<p><strong>ಚಿತ್ರದುರ್ಗ: </strong>‘ಇಚ್ಛಾಶಕ್ತಿ, ಜ್ಞಾನಶಕ್ತಿ ಮತ್ತು ಕ್ರಿಯಾಶಕ್ತಿಗಳು ವ್ಯಕ್ತಿತ್ವದ ಭಾಗವಾದರೆ, ಮನುಷ್ಯನ ಬೌದ್ಧಿಕ ಸಾಮರ್ಥ್ಯ ಹೆಚ್ಚುತ್ತದೆ. ಇದು ಮನುಷ್ಯನ ಬೆಳವಣಿಗೆಯ ಒಂದು ಭಾಗವಾಗುತ್ತದೆ’ ಎಂದು ಮುರುಘಾಮಠದ ಶಿವಮೂರ್ತಿ ಶರಣರು ಅಭಿಪ್ರಾಯಪಟ್ಟರು.<br /> <br /> ನಗರದ ಎಸ್.ಜೆ.ಎಂ. ಮಹಿಳಾ ಕಾಲೇಜಿನಲ್ಲಿ ಗುರುವಾರ ನಡೆದ 2016-–17 ನೇ ಸಾಲಿನ ಕ್ರೀಡಾ, ಸಾಂಸ್ಕೖತಿಕ, ಯೂತ್್ ರೆಡ್್ ಕ್ರಾಸ್್ ಹಾಗೂ ಎನ್.ಎಸ್.ಎಸ್. ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಬೌದ್ಧಿಕ ಸಾಮರ್ಥ್ಯ ಉತ್ತಮ ಕಾರ್ಯಗಳಿಗೆ ಬಳಕೆಯಾಗಬೇಕು. ಅಂಥ ಬುದ್ಧಿ ಉಪಯೋಗಿಸಿಕೊಂಡು ಒಬ್ಬ ಮನುಷ್ಯ ಏಕಕಾಲದಲ್ಲಿ ನಾಲ್ಕೈದು ಕೆಲಸ ಮಾಡುವಷ್ಟು ಸಮರ್ಥನಾಗಿರುತ್ತಾನೆ ಸಾಮರ್ಥ್ಯ ವೃದ್ಧಿಯಾದರೆ, ಅವಕಾಶಗಳು ಮನೆಬಾಗಿಲಿಗೇ ಅರಸಿ ಬರುತ್ತವೆ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.<br /> <br /> ‘ಡಿ.ಟಿ.ಪಿ. ಅನಿಮೇಷನ್, ಗ್ರಾಫಿಕ್ ಡಿಸೈನ್ಂತಹ ಕೌಶಲ್ಯಯುತ ವೃತ್ತಿಗಳನ್ನು ಕರಗತ ಮಾಡಿಕೊಂಡರೆ, ಕಲಾ ಪದವೀಧರರಿಗೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿಯಾಗುತ್ತವೆ. ಹಾಗೆಯೇ ಆಧುನಿಕ ತಂತ್ರಜ್ಞಾನ ಅರಿತವರು, ಅದನ್ನು ಉತ್ತಮ ಕೆಲಸಗಳಿಗೆ ಬಳಸಬೇಕೇ ವಿನಾ, ಸಮಾಜ ಘಾತಕ ಕಾರ್ಯಗಳಿಗಲ್ಲ’ ಎಂದರು.<br /> <br /> ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, ‘ಮಹಿಳಾ ಸಬಲೀಕರಣ ಎನ್ನುವುದು ಎಲ್ಲ ರಂಗಗಳಲ್ಲೂ ಕಾಣಿಸುತ್ತಿದೆ ಶಿಕ್ಷಣ, ರಾಜಕೀಯ ಮತ್ತಿತರ ಕ್ಷೇತ್ರಗಳಲ್ಲಿ ಈ ಸಬಲೀಕರಣ ತುಸು ಪ್ರಗತಿಯಾಗಬೇಕಿದೆ’ ಎಂದರು.<br /> <br /> ‘ಶಿಕ್ಷಣಕ್ಕೆ ಮಹತ್ವದ ಬಗ್ಗೆ ಸರಿಯಾದ ಅರಿವಿಲ್ಲದ್ದರಿಂದಲೇ ಹಳ್ಳಿಗಳಲ್ಲಿ ಮಹಿಳಾ ಶಿಕ್ಷಣದ ಪ್ರಗತಿಗೆ ತೊಡಕಾಗಿದೆ. ಶಿಕ್ಷಣಕ್ಕೆ ಆದ್ಯತೆ ಕೊಡುವ ಮೂಲಕ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ಪಾಲ್ಗೊಳ್ಳುವಂತೆ ಮಾಡಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ’ ಎಂದರು.<br /> <br /> ‘ಮಹಿಳಾ ಸ್ವಸಹಾಯ ಸಂಘಗಳಿಗೆ ಬೆಂಬಲ, ಉಚಿತ ಕಡ್ಡಾಯ ಶಿಕ್ಷಣ, ಲೈಂಗಿಕ, ವರದಕ್ಷಿಣೆ ಕಿರುಕುಳಗಳನ್ನು ತಡೆಯಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅಸಹಾಯಕರಿಗೂ ನೆರವು ನೀಡುತ್ತಿದೆ. ಇವೆಲ್ಲ ಸದ್ಬಳಕೆಯಾಗಬೇಕಿದೆ’ ಎಂದರು.