<p>ರಾಯಚೂರು: ದೇಶಿಯ ಆರೋಗ್ಯ ಪದ್ಧತಿಯು ಪರಂಪರಾಗತವಾದುದು. ಖರ್ಚಿಲ್ಲದ, ಅಡ್ಡ ಪರಿಣಾಮಗಳಿಲ್ಲದ ಚಿಕಿತ್ಸಾ ಪದ್ಧತಿಯಾಗಿದೆ. ಇಂಥ ಚಿಕಿತ್ಸಾ ಪದ್ಧತಿ ಪ್ರಯೋಜನಗಳ ಬಗ್ಗೆ ತಜ್ಞ ವೈದ್ಯರಿಂದ ತಿಳಿದು ಚಿಕಿತ್ಸೆ ಪಡೆಯುವ ಮೂಲಕ ಆಯುಷ್ ಇಲಾಖೆ ಸೇವೆಯ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಹೇಳಿದರು.<br /> <br /> ಶುಕ್ರವಾರ ಇಲ್ಲಿನ ಜಿಲ್ಲಾ ಆಯುಷ್ ಇಲಾಖೆ ಕಚೇರಿ ಆವರಣದಲ್ಲಿ ಆಯುಷ್ ನಿರ್ದೇಶನಾಲಯದ ಆಶ್ರಯದಲ್ಲಿ ಏರ್ಪಡಿಸಿದ್ದ ಆಯುಷ್ ಆರೋಗ್ಯ ಮೇಳ ಉದ್ಘಾಟನೆ ಮಾಡಿ ಮಾತನಾಡಿದರು.<br /> <br /> ಆಯುರ್ವೇದ ಚಿಕಿತ್ಸಾ ಪದ್ಧತಿ, ಗಿಡ ಮೂಲಿಕೆ, ವನಸ್ಪತಿಗಳಿಂದ ಮನೆಯಲ್ಲಿಯೇ ಔಷಧ ತಯಾರಿಸಿ ರೋಗ ರುಜಿನಗಳಿಂದ ಗುಣಮುಖವಾಗುವ ಪದ್ಧತಿ ದೇಶದಲ್ಲಿ ಶತಮಾನಗಳಿಂದ ಬಳಕೆಯಲ್ಲಿದೆ. ಆದರೆ, ಪ್ರಸ್ತುತ ದಿನಮಾನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಈ ಚಿಕಿತ್ಸಾ ಪದ್ಧತಿ ಬಗ್ಗೆ ತಿಳಿಸಿಕೊಡಬೇಕಿದೆ ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ ಜ್ಯೋತ್ಸ್ನಾ ಅಯುರ್ವೇದ ಮಳಿಗೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಡಾ. ಮುನಿವಾಸುದೇವರೆಡ್ಡಿ, ರಾಜ್ಯ ಆಯುಷ್ ವೈದ್ಯರ ಸಂಘದ ಉಪಾಧ್ಯಕ್ಷ ಡಾ. ಶಂಕರಗೌಡ, ಜಿಲ್ಲಾಆಯುಷ್ ಅಧಿಕಾರಿ ಡಾ.ಅಮರಗುಂಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ದೇಶಿಯ ಆರೋಗ್ಯ ಪದ್ಧತಿಯು ಪರಂಪರಾಗತವಾದುದು. ಖರ್ಚಿಲ್ಲದ, ಅಡ್ಡ ಪರಿಣಾಮಗಳಿಲ್ಲದ ಚಿಕಿತ್ಸಾ ಪದ್ಧತಿಯಾಗಿದೆ. ಇಂಥ ಚಿಕಿತ್ಸಾ ಪದ್ಧತಿ ಪ್ರಯೋಜನಗಳ ಬಗ್ಗೆ ತಜ್ಞ ವೈದ್ಯರಿಂದ ತಿಳಿದು ಚಿಕಿತ್ಸೆ ಪಡೆಯುವ ಮೂಲಕ ಆಯುಷ್ ಇಲಾಖೆ ಸೇವೆಯ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಹೇಳಿದರು.<br /> <br /> ಶುಕ್ರವಾರ ಇಲ್ಲಿನ ಜಿಲ್ಲಾ ಆಯುಷ್ ಇಲಾಖೆ ಕಚೇರಿ ಆವರಣದಲ್ಲಿ ಆಯುಷ್ ನಿರ್ದೇಶನಾಲಯದ ಆಶ್ರಯದಲ್ಲಿ ಏರ್ಪಡಿಸಿದ್ದ ಆಯುಷ್ ಆರೋಗ್ಯ ಮೇಳ ಉದ್ಘಾಟನೆ ಮಾಡಿ ಮಾತನಾಡಿದರು.<br /> <br /> ಆಯುರ್ವೇದ ಚಿಕಿತ್ಸಾ ಪದ್ಧತಿ, ಗಿಡ ಮೂಲಿಕೆ, ವನಸ್ಪತಿಗಳಿಂದ ಮನೆಯಲ್ಲಿಯೇ ಔಷಧ ತಯಾರಿಸಿ ರೋಗ ರುಜಿನಗಳಿಂದ ಗುಣಮುಖವಾಗುವ ಪದ್ಧತಿ ದೇಶದಲ್ಲಿ ಶತಮಾನಗಳಿಂದ ಬಳಕೆಯಲ್ಲಿದೆ. ಆದರೆ, ಪ್ರಸ್ತುತ ದಿನಮಾನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಈ ಚಿಕಿತ್ಸಾ ಪದ್ಧತಿ ಬಗ್ಗೆ ತಿಳಿಸಿಕೊಡಬೇಕಿದೆ ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ ಜ್ಯೋತ್ಸ್ನಾ ಅಯುರ್ವೇದ ಮಳಿಗೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಡಾ. ಮುನಿವಾಸುದೇವರೆಡ್ಡಿ, ರಾಜ್ಯ ಆಯುಷ್ ವೈದ್ಯರ ಸಂಘದ ಉಪಾಧ್ಯಕ್ಷ ಡಾ. ಶಂಕರಗೌಡ, ಜಿಲ್ಲಾಆಯುಷ್ ಅಧಿಕಾರಿ ಡಾ.ಅಮರಗುಂಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>