<p><strong>ಹೊಳಲ್ಕೆರೆ: </strong>‘ನಾವು ದೇವರ ದರ್ಶನ ಪಡೆಯುವುದಕ್ಕಿಂತ ಜ್ಞಾನದ ದರ್ಶನ ಮಾಡುವುದು ಬಹುಮುಖ್ಯ’ ಎಂದು ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಶನಿವಾರ ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ಇಂದಿನ ಆಧುನಿಕ ಪ್ರಪಂಚದಲ್ಲಿ ಜ್ಞಾನ ಸಂಪಾದನೆ ಅನಿವಾರ್ಯ. ಹೆಚ್ಚು ಜ್ಞಾನ ಸಂಪಾದನೆ ಮಾಡಿ ಪರಿಪಕ್ವನಾಗುವುದರಿಂದ ಮಾತ್ರ ಸುಲಲಿತವಾಗಿ ಜೀವನ ನಡೆಸಬಹುದು. ದೇವರನ್ನು ಪೂಜಿಸುವುದರಿಂದ ಮುಕ್ತಿ ಸಿಗುವುದಿಲ್ಲ. ದೇವಾಲಯ ಕಟ್ಟುವುದಕ್ಕಿಂತ ಶಿಕ್ಷಣ ಪಡೆಯುವುದು ಮುಖ್ಯ ಎಂದರು.<br /> <br /> ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಮಾತನಾಡಿ, ಸಮಾಜಕ್ಕೆ ಸಂತರ, ಶರಣರ ಮಾರ್ಗದರ್ಶನ ಅಗತ್ಯವಾಗಿದೆ. ಸುಶಿಕ್ಷಿತ ಸಮಾಜದ ನಿರ್ಮಾಣದಲ್ಲಿ ದಾರ್ಶನಿಕರ ಪಾತ್ರ ಬಹುದೊಡ್ಡದು. ಹಿಂದಿನಿಂದಲೂ ಮಠಗಳು ಶಿಕ್ಷಣ ನೀಡುವ ಮೂಲಕ ಸಮಾಜದ ಕತ್ತಲೆಯನ್ನು ತೊಡೆಯುತ್ತಿವೆ ಎಂದರು.<br /> <br /> ಹೊಸದುರ್ಗ ಸದ್ಗುರು ಮಠದ ಕಾಂತಾನಂದ ಸ್ವಾಮೀಜಿ, ಪುರುಷೋತ್ತಮ ಸ್ವಾಮೀಜಿ, ರಾಮಾಜೋಯಿಸ್ ಗುರೂಜಿ, ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಇಂದಿರಾ ಕಿರಣ್, ಭಾರತೀ ಕಲ್ಲೇಶ್, ಪಾರ್ವತಮ್ಮ, ಎಸ್.ಜೆ.ರಂಗಸ್ವಾಮಿ, ರಾಘವೇಂದ್ರ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ: </strong>‘ನಾವು ದೇವರ ದರ್ಶನ ಪಡೆಯುವುದಕ್ಕಿಂತ ಜ್ಞಾನದ ದರ್ಶನ ಮಾಡುವುದು ಬಹುಮುಖ್ಯ’ ಎಂದು ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಶನಿವಾರ ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ಇಂದಿನ ಆಧುನಿಕ ಪ್ರಪಂಚದಲ್ಲಿ ಜ್ಞಾನ ಸಂಪಾದನೆ ಅನಿವಾರ್ಯ. ಹೆಚ್ಚು ಜ್ಞಾನ ಸಂಪಾದನೆ ಮಾಡಿ ಪರಿಪಕ್ವನಾಗುವುದರಿಂದ ಮಾತ್ರ ಸುಲಲಿತವಾಗಿ ಜೀವನ ನಡೆಸಬಹುದು. ದೇವರನ್ನು ಪೂಜಿಸುವುದರಿಂದ ಮುಕ್ತಿ ಸಿಗುವುದಿಲ್ಲ. ದೇವಾಲಯ ಕಟ್ಟುವುದಕ್ಕಿಂತ ಶಿಕ್ಷಣ ಪಡೆಯುವುದು ಮುಖ್ಯ ಎಂದರು.<br /> <br /> ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಮಾತನಾಡಿ, ಸಮಾಜಕ್ಕೆ ಸಂತರ, ಶರಣರ ಮಾರ್ಗದರ್ಶನ ಅಗತ್ಯವಾಗಿದೆ. ಸುಶಿಕ್ಷಿತ ಸಮಾಜದ ನಿರ್ಮಾಣದಲ್ಲಿ ದಾರ್ಶನಿಕರ ಪಾತ್ರ ಬಹುದೊಡ್ಡದು. ಹಿಂದಿನಿಂದಲೂ ಮಠಗಳು ಶಿಕ್ಷಣ ನೀಡುವ ಮೂಲಕ ಸಮಾಜದ ಕತ್ತಲೆಯನ್ನು ತೊಡೆಯುತ್ತಿವೆ ಎಂದರು.<br /> <br /> ಹೊಸದುರ್ಗ ಸದ್ಗುರು ಮಠದ ಕಾಂತಾನಂದ ಸ್ವಾಮೀಜಿ, ಪುರುಷೋತ್ತಮ ಸ್ವಾಮೀಜಿ, ರಾಮಾಜೋಯಿಸ್ ಗುರೂಜಿ, ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಇಂದಿರಾ ಕಿರಣ್, ಭಾರತೀ ಕಲ್ಲೇಶ್, ಪಾರ್ವತಮ್ಮ, ಎಸ್.ಜೆ.ರಂಗಸ್ವಾಮಿ, ರಾಘವೇಂದ್ರ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>