<p><strong>ಯಾದಗಿರಿ: </strong>ಗಂಭೀರ ಸಮಸ್ಯೆಗಳಿಗೆ ಕಾರಣವಾಗಿರುವ ಜಾಗತೀಕರಣ, -ಉದಾರೀಕರಣ, -ಖಾಸಗೀಕರಣ ನೀತಿಗಳ ಬಗ್ಗೆ ಚರ್ಚಿಸುವ ಬದಲು, ಪ್ರಪಂಚದ ದೊಡ್ಡ ಪ್ರಜಾತಂತ್ರ ದೇಶದ ಚುನಾವಣೆ ಪ್ರಚಾರದಲ್ಲಿ ‘ಚಾಯ್ ಪೇ ಚರ್ಚಾ’ದಂತಹ ವಿಷಯವನ್ನು ಚರ್ಚೆಗೆ ಎತ್ತಿಕೊಂಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಧೋರಣೆ ನಾಚಿಕೆಗೇಡಿನದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹೇಳಿದರು.<br /> <br /> ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದ ವಿದ್ಯಾ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> -ದೇಶದ ದುಡಿಯುವ ಜನರಲ್ಲಿ ಶೇ94 ರಷ್ಟಿರುವ ಅಸಂಘಟಿತ ಕಾರ್ಮಿಕರ ಬದುಕು ಶೋಚನೀಯವಾಗಿದೆ. ಈ ವಿಭಾಗಕ್ಕೆ ಸೇರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೌಕರರ ಸ್ಥಾನಮಾನವನ್ನೇ ನಿರಾಕರಿಸಲಾಗಿದ್ದು, ದೇಶದಾದ್ಯಂತ ಲಕ್ಷಾಂತರ ಮಹಿಳೆಯರನ್ನು ಕನಿಷ್ಠ ವೇತನವೂ ಇಲ್ಲದೇ ಗೌರವ ಧನ, ಪ್ರೋತ್ಸಾಹ ಧನ ಇತ್ಯಾದಿಗಳ ಹೆಸರಿನಲ್ಲಿ ಅನಾಗರಿಕವಾಗಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಡಿ. ಉಮಾದೇವಿ ಮಾತನಾಡಿ-, ಸಂಘದ ನೇತೃತ್ವದಲ್ಲಿ ಸತತವಾಗಿ ರಾಜಿರಹಿತ ಹೋರಾಟದ ಮೂಲಕ ಹಲವಾರು ನ್ಯಾಯಯುತ -ಸೌಲಭ್ಯಗಳನ್ನೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪಡೆದುಕೊಂಡಿರುವುದು ಸಂತೋಷದ ಸಂಗತಿ. ಈ ಹಿಂದೆ ಪಡೆದ ಹಲವು ಸೌಕರ್ಯಗಳ ಜೊತೆಯಲ್ಲಿ ಆರೋಗ್ಯ ಇಲಾಖೆಯು ಇತ್ತೀಚೆಗೆ ಇನ್ನೂ ಹಲವು ಸೌಕರ್ಯಗಳನ್ನು ನೀಡುವುದಾಗಿ ಘೋಷಿಸಿರುವುದು ಹರ್ಷದ ವಿಷಯ ಎಂದು ಹೇಳಿದರು.<br /> <br /> ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನದ ಜೊತೆಗೆ, ರಾಜ್ಯ ಸರ್ಕಾರದಿಂದ ಕೇಂದ್ರದಷ್ಟೇ ಸರಿಸಮವಾಗಿ ಮ್ಯಾಚಿಂಗ್ ಗ್ರ್ಯಾಂಟ್ ಪ್ರೋತ್ಸಾಹ ಧನವನ್ನು 2013 ರ ಅಕ್ಟೋಬರ್ 28 ರಿಂದ ನೀಡಲಾಗುವುದು. ರಾಜ್ಯದ 35ಸಾವಿರ ಆಶಾ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್ ಮತ್ತು ಸಿಮ್ಕಾರ್ಡ್ ಸೌಲಭ್ಯವನ್ನು 2ತಿಂಗಳಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಪಿಯು ತೇರ್ಗಡೆಯಾದ ಕಾರ್ಯಕರ್ತೆಯರಿಗೆ ಪ್ರತಿ ವರ್ಷ ನರ್ಸಿಂಗ್ ತರಬೇತಿಯಲ್ಲಿ ಶೇ 10ರಷ್ಟು ಕೋಟಾದಡಿ ಉಚಿತ ತರಬೇತಿ ಹಾಗೂ ಉನ್ನತ ವ್ಯಾಸಂಗಕ್ಕೆ ಸಹಾಯಧನ ನೀಡಲಾಗುವುದು.<br /> ತೀವ್ರವಾದ, ಮಾರಣಾಂತಿಕ ಕಾಯಿಲೆಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಸಂಪೂರ್ಣ ಉಚಿತ ಚಿಕಿತ್ಸೆ, ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.