<p><strong>ಗದಗ: </strong>ಉತ್ತರ ಕರ್ನಾಟಕದ ಕಲೆ ದೊಡ್ಡಾಟ ನಶಿಸಿ ಹೋಗುತ್ತಿರುವ ಹಿನ್ನಲೆಯಲ್ಲಿ ಗದಗ - ಬೆಟಗೇರಿಯಲ್ಲಿ ದೊಡ್ಡಾಟ ಕಲಿಕಾ ಕೇಂದ್ರ ಹಾಗೂ ಸಂಶೋಧನಾ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.<br /> <br /> ನಗರದಲ್ಲಿ ಜಿ.ಬಿ. ಬಣ್ಣದ ಕಲಾಮೇಳದ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಸುಮಾರು ರೂ. 5 ಕೋಟಿ ವೆಚ್ಚದಲ್ಲಿ ಕೇಂದ್ರ ಸ್ಥಾಪಿಸಲು ಸಚಿವೆ ಉಮಾಶ್ರೀ ಮತ್ತು ನಾನು ಸರ್ಕಾರದ ಮೇಲೆ ಒತ್ತಡ ತಂದು ಕಾರ್ಯ ನಿರ್ವಹಿಸಲಾಗುವುದು ಎಂದರು.<br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮಾತನಾಡಿ, ಕಲಾವಿದರ ಜೀವನ ಎಷ್ಟು ಕಷ್ಟ ಎನ್ನುವ ಅನುಭವ ಇದೆ. ಕಲಾ ಸಂಘಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ಈ ದಿನಮಾನದಲ್ಲಿ ಬಹಳ ಕಷ್ಟಕರ. ಅಶೋಕ ಬಣ್ಣದವರು ಬಡ ನೇಕಾರರನ್ನು ಕಟ್ಟಿಕೊಂಡು ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕೂಡ ದೊಡ್ಡಾಟ ಪ್ರದರ್ಶನ ನೀಡುತ್ತಿರುವುದು ಮೆಚ್ಚುಗೆಯ ಕೆಲಸ. ಈ ಕಲೆಗಾಗಿ ಇಲಾಖೆಯಿಂದ ಎಲ್ಲ ಸಹಾಯ, ಸಹಕಾರ ನೀಡಲಾಗುವುದು. ಅಕ್ಕ ಸಮ್ಮೇಳನ (ಅಮೇರಿಕ ದೇಶದಲ್ಲಿ) ಪ್ರದರ್ಶನಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.<br /> <br /> ಮಾಜಿ ಶಾಸಕ ಡಿ. ಆರ್. ಪಾಟೀಲ ಮಾತನಾಡಿ, ಯುವಪೀಳಿಗೆ ದೊಡ್ಡಾಟ ಕಲೆಯತ್ತ ಗಮನಹರಿಸಬೇಕು. ನಾಡು, ನುಡಿ, ಸಂಸ್ಕೃತಿ ಉಳಿಸಲು ಯುವಕರು ಮುಂದೆ ಬರಬೇಕು ಎಂದರು.<br /> <br /> ಪ್ರಾಸ್ತಾವಿಕವಾಗಿ ಮಾತನಾಡಿದ ಕಲಾಮೇಳದ ಅಧ್ಯಕ್ಷ ಅಶೋಕ ಬಣ್ಣದ, ಬಿ. ಬಿ. ಬಣ್ಣದವರು ಹಾಕಿಕೊಟ್ಟ ಮಾರ್ಗದಲ್ಲಿ ಈ ಕಲೆಯನ್ನು ಉಳಿಸಿ ಬೆಳಸಿಕೊಂಡು ಹೋಗಲು ಎಲ್ಲ ಕಲಾವಿದ ಸಹಕಾರದಿಂದ ಸಾಧ್ಯವಾಗಿದೆ ಎಂದರು.<br /> <br /> ಗಣೇಶಸಿಂಗ ಬ್ಯಾಳಿ ಸ್ವಾಗತಿಸಿದರು, ದಶರಥ ಕೊಳ್ಳಿ ವಂದಿಸಿದರು. ರಾಜು ಮಾಳೊದೆ ನಿರೂಪಿಸಿದರು. ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದಿಂದ ಹಾಗೂ ಗದಗ ತಾಲೂಕಿನ ನೇಕಾರರ ಒಕ್ಕೂಟಗಳ ವತಿಯಿಂದ ಸಚಿವೆ ಉಮಾಶ್ರೀ ಹಾಗೂ ಎಚ್. ಕೆ. ಪಾಟೀಲರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಉತ್ತರ ಕರ್ನಾಟಕದ ಕಲೆ ದೊಡ್ಡಾಟ ನಶಿಸಿ ಹೋಗುತ್ತಿರುವ ಹಿನ್ನಲೆಯಲ್ಲಿ ಗದಗ - ಬೆಟಗೇರಿಯಲ್ಲಿ ದೊಡ್ಡಾಟ ಕಲಿಕಾ ಕೇಂದ್ರ ಹಾಗೂ ಸಂಶೋಧನಾ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.<br /> <br /> ನಗರದಲ್ಲಿ ಜಿ.ಬಿ. ಬಣ್ಣದ ಕಲಾಮೇಳದ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಸುಮಾರು ರೂ. 5 ಕೋಟಿ ವೆಚ್ಚದಲ್ಲಿ ಕೇಂದ್ರ ಸ್ಥಾಪಿಸಲು ಸಚಿವೆ ಉಮಾಶ್ರೀ ಮತ್ತು ನಾನು ಸರ್ಕಾರದ ಮೇಲೆ ಒತ್ತಡ ತಂದು ಕಾರ್ಯ ನಿರ್ವಹಿಸಲಾಗುವುದು ಎಂದರು.<br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮಾತನಾಡಿ, ಕಲಾವಿದರ ಜೀವನ ಎಷ್ಟು ಕಷ್ಟ ಎನ್ನುವ ಅನುಭವ ಇದೆ. ಕಲಾ ಸಂಘಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ಈ ದಿನಮಾನದಲ್ಲಿ ಬಹಳ ಕಷ್ಟಕರ. ಅಶೋಕ ಬಣ್ಣದವರು ಬಡ ನೇಕಾರರನ್ನು ಕಟ್ಟಿಕೊಂಡು ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕೂಡ ದೊಡ್ಡಾಟ ಪ್ರದರ್ಶನ ನೀಡುತ್ತಿರುವುದು ಮೆಚ್ಚುಗೆಯ ಕೆಲಸ. ಈ ಕಲೆಗಾಗಿ ಇಲಾಖೆಯಿಂದ ಎಲ್ಲ ಸಹಾಯ, ಸಹಕಾರ ನೀಡಲಾಗುವುದು. ಅಕ್ಕ ಸಮ್ಮೇಳನ (ಅಮೇರಿಕ ದೇಶದಲ್ಲಿ) ಪ್ರದರ್ಶನಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.<br /> <br /> ಮಾಜಿ ಶಾಸಕ ಡಿ. ಆರ್. ಪಾಟೀಲ ಮಾತನಾಡಿ, ಯುವಪೀಳಿಗೆ ದೊಡ್ಡಾಟ ಕಲೆಯತ್ತ ಗಮನಹರಿಸಬೇಕು. ನಾಡು, ನುಡಿ, ಸಂಸ್ಕೃತಿ ಉಳಿಸಲು ಯುವಕರು ಮುಂದೆ ಬರಬೇಕು ಎಂದರು.<br /> <br /> ಪ್ರಾಸ್ತಾವಿಕವಾಗಿ ಮಾತನಾಡಿದ ಕಲಾಮೇಳದ ಅಧ್ಯಕ್ಷ ಅಶೋಕ ಬಣ್ಣದ, ಬಿ. ಬಿ. ಬಣ್ಣದವರು ಹಾಕಿಕೊಟ್ಟ ಮಾರ್ಗದಲ್ಲಿ ಈ ಕಲೆಯನ್ನು ಉಳಿಸಿ ಬೆಳಸಿಕೊಂಡು ಹೋಗಲು ಎಲ್ಲ ಕಲಾವಿದ ಸಹಕಾರದಿಂದ ಸಾಧ್ಯವಾಗಿದೆ ಎಂದರು.<br /> <br /> ಗಣೇಶಸಿಂಗ ಬ್ಯಾಳಿ ಸ್ವಾಗತಿಸಿದರು, ದಶರಥ ಕೊಳ್ಳಿ ವಂದಿಸಿದರು. ರಾಜು ಮಾಳೊದೆ ನಿರೂಪಿಸಿದರು. ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದಿಂದ ಹಾಗೂ ಗದಗ ತಾಲೂಕಿನ ನೇಕಾರರ ಒಕ್ಕೂಟಗಳ ವತಿಯಿಂದ ಸಚಿವೆ ಉಮಾಶ್ರೀ ಹಾಗೂ ಎಚ್. ಕೆ. ಪಾಟೀಲರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>