<br /> <br /> ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಕೆ.ವಿ. ಪ್ರಭಾಕರ್ ಮಾತನಾಡಿ, ‘ಪಠ್ಯಗಳ ಜತೆ, ಕ್ರೀಡೆಯಲ್ಲೂ ಭಾಗವಹಿಸಬೇಕು. ಇದು ವಿದ್ಯಾರ್ಥಿಗಳ ಓದಿನ ಭಾಗವಾಗಬೇಕು. ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ರಕ್ತದಾನ ಮಾಡಿ, ಇದರಿಂದ ದೇಹಾರೋಗ್ಯವೂ ಸುಧಾರಿಸುತ್ತದೆ’ ಎಂದರು.<br /> <br /> ಪ್ರಾಚಾರ್ಯ ಎಂ.ಎಸ್. ಕರಿಸಿದ್ದೇಶ್ವರ ಸ್ವಾಮಿ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಗುರಿ ಇಟ್ಟುಕೊಳ್ಳುವುದು ಮತ್ತು ಅದನ್ನು ತಲುಪುವ ಸಲುವಾಗಿ ಶ್ರಮವಹಿಸುವುದು ಬಹಳ ಮುಖ್ಯವಾದ ಕೆಲಸ. ಔಪಚಾರಿಕ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಅವಕಾಶ ಮಾಡಿಕೊಡಬೇಕು’ ಎಂದರು.<br /> <br /> ಕಾರ್ಯಕ್ರಮದಲ್ಲಿ ನಾಗಶ್ರೀ ಪ್ರಾರ್ಥಿಸಿದರು. ಅಶ್ವಿನಿ ಸ್ವಾಗತಿಸಿದರು. ಜ್ಯೋತಿ ವಂದಿಸಿದರು. ಪೂಜಾ ಕಾರ್ಯಕ್ರಮ ನಿರ್ವಹಿಸಿದರು. ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕೖತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಇಚ್ಛಾಶಕ್ತಿ, ಜ್ಞಾನಶಕ್ತಿ ಮತ್ತು ಕ್ರಿಯಾಶಕ್ತಿಗಳು ವ್ಯಕ್ತಿತ್ವದ ಭಾಗವಾದರೆ, ಮನುಷ್ಯನ ಬೌದ್ಧಿಕ ಸಾಮರ್ಥ್ಯ ಹೆಚ್ಚುತ್ತದೆ. ಇದು ಮನುಷ್ಯನ ಬೆಳವಣಿಗೆಯ ಒಂದು ಭಾಗವಾಗುತ್ತದೆ’ ಎಂದು ಮುರುಘಾಮಠದ ಶಿವಮೂರ್ತಿ ಶರಣರು ಅಭಿಪ್ರಾಯಪಟ್ಟರು.<br /> <br /> ನಗರದ ಎಸ್.ಜೆ.ಎಂ. ಮಹಿಳಾ ಕಾಲೇಜಿನಲ್ಲಿ ಗುರುವಾರ ನಡೆದ 2016-–17 ನೇ ಸಾಲಿನ ಕ್ರೀಡಾ, ಸಾಂಸ್ಕೖತಿಕ, ಯೂತ್್ ರೆಡ್್ ಕ್ರಾಸ್್ ಹಾಗೂ ಎನ್.ಎಸ್.ಎಸ್. ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಬೌದ್ಧಿಕ ಸಾಮರ್ಥ್ಯ ಉತ್ತಮ ಕಾರ್ಯಗಳಿಗೆ ಬಳಕೆಯಾಗಬೇಕು. ಅಂಥ ಬುದ್ಧಿ ಉಪಯೋಗಿಸಿಕೊಂಡು ಒಬ್ಬ ಮನುಷ್ಯ ಏಕಕಾಲದಲ್ಲಿ ನಾಲ್ಕೈದು ಕೆಲಸ ಮಾಡುವಷ್ಟು ಸಮರ್ಥನಾಗಿರುತ್ತಾನೆ ಸಾಮರ್ಥ್ಯ ವೃದ್ಧಿಯಾದರೆ, ಅವಕಾಶಗಳು ಮನೆಬಾಗಿಲಿಗೇ ಅರಸಿ ಬರುತ್ತವೆ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.<br /> <br /> ‘ಡಿ.ಟಿ.ಪಿ. ಅನಿಮೇಷನ್, ಗ್ರಾಫಿಕ್ ಡಿಸೈನ್ಂತಹ ಕೌಶಲ್ಯಯುತ ವೃತ್ತಿಗಳನ್ನು ಕರಗತ ಮಾಡಿಕೊಂಡರೆ, ಕಲಾ ಪದವೀಧರರಿಗೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿಯಾಗುತ್ತವೆ. ಹಾಗೆಯೇ ಆಧುನಿಕ ತಂತ್ರಜ್ಞಾನ ಅರಿತವರು, ಅದನ್ನು ಉತ್ತಮ ಕೆಲಸಗಳಿಗೆ ಬಳಸಬೇಕೇ ವಿನಾ, ಸಮಾಜ ಘಾತಕ ಕಾರ್ಯಗಳಿಗಲ್ಲ’ ಎಂದರು.