<p>ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರ ಕನಸಿನ ಸಮಾಜ ನಿರ್ಮಾಣ ಆಗಬೇಕಿದೆ. ಇಂತಹ ಸಮಾಜ ನಿರ್ಮಾಣಕ್ಕೆ ಸರ್ಕಾರ ಪಣ ತೊಟ್ಟಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.<br /> <br /> ‘ಕರ್ನಾಟಕ ರಾಜ್ಯ ಹರಿಜನ ಸೇವಕ’ ಸಂಘದ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ದಲಿತರು, ಅಸ್ಪೃಶ್ಯರು ಹಾಗೂ ಹಿಂದುಳಿದವರು ಮುಖ್ಯವಾಹಿನಿಗೆ ಬರಬೇಕು ಎಂಬುದು ಗಾಂಧೀಜಿ ಅವರ ಕನಸಾಗಿತ್ತು. ಅವರ ಕನಸನ್ನು ನಾವು ಈಡೇರಿಸಬೇಕಿದೆ’ ಎಂದರು.<br /> <br /> ‘ಸ್ವಾತಂತ್ರ್ಯಪೂರ್ವದಲ್ಲಿ ದಲಿತರನ್ನು ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿತ್ತು. ಅವರು ಊರಿನ ಮುಖ್ಯ ಬೀದಿಗೆ ಬರುವಂತೆ ಇರಲಿಲ್ಲ. ವೇದಗಳನ್ನು ಓದುವಂತೆ ಇರಲಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> ಮಾಜಿ ಮೇಯರ್ ಪಿ.ಆರ್.ರಮೇಶ್, ‘ಮೀಸಲಾತಿ ವ್ಯವಸ್ಥೆಯಿಂದ ಸ್ಪರ್ಧಾತ್ಮಕ ಸಮಾಜ ನಿರ್ಮಾಣವಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ಸಂಘದ ಗೌರವ ಅಧ್ಯಕ್ಷೆ ಪ್ರೇಮಾ ಕಾರಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಜಿ.ವಿಜಯ್, ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.<br /> <br /> 2012–13ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ಉತ್ತೀರ್ಣರಾದ ದಲಿತ ವಿದ್ಯಾರ್ಥಿಗಳಿಗೆ ಈ ಸಂದರ್ಭ ವಿದ್ಯಾರ್ಥಿ ವೇತನ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರ ಕನಸಿನ ಸಮಾಜ ನಿರ್ಮಾಣ ಆಗಬೇಕಿದೆ. ಇಂತಹ ಸಮಾಜ ನಿರ್ಮಾಣಕ್ಕೆ ಸರ್ಕಾರ ಪಣ ತೊಟ್ಟಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.<br /> <br /> ‘ಕರ್ನಾಟಕ ರಾಜ್ಯ ಹರಿಜನ ಸೇವಕ’ ಸಂಘದ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ದಲಿತರು, ಅಸ್ಪೃಶ್ಯರು ಹಾಗೂ ಹಿಂದುಳಿದವರು ಮುಖ್ಯವಾಹಿನಿಗೆ ಬರಬೇಕು ಎಂಬುದು ಗಾಂಧೀಜಿ ಅವರ ಕನಸಾಗಿತ್ತು. ಅವರ ಕನಸನ್ನು ನಾವು ಈಡೇರಿಸಬೇಕಿದೆ’ ಎಂದರು.<br /> <br /> ‘ಸ್ವಾತಂತ್ರ್ಯಪೂರ್ವದಲ್ಲಿ ದಲಿತರನ್ನು ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿತ್ತು. ಅವರು ಊರಿನ ಮುಖ್ಯ ಬೀದಿಗೆ ಬರುವಂತೆ ಇರಲಿಲ್ಲ. ವೇದಗಳನ್ನು ಓದುವಂತೆ ಇರಲಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> ಮಾಜಿ ಮೇಯರ್ ಪಿ.ಆರ್.ರಮೇಶ್, ‘ಮೀಸಲಾತಿ ವ್ಯವಸ್ಥೆಯಿಂದ ಸ್ಪರ್ಧಾತ್ಮಕ ಸಮಾಜ ನಿರ್ಮಾಣವಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ಸಂಘದ ಗೌರವ ಅಧ್ಯಕ್ಷೆ ಪ್ರೇಮಾ ಕಾರಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಜಿ.ವಿಜಯ್, ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.<br /> <br /> 2012–13ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ಉತ್ತೀರ್ಣರಾದ ದಲಿತ ವಿದ್ಯಾರ್ಥಿಗಳಿಗೆ ಈ ಸಂದರ್ಭ ವಿದ್ಯಾರ್ಥಿ ವೇತನ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>