<p><strong>ಪಡುವರಿ (ಬೈಂದೂರು)</strong>: ಯಾವುದೇ ವೈದ್ಯಕೀಯ ಪರಿಹಾರವಿಲ್ಲದ ಎಚ್ಐವಿ ಮತ್ತು ಏಡ್ಸ್ನ ನಿಯಂತ್ರಣ ಜನರನ್ನು ಆ ನಿಟ್ಟಿನಲ್ಲಿ ಜಾಗೃತಗೊಳಿಸುವುದರಿಂದ ಮಾತ್ರ ಸಾಧ್ಯವಾಗಬಲ್ಲುದು. ಅದಕ್ಕಾಗಿ ಕರಾವಳಿಯಲ್ಲಿ ಜನಪ್ರಿಯವಾಗಿರುವ ಯಕ್ಷಗಾನ ಕಲಾ ಮಾಧ್ಯಮ ಬಳಸುತ್ತಿರುವುದು ಒಂದು ಉತ್ತಮ ಕಾರ್ಯ ಎಂದು ಪಡುವರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ಬಟವಾಡಿ ಹೇಳಿದರು.<br /> <br /> ರಾಜ್ಯ ಏಡ್ಸ್ ತಡೆ ಸೊಸೈಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪಡುವರಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಮಿತ್ರ ಮಂಡಳಿ ರಂಗ ಮಂದಿರದಲ್ಲಿ ಇತ್ತೀಚೆಗೆ ನಡೆದ ಯಕ್ಷಗಾನ ಜನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರದರ್ಶನ ನೀಡಲಿದ್ದ ತುಮರಿ ಯಕ್ಷ ಬಳಗದ ಸಂಚಾಲಕ ಟಿ.ಎಂ. ಶೇಷಗಿರಿ ಕಲೆ ರಂಜನೆ ನೀಡುವುದರ ಜತೆಗೆ ಅರಿವು ಮೂಡಿಸುವ ಕೆಲಸವನ್ನೂ ಮಾಡುತ್ತದೆ ಎಂದು ಹೇಳಿದರು. ಜೀವವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಆರ್. ಸೋಮನಾಥನ್ ಎಚ್ಐವಿ ಸೋಂಕು ಕಾಯಿಲೆ ಅಲ್ಲ. ಆ ರೋಗಿಗಳನ್ನು ಅನ್ಯರು ಮಾನವೀಯತೆಯಿಂದ ಕಾಣಬೇಕು ಎಂದರು.<br /> <br /> ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷ್ಮಿ ದೇವಾಡಿಗ, ಸದಸ್ಯೆ ಮಂಗಲಾ ಟಿ. ಕೆ., ಮಿತ್ರ ಮಂಡಳಿ ಅಧ್ಯಕ್ಷ ದಿನಕರ, ಆರೋಗ್ಯ ಇಲಾಖೆಯ ಮಂಜುಳಾ, ರಾಜಪ್ಪ ಇದ್ದರು. ‘ಸ್ವಾಸ್ಥ್ಯ ಸಂಕ್ರಾಂತಿ’ ಪ್ರಸಂಗದ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುವರಿ (ಬೈಂದೂರು)</strong>: ಯಾವುದೇ ವೈದ್ಯಕೀಯ ಪರಿಹಾರವಿಲ್ಲದ ಎಚ್ಐವಿ ಮತ್ತು ಏಡ್ಸ್ನ ನಿಯಂತ್ರಣ ಜನರನ್ನು ಆ ನಿಟ್ಟಿನಲ್ಲಿ ಜಾಗೃತಗೊಳಿಸುವುದರಿಂದ ಮಾತ್ರ ಸಾಧ್ಯವಾಗಬಲ್ಲುದು. ಅದಕ್ಕಾಗಿ ಕರಾವಳಿಯಲ್ಲಿ ಜನಪ್ರಿಯವಾಗಿರುವ ಯಕ್ಷಗಾನ ಕಲಾ ಮಾಧ್ಯಮ ಬಳಸುತ್ತಿರುವುದು ಒಂದು ಉತ್ತಮ ಕಾರ್ಯ ಎಂದು ಪಡುವರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ಬಟವಾಡಿ ಹೇಳಿದರು.<br /> <br /> ರಾಜ್ಯ ಏಡ್ಸ್ ತಡೆ ಸೊಸೈಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪಡುವರಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಮಿತ್ರ ಮಂಡಳಿ ರಂಗ ಮಂದಿರದಲ್ಲಿ ಇತ್ತೀಚೆಗೆ ನಡೆದ ಯಕ್ಷಗಾನ ಜನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರದರ್ಶನ ನೀಡಲಿದ್ದ ತುಮರಿ ಯಕ್ಷ ಬಳಗದ ಸಂಚಾಲಕ ಟಿ.ಎಂ. ಶೇಷಗಿರಿ ಕಲೆ ರಂಜನೆ ನೀಡುವುದರ ಜತೆಗೆ ಅರಿವು ಮೂಡಿಸುವ ಕೆಲಸವನ್ನೂ ಮಾಡುತ್ತದೆ ಎಂದು ಹೇಳಿದರು. ಜೀವವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಆರ್. ಸೋಮನಾಥನ್ ಎಚ್ಐವಿ ಸೋಂಕು ಕಾಯಿಲೆ ಅಲ್ಲ. ಆ ರೋಗಿಗಳನ್ನು ಅನ್ಯರು ಮಾನವೀಯತೆಯಿಂದ ಕಾಣಬೇಕು ಎಂದರು.<br /> <br /> ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷ್ಮಿ ದೇವಾಡಿಗ, ಸದಸ್ಯೆ ಮಂಗಲಾ ಟಿ. ಕೆ., ಮಿತ್ರ ಮಂಡಳಿ ಅಧ್ಯಕ್ಷ ದಿನಕರ, ಆರೋಗ್ಯ ಇಲಾಖೆಯ ಮಂಜುಳಾ, ರಾಜಪ್ಪ ಇದ್ದರು. ‘ಸ್ವಾಸ್ಥ್ಯ ಸಂಕ್ರಾಂತಿ’ ಪ್ರಸಂಗದ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>