<br /> <br /> ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಮಹಾದೇವಿ, ಸರಸ್ವತಿ, ರೇಣುಕಾ, ಬಸಲಿಂಗಮ್ಮ, ಸಿದ್ದಮ್ಮ, ಅನಿತಾ, ವೇದಿಕೆಯಲ್ಲಿದ್ದರು. ಜಿಲ್ಲೆಯ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಗಂಭೀರ ಸಮಸ್ಯೆಗಳಿಗೆ ಕಾರಣವಾಗಿರುವ ಜಾಗತೀಕರಣ, -ಉದಾರೀಕರಣ, -ಖಾಸಗೀಕರಣ ನೀತಿಗಳ ಬಗ್ಗೆ ಚರ್ಚಿಸುವ ಬದಲು, ಪ್ರಪಂಚದ ದೊಡ್ಡ ಪ್ರಜಾತಂತ್ರ ದೇಶದ ಚುನಾವಣೆ ಪ್ರಚಾರದಲ್ಲಿ ‘ಚಾಯ್ ಪೇ ಚರ್ಚಾ’ದಂತಹ ವಿಷಯವನ್ನು ಚರ್ಚೆಗೆ ಎತ್ತಿಕೊಂಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಧೋರಣೆ ನಾಚಿಕೆಗೇಡಿನದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹೇಳಿದರು.<br /> <br /> ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದ ವಿದ್ಯಾ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> -ದೇಶದ ದುಡಿಯುವ ಜನರಲ್ಲಿ ಶೇ94 ರಷ್ಟಿರುವ ಅಸಂಘಟಿತ ಕಾರ್ಮಿಕರ ಬದುಕು ಶೋಚನೀಯವಾಗಿದೆ. ಈ ವಿಭಾಗಕ್ಕೆ ಸೇರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೌಕರರ ಸ್ಥಾನಮಾನವನ್ನೇ ನಿರಾಕರಿಸಲಾಗಿದ್ದು, ದೇಶದಾದ್ಯಂತ ಲಕ್ಷಾಂತರ ಮಹಿಳೆಯರನ್ನು ಕನಿಷ್ಠ ವೇತನವೂ ಇಲ್ಲದೇ ಗೌರವ ಧನ, ಪ್ರೋತ್ಸಾಹ ಧನ ಇತ್ಯಾದಿಗಳ ಹೆಸರಿನಲ್ಲಿ ಅನಾಗರಿಕವಾಗಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಡಿ. ಉಮಾದೇವಿ ಮಾತನಾಡಿ-, ಸಂಘದ ನೇತೃತ್ವದಲ್ಲಿ ಸತತವಾಗಿ ರಾಜಿರಹಿತ ಹೋರಾಟದ ಮೂಲಕ ಹಲವಾರು ನ್ಯಾಯಯುತ -ಸೌಲಭ್ಯಗಳನ್ನೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪಡೆದುಕೊಂಡಿರುವುದು ಸಂತೋಷದ ಸಂಗತಿ. ಈ ಹಿಂದೆ ಪಡೆದ ಹಲವು ಸೌಕರ್ಯಗಳ ಜೊತೆಯಲ್ಲಿ ಆರೋಗ್ಯ ಇಲಾಖೆಯು ಇತ್ತೀಚೆಗೆ ಇನ್ನೂ ಹಲವು ಸೌಕರ್ಯಗಳನ್ನು ನೀಡುವುದಾಗಿ ಘೋಷಿಸಿರುವುದು ಹರ್ಷದ ವಿಷಯ ಎಂದು ಹೇಳಿದರು.<br /> <br /> ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನದ ಜೊತೆಗೆ, ರಾಜ್ಯ ಸರ್ಕಾರದಿಂದ ಕೇಂದ್ರದಷ್ಟೇ ಸರಿಸಮವಾಗಿ ಮ್ಯಾಚಿಂಗ್ ಗ್ರ್ಯಾಂಟ್ ಪ್ರೋತ್ಸಾಹ ಧನವನ್ನು 2013 ರ ಅಕ್ಟೋಬರ್ 28 ರಿಂದ ನೀಡಲಾಗುವುದು. ರಾಜ್ಯದ 35ಸಾವಿರ ಆಶಾ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್ ಮತ್ತು ಸಿಮ್ಕಾರ್ಡ್ ಸೌಲಭ್ಯವನ್ನು 2ತಿಂಗಳಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಪಿಯು ತೇರ್ಗಡೆಯಾದ ಕಾರ್ಯಕರ್ತೆಯರಿಗೆ ಪ್ರತಿ ವರ್ಷ ನರ್ಸಿಂಗ್ ತರಬೇತಿಯಲ್ಲಿ ಶೇ 10ರಷ್ಟು ಕೋಟಾದಡಿ ಉಚಿತ ತರಬೇತಿ ಹಾಗೂ ಉನ್ನತ ವ್ಯಾಸಂಗಕ್ಕೆ ಸಹಾಯಧನ ನೀಡಲಾಗುವುದು.<br /> ತೀವ್ರವಾದ, ಮಾರಣಾಂತಿಕ ಕಾಯಿಲೆಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಸಂಪೂರ್ಣ ಉಚಿತ ಚಿಕಿತ್ಸೆ, ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.<br /> <br /> ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಮಹಾದೇವಿ, ಸರಸ್ವತಿ, ರೇಣುಕಾ, ಬಸಲಿಂಗಮ್ಮ, ಸಿದ್ದಮ್ಮ, ಅನಿತಾ, ವೇದಿಕೆಯಲ್ಲಿದ್ದರು. ಜಿಲ್ಲೆಯ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>