<p><strong>ಬೆಂಗಳೂರು:</strong> ‘ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವೇಮುಲ ರೋಹಿತ್ ಸಾವಿನ ಪ್ರಕರಣದಲ್ಲಿ ಜಾತಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಅಮಾನವೀಯ’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.<br /> <br /> ಆವಿಷ್ಕಾರ ಸಂಸ್ಥೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ 20ನೇ ಬೀದಿ ನಾಟಕೋತ್ಸವ ಅಂಗವಾಗಿ ರಾಷ್ಟ್ರೀಯ ರಂಗೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ರೋಹಿತ್ ದಲಿತ ಜಾತಿಗೆ ಸೇರಿದವರು, ಅಲ್ಲ ಎಂಬ ಚರ್ಚೆ ನಡೆಯುತ್ತಿದೆ. ಆದರೆ ದಲಿತ, ಹಿಂದುಳಿದ ವರ್ಗ, ಮೇಲ್ಜಾತಿಯನ್ನು ಮೀರಿ ಒಂದು ಜೀವ ಹೋಗಿದೆ’ ಎಂದರು.<br /> <br /> ‘ಸರ್ಕಾರಿ ಪ್ರಾಯೋಜಿತ ಜಾತಿ ರಾಜಕೀಯ ಈ ಪ್ರಕರಣದಲ್ಲಿ ಪ್ರವೇಶ ಪಡೆದಿದೆ. ಎಲ್ಲೋ ಇದ್ದ ರೋಹಿತ್ ತಂದೆಯನ್ನು ಕರೆತಂದು ಪತ್ರಿಕಾಗೋಷ್ಠಿ ಮಾಡುತ್ತಾರೆ. ಆದರೆ ರೋಹಿತ್ನ ಅಣ್ಣ, ತಂದೆಗೂ ನಮಗೂ ಸಂಬಂಧ ಇಲ್ಲ ಎನ್ನುತ್ತಾರೆ. ಸಾವಿನ ಸಂದರ್ಭದಲ್ಲಿ ಒಂದು ಕುಟುಂಬವನ್ನು ಬೀದಿಗೆ ತರುತ್ತಿರುವುದು ವಿಷಾದನೀಯ’ ಎಂದು ಅವರು ಹೇಳಿದರು.<br /> <br /> ‘ರೋಹಿತ್ನ ಎಡಪಂಥೀಯ ವಿಚಾರಧಾರೆಗಳನ್ನು ಒಪ್ಪಬಹುದು, ತಿರಸ್ಕರಿಬಹುದು. ಆದರೆ ಸರ್ಕಾರ ಎಡ, ಬಲಪಂಥೀಯ ಸಿದ್ಧಾಂತ ಬಿಟ್ಟು ಜೀವಪಂಥೀಯವಾಗಿರಬೇಕು. ವಿಷಾದವೆಂದರೆ ಸರ್ಕಾರಗಳು ಎಡವಟ್ಟುಪಂಥೀಯವಾಗಿವೆ’ ಎಂದು ವ್ಯಂಗ್ಯವಾಡಿದರು.<br /> <br /> ಆವಿಷ್ಕಾರ ಸಂಸ್ಥೆಯ ಸಂಚಾಲಕ ಬಿ.ಆರ್. ಮಂಜುನಾಥ್ ಅವರು ರೋಹಿತ್ ಸಾವಿನ ಕುರಿತು ಗೊತ್ತುವಳಿ ಮಂಡಿಸಿದರು. ‘ರೋಹಿತ್ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಸಹಿಷ್ಣುತೆಗೆ ಭಂಗ ತರುವ ಶಕ್ತಿಗಳನ್ನು ಮಟ್ಟಹಾಕಬೇಕು.<br /> <br /> ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರು ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವೇಮುಲ ರೋಹಿತ್ ಸಾವಿನ ಪ್ರಕರಣದಲ್ಲಿ ಜಾತಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಅಮಾನವೀಯ’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.<br /> <br /> ಆವಿಷ್ಕಾರ ಸಂಸ್ಥೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ 20ನೇ ಬೀದಿ ನಾಟಕೋತ್ಸವ ಅಂಗವಾಗಿ ರಾಷ್ಟ್ರೀಯ ರಂಗೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ರೋಹಿತ್ ದಲಿತ ಜಾತಿಗೆ ಸೇರಿದವರು, ಅಲ್ಲ ಎಂಬ ಚರ್ಚೆ ನಡೆಯುತ್ತಿದೆ. ಆದರೆ ದಲಿತ, ಹಿಂದುಳಿದ ವರ್ಗ, ಮೇಲ್ಜಾತಿಯನ್ನು ಮೀರಿ ಒಂದು ಜೀವ ಹೋಗಿದೆ’ ಎಂದರು.<br /> <br /> ‘ಸರ್ಕಾರಿ ಪ್ರಾಯೋಜಿತ ಜಾತಿ ರಾಜಕೀಯ ಈ ಪ್ರಕರಣದಲ್ಲಿ ಪ್ರವೇಶ ಪಡೆದಿದೆ. ಎಲ್ಲೋ ಇದ್ದ ರೋಹಿತ್ ತಂದೆಯನ್ನು ಕರೆತಂದು ಪತ್ರಿಕಾಗೋಷ್ಠಿ ಮಾಡುತ್ತಾರೆ. ಆದರೆ ರೋಹಿತ್ನ ಅಣ್ಣ, ತಂದೆಗೂ ನಮಗೂ ಸಂಬಂಧ ಇಲ್ಲ ಎನ್ನುತ್ತಾರೆ. ಸಾವಿನ ಸಂದರ್ಭದಲ್ಲಿ ಒಂದು ಕುಟುಂಬವನ್ನು ಬೀದಿಗೆ ತರುತ್ತಿರುವುದು ವಿಷಾದನೀಯ’ ಎಂದು ಅವರು ಹೇಳಿದರು.<br /> <br /> ‘ರೋಹಿತ್ನ ಎಡಪಂಥೀಯ ವಿಚಾರಧಾರೆಗಳನ್ನು ಒಪ್ಪಬಹುದು, ತಿರಸ್ಕರಿಬಹುದು. ಆದರೆ ಸರ್ಕಾರ ಎಡ, ಬಲಪಂಥೀಯ ಸಿದ್ಧಾಂತ ಬಿಟ್ಟು ಜೀವಪಂಥೀಯವಾಗಿರಬೇಕು. ವಿಷಾದವೆಂದರೆ ಸರ್ಕಾರಗಳು ಎಡವಟ್ಟುಪಂಥೀಯವಾಗಿವೆ’ ಎಂದು ವ್ಯಂಗ್ಯವಾಡಿದರು.<br /> <br /> ಆವಿಷ್ಕಾರ ಸಂಸ್ಥೆಯ ಸಂಚಾಲಕ ಬಿ.ಆರ್. ಮಂಜುನಾಥ್ ಅವರು ರೋಹಿತ್ ಸಾವಿನ ಕುರಿತು ಗೊತ್ತುವಳಿ ಮಂಡಿಸಿದರು. ‘ರೋಹಿತ್ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಸಹಿಷ್ಣುತೆಗೆ ಭಂಗ ತರುವ ಶಕ್ತಿಗಳನ್ನು ಮಟ್ಟಹಾಕಬೇಕು.<br /> <br /> ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರು ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>