<p><strong>ವಿಜಾಪುರ: </strong>‘ಜನರಲ್ಲಿ ಭಕ್ತಿಯ ಬರವಿಲ್ಲ. ದೇಶ ಕಟ್ಟುವಲ್ಲಿ ಮಠಾಧೀಶರು, ಸಾಧು-ಸಂತರ ಪಾತ್ರ ಅನನ್ಯ’ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.<br /> <br /> ಬಸವನ ಬಾಗೇವಾಡಿ ತಾಲ್ಲೂಕು ಕರಭಂಟನಾಳದ ಯುವ ಹಾಗೂ ವಿದ್ಯಾರ್ಥಿಗಳ ಹಿತ ಚಿಂತನಾ ವೇದಿಕೆಯಿಂದ ಗುರುಗಂಗಾಧರೇಶ್ವರರ 150ನೇ ಪುಣ್ಯಸ್ಮರಣೆ ಅಂಗವಾಗಿ ಬುಧವಾರ ಇಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವೈಕ್ಯ ಚಿಂತನ ಗೋಷ್ಠಿಯ ಸಾನಿಧ್ಯ ವಹಿಸಿ ಮಾತನಾಡಿದರು.<br /> <br /> ನಮ್ಮ ಕೆಲಸ ಕಾರ್ಯಗಳಲ್ಲಿ ಎಷ್ಟೇ ಕಷ್ಟ ಎದುರಾದರೂ ಅವುಗಳನ್ನು ಧೈರ್ಯವಾಗಿ ಎದುರಿಸಿದಾಗ ಮಾತ್ರ ಗುರಿ ತಲುಪಲು ಸಾಧ್ಯ. ಇದು ಆಧುನಿಕ ಯುಗ. ಕೆಲವೊಬ್ಬರಿಂದ ಧಾರ್ಮಿಕ ಕಾರ್ಯಕ್ರಮಗಳ ದುರುಪಯೋಗ ನಡೆಯುತ್ತಿರಬಹುದು. ಆದರೆ, ಎಲ್ಲರನ್ನೂ ಈ ದೃಷ್ಟಿಯಿಂದು ನೋಡುವುದು ಸಲ್ಲ. ಅನೇಕ ಮಠಾಧೀಶರು ಉತ್ತಮ ಕೊಡುಗೆ ನೀಡಿದ್ದು, ಅದನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.<br /> <br /> ಕರಭಂಟನಾಳ ಗುರುಗಂಗಾಧರೇಶ್ವರ ಸಂಸ್ಥಾನಮಠದ ಶಿವಕುಮಾರ ಸ್ವಾಮೀಜಿ, ‘ಗುರುಗಂಗಾಧರೇಶ್ವರರು ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆ ಅಪಾರ. ಅವರ ಸಂದೇಶ ಮತ್ತು ಸಾಧನೆಯನ್ನು ತಿಳಿಸಲಿಕ್ಕಾಗಿ ಈ ಕಾರ್ಯಕ್ರಮ ಸಂಘಟಿಸಲಾಗಿದೆ‘ ಎಂದರು.<br /> <br /> ರಾಜಾ ವೆಂಕಟಪ್ಪ ನಾಯಕ ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರಿನ ಪ್ರಶಾಂತ ರಿಪ್ಪನಪೇಟೆ ಉಪನ್ಯಾಸ ನೀಡಿದರು. ಅಷ್ಟಗಿಯ ನಿಜಲಿಂಗ ಶಿವಾಚಾರ್ಯರು, ಮಹಾರಾಷ್ಟ್ರದ ಮಾಂಜರಿಯ ಗುರುಶಾಂತಲಿಂಗ ಶಿವಾಚಾರ್ಯರು, ರೇವೂರಿನ ಶ್ರೀಕಂಠ ಶಿವಾಚಾರ್ಯರು, ಶಹಾಪುರದ ಸೂಗುರೇಶ್ವರ ದೇವರು, ಬಂಡಿಗಣಿಯ ಚಕ್ರವರ್ತಿ ಅನ್ನದಾನೇಶ್ವರ ಸ್ವಾಮೀಜಿ ಪಾಲ್ಗೊಂಡಿದ್ದರು.