ ಸೇರಲಿದ್ದಾರೆ. ಕನಕಗಿರಿ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಮುಕುಂದರಾವ ಭವಾನಿಮಠ ಅವರನ್ನು ಹೊರತುಪಡಿಸಿ ಉಳಿದೆಲ್ಲ ಬಿಎಸ್ಆರ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಳ್ಳುವರು ಎಂದರು.<br /> <br /> ಅಲ್ಲದೇ ಜಿ.ಪಂ.ನ ಬಿಜೆಪಿ ಸದಸ್ಯ ಪರಸಪ್ಪ ಕತ್ತಿ ಸೇರಿದಂತೆ ಇನ್ನೂ ಕೆಲ ಜಿ.ಪಂ. ಸದಸ್ಯರು ಸಹ ಕಾಂಗ್ರೆಸ್ನೊಂದಿಗೆ ಗುರುತಿಸಿಕೊಳ್ಳಲಿದ್ದು ಕಾನೂನಿನ ತಾಂತ್ರಿಕ ತೊಡಕು ಇರುವ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಬಾಹ್ಯಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂಬದನ್ನು ತಂಗಡಗಿ ಬಹಿರಂಗಪಡಿಸಿದರು. ಜಿ.ಪಂ. ಮಾಜಿ ಅಧ್ಯಕ್ಷೆ ಜೆಡಿಎಸ್ನ ಮಾಲತಿ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>