<br /> <br /> ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, ‘ಮಹಿಳಾ ಸಬಲೀಕರಣ ಎನ್ನುವುದು ಎಲ್ಲ ರಂಗಗಳಲ್ಲೂ ಕಾಣಿಸುತ್ತಿದೆ ಶಿಕ್ಷಣ, ರಾಜಕೀಯ ಮತ್ತಿತರ ಕ್ಷೇತ್ರಗಳಲ್ಲಿ ಈ ಸಬಲೀಕರಣ ತುಸು ಪ್ರಗತಿಯಾಗಬೇಕಿದೆ’ ಎಂದರು.<br /> <br /> ‘ಶಿಕ್ಷಣಕ್ಕೆ ಮಹತ್ವದ ಬಗ್ಗೆ ಸರಿಯಾದ ಅರಿವಿಲ್ಲದ್ದರಿಂದಲೇ ಹಳ್ಳಿಗಳಲ್ಲಿ ಮಹಿಳಾ ಶಿಕ್ಷಣದ ಪ್ರಗತಿಗೆ ತೊಡಕಾಗಿದೆ. ಶಿಕ್ಷಣಕ್ಕೆ ಆದ್ಯತೆ ಕೊಡುವ ಮೂಲಕ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ಪಾಲ್ಗೊಳ್ಳುವಂತೆ ಮಾಡಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ’ ಎಂದರು.<br /> <br /> ‘ಮಹಿಳಾ ಸ್ವಸಹಾಯ ಸಂಘಗಳಿಗೆ ಬೆಂಬಲ, ಉಚಿತ ಕಡ್ಡಾಯ ಶಿಕ್ಷಣ, ಲೈಂಗಿಕ, ವರದಕ್ಷಿಣೆ ಕಿರುಕುಳಗಳನ್ನು ತಡೆಯಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅಸಹಾಯಕರಿಗೂ ನೆರವು ನೀಡುತ್ತಿದೆ. ಇವೆಲ್ಲ ಸದ್ಬಳಕೆಯಾಗಬೇಕಿದೆ’ ಎಂದರು.<br /> <br /> ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಕೆ.ವಿ. ಪ್ರಭಾಕರ್ ಮಾತನಾಡಿ, ‘ಪಠ್ಯಗಳ ಜತೆ, ಕ್ರೀಡೆಯಲ್ಲೂ ಭಾಗವಹಿಸಬೇಕು. ಇದು ವಿದ್ಯಾರ್ಥಿಗಳ ಓದಿನ ಭಾಗವಾಗಬೇಕು. ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ರಕ್ತದಾನ ಮಾಡಿ, ಇದರಿಂದ ದೇಹಾರೋಗ್ಯವೂ ಸುಧಾರಿಸುತ್ತದೆ’ ಎಂದರು.<br /> <br /> ಪ್ರಾಚಾರ್ಯ ಎಂ.ಎಸ್. ಕರಿಸಿದ್ದೇಶ್ವರ ಸ್ವಾಮಿ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಗುರಿ ಇಟ್ಟುಕೊಳ್ಳುವುದು ಮತ್ತು ಅದನ್ನು ತಲುಪುವ ಸಲುವಾಗಿ ಶ್ರಮವಹಿಸುವುದು ಬಹಳ ಮುಖ್ಯವಾದ ಕೆಲಸ. ಔಪಚಾರಿಕ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಅವಕಾಶ ಮಾಡಿಕೊಡಬೇಕು’ ಎಂದರು.<br /> <br /> ಕಾರ್ಯಕ್ರಮದಲ್ಲಿ ನಾಗಶ್ರೀ ಪ್ರಾರ್ಥಿಸಿದರು. ಅಶ್ವಿನಿ ಸ್ವಾಗತಿಸಿದರು. ಜ್ಯೋತಿ ವಂದಿಸಿದರು. ಪೂಜಾ ಕಾರ್ಯಕ್ರಮ ನಿರ್ವಹಿಸಿದರು. ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕೖತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>