<p><strong>ತರೀಕೆರೆ: </strong> ಜಯಪ್ರಕಾಶ್ ಅವರ ಗೆಲುವು ನಿಶ್ಚಿತ. ಇವರ ಗೆಲುವನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.<br /> <br /> ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ಮೂಲಕ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರವಾಗಿ ಮತ ಯಾಚಿಸಿ ಮಾತನಾಡಿದರು.<br /> <br /> ತರೀಕೆರೆ ಕ್ಷೇತ್ರ ಮತ್ತೊಮ್ಮೆ ಜಯಪ್ರಕಾಶ್ ಹೆಗ್ಡೆ ಅವರಿಗೆ ಹೆಚ್ಚಿನ ಮತವನ್ನು ತಂದು ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಕ್ಷೇತ್ರದಲ್ಲಿ ಸಂಸದರ ನಿಧಿ ಮತ್ತು ಅನುದಾನ ದಿಂದ ಹಾಗೂ ತಮ್ಮ ಅಧಿಕಾರಾವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳು ಹೆಗ್ಡೆ ಗೆಲವಿಗೆ ಪೂರಕವಾಗಲಿದೆ ಎಂದರು.<br /> <br /> ಬಿಜೆಪಿ ಅಭ್ಯರ್ಥಿಯನ್ನು ಮತ ದಾರ ಹೊರಗಿನ ಅಭ್ಯರ್ಥಿ ಎಂದು ತಿರಸ್ಕರಿಸಲಿದ್ದಾನೆ. ಜನರು ಸದಾ ತಮ್ಮೊಂದಿಗಿರುವ, ಬೆರಯುವ ಅಭ್ಯರ್ಥಿಗಳನ್ನು ಇಚ್ಚಿಸುತ್ತಾರೆ. ಈ ನಿಟ್ಟಿನಲ್ಲಿ ಜಯಪ್ರಕಾಶ್ ಹೆಗ್ಡೆ ಸತತ ಐದಾರು ವರ್ಷಗಳಿಂದ ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿದ್ದು ಜನರೊಂದಿಗೆ ಇರುವುದು ಅವರಿಗೆ ಶ್ರೀರಕ್ಷೆ ಆಗಲಿದೆ ಎಂದರು.<br /> <br /> ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುನಿಲ್ ದತ್ತ, ಸದಸ್ಯರಾದ ಈರಣ್ಣ, ಅಶೋಕ್, ಧರ್ಮರಾಜ್, ಅಣ್ಣಪ್ಪ, ವರ್ಮ ಪ್ರಕಾಶ್, ಮುಖಂಡರಾದ ಮಂಜುನಾಥ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ: </strong> ಜಯಪ್ರಕಾಶ್ ಅವರ ಗೆಲುವು ನಿಶ್ಚಿತ. ಇವರ ಗೆಲುವನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.<br /> <br /> ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ಮೂಲಕ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರವಾಗಿ ಮತ ಯಾಚಿಸಿ ಮಾತನಾಡಿದರು.<br /> <br /> ತರೀಕೆರೆ ಕ್ಷೇತ್ರ ಮತ್ತೊಮ್ಮೆ ಜಯಪ್ರಕಾಶ್ ಹೆಗ್ಡೆ ಅವರಿಗೆ ಹೆಚ್ಚಿನ ಮತವನ್ನು ತಂದು ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಕ್ಷೇತ್ರದಲ್ಲಿ ಸಂಸದರ ನಿಧಿ ಮತ್ತು ಅನುದಾನ ದಿಂದ ಹಾಗೂ ತಮ್ಮ ಅಧಿಕಾರಾವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳು ಹೆಗ್ಡೆ ಗೆಲವಿಗೆ ಪೂರಕವಾಗಲಿದೆ ಎಂದರು.<br /> <br /> ಬಿಜೆಪಿ ಅಭ್ಯರ್ಥಿಯನ್ನು ಮತ ದಾರ ಹೊರಗಿನ ಅಭ್ಯರ್ಥಿ ಎಂದು ತಿರಸ್ಕರಿಸಲಿದ್ದಾನೆ. ಜನರು ಸದಾ ತಮ್ಮೊಂದಿಗಿರುವ, ಬೆರಯುವ ಅಭ್ಯರ್ಥಿಗಳನ್ನು ಇಚ್ಚಿಸುತ್ತಾರೆ. ಈ ನಿಟ್ಟಿನಲ್ಲಿ ಜಯಪ್ರಕಾಶ್ ಹೆಗ್ಡೆ ಸತತ ಐದಾರು ವರ್ಷಗಳಿಂದ ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿದ್ದು ಜನರೊಂದಿಗೆ ಇರುವುದು ಅವರಿಗೆ ಶ್ರೀರಕ್ಷೆ ಆಗಲಿದೆ ಎಂದರು.<br /> <br /> ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುನಿಲ್ ದತ್ತ, ಸದಸ್ಯರಾದ ಈರಣ್ಣ, ಅಶೋಕ್, ಧರ್ಮರಾಜ್, ಅಣ್ಣಪ್ಪ, ವರ್ಮ ಪ್ರಕಾಶ್, ಮುಖಂಡರಾದ ಮಂಜುನಾಥ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>