<p><strong>ಯಾದಗಿರಿ: </strong>ಜಗತ್ತಿನಲ್ಲಿ ಅನೇಕ ಧರ್ಮಗಳಿದ್ದು, ಎಲ್ಲ ಧರ್ಮಗಳ ಸಾರ ಒಂದೇ. ವಿವಿಧ ಧರ್ಮಗಳಲ್ಲಿರುವ ಉತ್ತಮ ಅಂಶಗಳನ್ನು ತೆಗೆದುಕೊಂಡು ಶಾಂತಿ, ಸಹೋದರತೆಯಿಂದ ಬಾಳಿದಾಗ ಮಾತ್ರ ಅನೇಕತೆಯಲ್ಲಿ ಏಕತೆಯನ್ನು ಕಾಣಬಹುದು ಎಂದು ಶಾಸಕ ಡಾ.ಎ.ಬಿ.ಮಾಲಕರಡ್ಡಿ ಹೇಳಿದರು.<br /> <br /> ಶಹಾಪುರ ತಾಲ್ಲೂಕಿನ ಹಬಸಿಹಾಳ ಗ್ರಾಮದಲ್ಲಿ ಜನಾಬ್ ಚಾಂದ್ ಪಟೇಲ್ ರಿಲೀಜಿಯಸ್ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಬೆಂಗಳೂರಿನ ಎಂಬಿಸಿ ಗ್ರೂಪ್ನ ಅನುದಾನದಲ್ಲಿ ನಿರ್ಮಿಸಿದ ಜಾಮಿಯಾ ಮಸ್ಜೀದ್ -ಎ -ಬಿಲಾಲ್ ಉದ್ಘಾಟನೆ ಹಾಗೂ ಮುಸ್ಲಿಂ ಬಾಂಧವರ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದರು.<br /> <br /> ಪ್ರೀತಿ, ಪ್ರೇಮ, ಸಹನೆ ಎಂಬ ಮೂರು ಅಮೂಲ್ಯ ರತ್ನಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಭಾವೈಕ್ಯ ಹಾಗೂ ದೇಶದ ಪ್ರಗತಿಗೆ ಸಹಕಾರಿ ಆಗಲಿದೆ ಎಂದರು.<br /> <br /> ಈ ಮಸೀದಿ ಎಲ್ಲರ ಆಸ್ತಿ. ಇದನ್ನು ಪ್ರತಿಯೊಬ್ಬರು ತನ್ನದೆಂದು ತಿಳಿಯಬೇಕು. ಈ ಮಸೀದಿಗೆ ಸುಮಾರು ₨50 ಲಕ್ಷ ದೇಣಿಗೆಯಾಗಿ ಕೊಟ್ಟ ಎಂಬಿಸಿ ಗ್ರೂಪ್ ಅಧ್ಯಕ್ಷರ ಕಾರ್ಯ ಶ್ಲಾಘನೀಯ. ಇಂಥವರಿಗೆ ನಾವೆಲ್ಲರೂ ಪ್ರೋತ್ಸಾಹ ನೀಡಿದರೆ, ಇನ್ನೂ ಹೆಚ್ಚಿನ ಸಮಾಜ ಕಾರ್ಯಗಳನ್ನು ನಿರೀಕ್ಷಿಸಬಹುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಗತ್ತಿನಲ್ಲಿ ಅನೇಕ ಧರ್ಮಗಳಿದ್ದು, ಎಲ್ಲ ಧರ್ಮಗಳ ಸಾರ ಒಂದೇ. ವಿವಿಧ ಧರ್ಮಗಳಲ್ಲಿರುವ ಉತ್ತಮ ಅಂಶಗಳನ್ನು ತೆಗೆದುಕೊಂಡು ಶಾಂತಿ, ಸಹೋದರತೆಯಿಂದ ಬಾಳಿದಾಗ ಮಾತ್ರ ಅನೇಕತೆಯಲ್ಲಿ ಏಕತೆಯನ್ನು ಕಾಣಬಹುದು ಎಂದು ಶಾಸಕ ಡಾ.ಎ.ಬಿ.ಮಾಲಕರಡ್ಡಿ ಹೇಳಿದರು.<br /> <br /> ಶಹಾಪುರ ತಾಲ್ಲೂಕಿನ ಹಬಸಿಹಾಳ ಗ್ರಾಮದಲ್ಲಿ ಜನಾಬ್ ಚಾಂದ್ ಪಟೇಲ್ ರಿಲೀಜಿಯಸ್ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಬೆಂಗಳೂರಿನ ಎಂಬಿಸಿ ಗ್ರೂಪ್ನ ಅನುದಾನದಲ್ಲಿ ನಿರ್ಮಿಸಿದ ಜಾಮಿಯಾ ಮಸ್ಜೀದ್ -ಎ -ಬಿಲಾಲ್ ಉದ್ಘಾಟನೆ ಹಾಗೂ ಮುಸ್ಲಿಂ ಬಾಂಧವರ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದರು.<br /> <br /> ಪ್ರೀತಿ, ಪ್ರೇಮ, ಸಹನೆ ಎಂಬ ಮೂರು ಅಮೂಲ್ಯ ರತ್ನಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಭಾವೈಕ್ಯ ಹಾಗೂ ದೇಶದ ಪ್ರಗತಿಗೆ ಸಹಕಾರಿ ಆಗಲಿದೆ ಎಂದರು.<br /> <br /> ಈ ಮಸೀದಿ ಎಲ್ಲರ ಆಸ್ತಿ. ಇದನ್ನು ಪ್ರತಿಯೊಬ್ಬರು ತನ್ನದೆಂದು ತಿಳಿಯಬೇಕು. ಈ ಮಸೀದಿಗೆ ಸುಮಾರು ₨50 ಲಕ್ಷ ದೇಣಿಗೆಯಾಗಿ ಕೊಟ್ಟ ಎಂಬಿಸಿ ಗ್ರೂಪ್ ಅಧ್ಯಕ್ಷರ ಕಾರ್ಯ ಶ್ಲಾಘನೀಯ. ಇಂಥವರಿಗೆ ನಾವೆಲ್ಲರೂ ಪ್ರೋತ್ಸಾಹ ನೀಡಿದರೆ, ಇನ್ನೂ ಹೆಚ್ಚಿನ ಸಮಾಜ ಕಾರ್ಯಗಳನ್ನು ನಿರೀಕ್ಷಿಸಬಹುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>