<p><strong>ಬೆಂಗಳೂರು: </strong>‘ಜಗತ್ತಿನೆಲ್ಲೆಡೆ ಅಪಘಾತ ಅಥವಾ ಅಪರಾಧ ಚಟುವಟಿಕೆಗಳ ಸಂದರ್ಭದಲ್ಲಿ ತಲೆಗೆ ಗಾಯವಾಗಿ ಸಾವನ್ನಪ್ಪುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ’ ಎಂದು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎನ್.ಕೆ.ವೆಂಕಟರಮಣ ತಿಳಿಸಿದರು.<br /> <br /> ‘ವಿಶ್ವ ತಲೆ ಗಾಯ ಜಾಗೃತಿ ದಿನ’ದ ಅಂಗವಾಗಿ ನಗರ ಸಂಚಾರ ಪೊಲೀಸ್ ವಿಭಾಗ ಮತ್ತು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಜಾಗತಿಕವಾಗಿ ಅಪರಾಧ ಕೃತ್ಯ ಮತ್ತು ಅಪಘಾತಗಳ ಸಂದರ್ಭದಲ್ಲಿ ತಲೆಗೆ ಪೆಟ್ಟಾಗಿ ಪ್ರತಿ ವರ್ಷ ಸುಮಾರು 12 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಅದೇ ರೀತಿ 50 ಲಕ್ಷ ಮಂದಿ ಶಾಶ್ವತವಾಗಿ ಅಂಗವಿಕಲರಾಗುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ’ ಎಂದು ಹೇಳಿದರು.<br /> <br /> ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ.ದಯಾನಂದ ಮಾತನಾಡಿ, ‘ವಾಹನ ಸವಾರರು ಸುರಕ್ಷಿತ ಚಾಲನೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಪಾನಮತ್ತರಾಗಿ ವಾಹನ ಚಾಲನೆ ಮಾಡಬಾರದು’ ಎಂದು ಸಲಹೆ ನೀಡಿದರು.<br /> <br /> ರಸ್ತೆ ಅಪಘಾತ ಅಥವಾ ಅಪರಾಧ ಚಟುವಟಿಕೆಗಳ ಸಂದರ್ಭದಲ್ಲಿ ಗಾಯಗೊಳ್ಳುವ ವ್ಯಕ್ತಿಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ವೆಂಕಟರಮಣ ಅವರು ಪ್ರಾತ್ಯಕ್ಷಿಕೆ ಮೂಲಕ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಜಗತ್ತಿನೆಲ್ಲೆಡೆ ಅಪಘಾತ ಅಥವಾ ಅಪರಾಧ ಚಟುವಟಿಕೆಗಳ ಸಂದರ್ಭದಲ್ಲಿ ತಲೆಗೆ ಗಾಯವಾಗಿ ಸಾವನ್ನಪ್ಪುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ’ ಎಂದು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎನ್.ಕೆ.ವೆಂಕಟರಮಣ ತಿಳಿಸಿದರು.<br /> <br /> ‘ವಿಶ್ವ ತಲೆ ಗಾಯ ಜಾಗೃತಿ ದಿನ’ದ ಅಂಗವಾಗಿ ನಗರ ಸಂಚಾರ ಪೊಲೀಸ್ ವಿಭಾಗ ಮತ್ತು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಜಾಗತಿಕವಾಗಿ ಅಪರಾಧ ಕೃತ್ಯ ಮತ್ತು ಅಪಘಾತಗಳ ಸಂದರ್ಭದಲ್ಲಿ ತಲೆಗೆ ಪೆಟ್ಟಾಗಿ ಪ್ರತಿ ವರ್ಷ ಸುಮಾರು 12 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಅದೇ ರೀತಿ 50 ಲಕ್ಷ ಮಂದಿ ಶಾಶ್ವತವಾಗಿ ಅಂಗವಿಕಲರಾಗುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ’ ಎಂದು ಹೇಳಿದರು.<br /> <br /> ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ.ದಯಾನಂದ ಮಾತನಾಡಿ, ‘ವಾಹನ ಸವಾರರು ಸುರಕ್ಷಿತ ಚಾಲನೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಪಾನಮತ್ತರಾಗಿ ವಾಹನ ಚಾಲನೆ ಮಾಡಬಾರದು’ ಎಂದು ಸಲಹೆ ನೀಡಿದರು.<br /> <br /> ರಸ್ತೆ ಅಪಘಾತ ಅಥವಾ ಅಪರಾಧ ಚಟುವಟಿಕೆಗಳ ಸಂದರ್ಭದಲ್ಲಿ ಗಾಯಗೊಳ್ಳುವ ವ್ಯಕ್ತಿಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ವೆಂಕಟರಮಣ ಅವರು ಪ್ರಾತ್ಯಕ್ಷಿಕೆ ಮೂಲಕ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>