<br /> ಹೆಲಿಕಾಪ್ಟರ್ನಲ್ಲಿ ಆಗಮಿಸಿದ್ದ ಶ್ರೀಶೈಲ ಜಗದ್ಗುರುಗಳು, ಇಲ್ಲಿಯ ಸಿದ್ಧೇಶ್ವರ ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>‘ಜನರಲ್ಲಿ ಭಕ್ತಿಯ ಬರವಿಲ್ಲ. ದೇಶ ಕಟ್ಟುವಲ್ಲಿ ಮಠಾಧೀಶರು, ಸಾಧು-ಸಂತರ ಪಾತ್ರ ಅನನ್ಯ’ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.<br /> <br /> ಬಸವನ ಬಾಗೇವಾಡಿ ತಾಲ್ಲೂಕು ಕರಭಂಟನಾಳದ ಯುವ ಹಾಗೂ ವಿದ್ಯಾರ್ಥಿಗಳ ಹಿತ ಚಿಂತನಾ ವೇದಿಕೆಯಿಂದ ಗುರುಗಂಗಾಧರೇಶ್ವರರ 150ನೇ ಪುಣ್ಯಸ್ಮರಣೆ ಅಂಗವಾಗಿ ಬುಧವಾರ ಇಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವೈಕ್ಯ ಚಿಂತನ ಗೋಷ್ಠಿಯ ಸಾನಿಧ್ಯ ವಹಿಸಿ ಮಾತನಾಡಿದರು.<br /> <br /> ನಮ್ಮ ಕೆಲಸ ಕಾರ್ಯಗಳಲ್ಲಿ ಎಷ್ಟೇ ಕಷ್ಟ ಎದುರಾದರೂ ಅವುಗಳನ್ನು ಧೈರ್ಯವಾಗಿ ಎದುರಿಸಿದಾಗ ಮಾತ್ರ ಗುರಿ ತಲುಪಲು ಸಾಧ್ಯ. ಇದು ಆಧುನಿಕ ಯುಗ. ಕೆಲವೊಬ್ಬರಿಂದ ಧಾರ್ಮಿಕ ಕಾರ್ಯಕ್ರಮಗಳ ದುರುಪಯೋಗ ನಡೆಯುತ್ತಿರಬಹುದು. ಆದರೆ, ಎಲ್ಲರನ್ನೂ ಈ ದೃಷ್ಟಿಯಿಂದು ನೋಡುವುದು ಸಲ್ಲ. ಅನೇಕ ಮಠಾಧೀಶರು ಉತ್ತಮ ಕೊಡುಗೆ ನೀಡಿದ್ದು, ಅದನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.<br /> <br /> ಕರಭಂಟನಾಳ ಗುರುಗಂಗಾಧರೇಶ್ವರ ಸಂಸ್ಥಾನಮಠದ ಶಿವಕುಮಾರ ಸ್ವಾಮೀಜಿ, ‘ಗುರುಗಂಗಾಧರೇಶ್ವರರು ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆ ಅಪಾರ. ಅವರ ಸಂದೇಶ ಮತ್ತು ಸಾಧನೆಯನ್ನು ತಿಳಿಸಲಿಕ್ಕಾಗಿ ಈ ಕಾರ್ಯಕ್ರಮ ಸಂಘಟಿಸಲಾಗಿದೆ‘ ಎಂದರು.<br /> <br /> ರಾಜಾ ವೆಂಕಟಪ್ಪ ನಾಯಕ ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರಿನ ಪ್ರಶಾಂತ ರಿಪ್ಪನಪೇಟೆ ಉಪನ್ಯಾಸ ನೀಡಿದರು. ಅಷ್ಟಗಿಯ ನಿಜಲಿಂಗ ಶಿವಾಚಾರ್ಯರು, ಮಹಾರಾಷ್ಟ್ರದ ಮಾಂಜರಿಯ ಗುರುಶಾಂತಲಿಂಗ ಶಿವಾಚಾರ್ಯರು, ರೇವೂರಿನ ಶ್ರೀಕಂಠ ಶಿವಾಚಾರ್ಯರು, ಶಹಾಪುರದ ಸೂಗುರೇಶ್ವರ ದೇವರು, ಬಂಡಿಗಣಿಯ ಚಕ್ರವರ್ತಿ ಅನ್ನದಾನೇಶ್ವರ ಸ್ವಾಮೀಜಿ ಪಾಲ್ಗೊಂಡಿದ್ದರು.<br /> ಹೆಲಿಕಾಪ್ಟರ್ನಲ್ಲಿ ಆಗಮಿಸಿದ್ದ ಶ್ರೀಶೈಲ ಜಗದ್ಗುರುಗಳು, ಇಲ್ಲಿಯ ಸಿದ್ಧೇಶ್ವರ ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>