<p><strong>ಬೆಂಗಳೂರು:</strong> ‘ಗಾಂಧೀಜಿ ಅವರನ್ನು ಕೇವಲ ಪಠ್ಯದಲ್ಲಿ ಓದಿದರೆ ಪ್ರಯೋಜನವಿಲ್ಲ. ಅವರ ಕುರಿತು ಹೆಚ್ಚು ಅಧ್ಯಯನ ನಡೆಸಿ ಅವರ ತತ್ವ, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಗಾಂಧಿವಾದಿ ಗೌತಮ್ ಬಜಾಜ್ ಹೇಳಿದರು.<br /> <br /> ಶೇಷಾದ್ರಿಪುರ ಕಾಲೇಜು, ಗಾಂಧಿ ಅಧ್ಯಯನ ಕೇಂದ್ರ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ‘ಗಾಂಧಿ–ವಿನೋಬ’ ಗಾಂಧಿವಾದಿ ಮತ್ತು ವಿದ್ಯಾರ್ಥಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> ‘ಸದ್ಯದ ರಾಜಕೀಯ, ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿದರೆ ಗಾಂಧೀಜಿ ಮತ್ತು ಅವರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತವೆನಿಸುತ್ತವೆ’ ಎಂದರು.<br /> <br /> ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್, ‘ಗಾಂಧೀಜಿ ಅವರನ್ನು ಅರ್ಥಮಾಡಿಕೊಳ್ಳಲು ವಿನೋಬ ಭಾವೆ ಕೀಲಿಕೈ ಇದ್ದ ಹಾಗೆ’ ಎಂದರು.<br /> <br /> ‘ಬಾಪು ಅವರಿಗೆ ದೇಶದ ಸಮಸ್ಯೆ ಚಿತ್ರಣ ಕಂಡರೆ, ವಿನೋಬ ತನ್ನೊಳಗೆ ಪರಿವರ್ತನೆ ಆಗಬೇಕು ಎಂದು ಬಯಸುತ್ತಿದ್ದರು. ಗಾಂಧೀಜಿ ಮತ್ತು ವಿನೋಬ ಅವರು ಪ್ರಯೋಗಗಳ ಮೂಲಕ ತತ್ವಗಳನ್ನು ರೂಪಿಸಿ ಜೀವನದಲ್ಲಿ ಅಳವಡಿಸಿಕೊಂಡವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗಾಂಧೀಜಿ ಅವರನ್ನು ಕೇವಲ ಪಠ್ಯದಲ್ಲಿ ಓದಿದರೆ ಪ್ರಯೋಜನವಿಲ್ಲ. ಅವರ ಕುರಿತು ಹೆಚ್ಚು ಅಧ್ಯಯನ ನಡೆಸಿ ಅವರ ತತ್ವ, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಗಾಂಧಿವಾದಿ ಗೌತಮ್ ಬಜಾಜ್ ಹೇಳಿದರು.<br /> <br /> ಶೇಷಾದ್ರಿಪುರ ಕಾಲೇಜು, ಗಾಂಧಿ ಅಧ್ಯಯನ ಕೇಂದ್ರ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ‘ಗಾಂಧಿ–ವಿನೋಬ’ ಗಾಂಧಿವಾದಿ ಮತ್ತು ವಿದ್ಯಾರ್ಥಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> ‘ಸದ್ಯದ ರಾಜಕೀಯ, ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿದರೆ ಗಾಂಧೀಜಿ ಮತ್ತು ಅವರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತವೆನಿಸುತ್ತವೆ’ ಎಂದರು.<br /> <br /> ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್, ‘ಗಾಂಧೀಜಿ ಅವರನ್ನು ಅರ್ಥಮಾಡಿಕೊಳ್ಳಲು ವಿನೋಬ ಭಾವೆ ಕೀಲಿಕೈ ಇದ್ದ ಹಾಗೆ’ ಎಂದರು.<br /> <br /> ‘ಬಾಪು ಅವರಿಗೆ ದೇಶದ ಸಮಸ್ಯೆ ಚಿತ್ರಣ ಕಂಡರೆ, ವಿನೋಬ ತನ್ನೊಳಗೆ ಪರಿವರ್ತನೆ ಆಗಬೇಕು ಎಂದು ಬಯಸುತ್ತಿದ್ದರು. ಗಾಂಧೀಜಿ ಮತ್ತು ವಿನೋಬ ಅವರು ಪ್ರಯೋಗಗಳ ಮೂಲಕ ತತ್ವಗಳನ್ನು ರೂಪಿಸಿ ಜೀವನದಲ್ಲಿ ಅಳವಡಿಸಿಕೊಂಡವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>