<p>ಹಾವೇರಿ:‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಬಡವರಿಗೆ, ಸ್ತ್ರೀ ಸಂಘಗಳಿಗೆ ಹಾಗೂ ಖಾಸಗಿ ಸಂಘ ಸಂಸ್ಥೆಗಳಿಗೆ ಸಹಾಯ ಮಾಡುತ್ತ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದು ಕೆಸಿಸಿ ಬ್ಯಾಂಕ್ ಕೂಡಲ ಶಾಖೆಯ ನಿರ್ದೇಶಕ ಮಾಲತೇಶ ಸೊಪ್ಪಿನ ಹೇಳಿದರು.<br /> <br /> ಹಾನಗಲ್ ತಾಲ್ಲೂಕಿನ ಕೂಡಲ ಗ್ರಾಮದ ಗುರುನಂಜೇಶ್ವರ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿಎಸ್ಎಸ್ ಬ್ಯಾಂಕ್ ಕೂಡಲ, ಹಾಲು ಉತ್ಪಾದಕರ ಸಂಘು ಸೋಮವಾರ ಹಮ್ಮಿಕೊಂಡಿದ್ದ ಬೆಳಗಾಲಪೇಟೆ ವಲಯ ಮಟ್ಟದ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರೈತರ ಅನುಕೂಲಕ್ಕೆ ಕೃಷಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು ಸಂತಸದ ಸಂಗತಿ. ರಾಸಾಯನಿಕ ಗೊಬ್ಬರದಿಂದ ಭೂಮಿ ಬರಡಾಗಿದೆ. ರೈತರು, ರೈತ ಮಹಿಳೆಯರು ಹೈನುಗಾರಿಕೆ ಹೆಚ್ಚು ಒತ್ತು ನೀಡುವ ಮೂಲಕ ಎರೆಹುಳು ಗೊಬ್ಬರ ಬಳಸಿಕೊಂಡು ಸಾವಯವ ಕೃಷಿಗೆ ಮನಸು ಮಾಡಬೇಕು ಎಂದು ಸಲಹೆ ಮಾಡಿದರು.<br /> <br /> ಸಾನಿಧ್ಯ ವಹಿಸಿದ್ದ ಕೂಡಲದ ಗುರುನಂಜೇಶ್ವರ ಮಠದ ಮಹೇಶ್ವರ ದೇವರು ಮಾತನಾಡಿ, ಪ್ರತಿಯೊಬ್ಬರು ಸಮುಯ ಪ್ರಜ್ಞೆ ಅರಿತು ಕೆಲಸ ಮಾಡಬೇಕು.ನಾವೆಲ್ಲ ಒಂದೇ ಎನ್ನುವ ಮನೋಭಾವ ಹೊಂದಿದಾಗ ಮಾತ್ರ ಸಂಘಗಳು ಬೆಳೆದು ಬರಲು ಸಾಧ್ಯ ಎಂದರು.<br /> <br /> ಕೂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೀಲಮ್ಮ ಚನ್ನಬಸವಗೌಡ್ರ ಮುದಿಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕೆ.ಸದಾನಂದ, ವಿ.ಎಸ್.ಎಸ್. ಬ್ಯಾಂಕಿನ ಕೂಡಲ ಶಾಖೆಯ ಉಪಾಧ್ಯಕ್ಷ ಸಂಗಪ್ಪ ಹರವಿ, ಗ್ರಾಮಸ್ಥರಾದ ಮಹಾಬಳೇಶ್ವರಪ್ಪ ಮಾವಿನಮರದ, ಕಲ್ಮೇಶ ವಿಜಾಪುರ ಪಾಲ್ಗೊಂಡಿದ್ದರು.<br /> <br /> ಸಂಘದ ಮೇಲ್ವಿಚಾರಕ ಗಿರೀಶ ಸ್ವಾಗತಿಸಿದರು. ವೈ.ಎನ್.ಹೊಸಮನಿ ಕಾರ್ಯಕ್ರಮ ನಿರೂಪಿಸಿದರು. ಸುಮಾ ಕೂಡಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ:‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಬಡವರಿಗೆ, ಸ್ತ್ರೀ ಸಂಘಗಳಿಗೆ ಹಾಗೂ ಖಾಸಗಿ ಸಂಘ ಸಂಸ್ಥೆಗಳಿಗೆ ಸಹಾಯ ಮಾಡುತ್ತ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದು ಕೆಸಿಸಿ ಬ್ಯಾಂಕ್ ಕೂಡಲ ಶಾಖೆಯ ನಿರ್ದೇಶಕ ಮಾಲತೇಶ ಸೊಪ್ಪಿನ ಹೇಳಿದರು.<br /> <br /> ಹಾನಗಲ್ ತಾಲ್ಲೂಕಿನ ಕೂಡಲ ಗ್ರಾಮದ ಗುರುನಂಜೇಶ್ವರ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿಎಸ್ಎಸ್ ಬ್ಯಾಂಕ್ ಕೂಡಲ, ಹಾಲು ಉತ್ಪಾದಕರ ಸಂಘು ಸೋಮವಾರ ಹಮ್ಮಿಕೊಂಡಿದ್ದ ಬೆಳಗಾಲಪೇಟೆ ವಲಯ ಮಟ್ಟದ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರೈತರ ಅನುಕೂಲಕ್ಕೆ ಕೃಷಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು ಸಂತಸದ ಸಂಗತಿ. ರಾಸಾಯನಿಕ ಗೊಬ್ಬರದಿಂದ ಭೂಮಿ ಬರಡಾಗಿದೆ. ರೈತರು, ರೈತ ಮಹಿಳೆಯರು ಹೈನುಗಾರಿಕೆ ಹೆಚ್ಚು ಒತ್ತು ನೀಡುವ ಮೂಲಕ ಎರೆಹುಳು ಗೊಬ್ಬರ ಬಳಸಿಕೊಂಡು ಸಾವಯವ ಕೃಷಿಗೆ ಮನಸು ಮಾಡಬೇಕು ಎಂದು ಸಲಹೆ ಮಾಡಿದರು.<br /> <br /> ಸಾನಿಧ್ಯ ವಹಿಸಿದ್ದ ಕೂಡಲದ ಗುರುನಂಜೇಶ್ವರ ಮಠದ ಮಹೇಶ್ವರ ದೇವರು ಮಾತನಾಡಿ, ಪ್ರತಿಯೊಬ್ಬರು ಸಮುಯ ಪ್ರಜ್ಞೆ ಅರಿತು ಕೆಲಸ ಮಾಡಬೇಕು.ನಾವೆಲ್ಲ ಒಂದೇ ಎನ್ನುವ ಮನೋಭಾವ ಹೊಂದಿದಾಗ ಮಾತ್ರ ಸಂಘಗಳು ಬೆಳೆದು ಬರಲು ಸಾಧ್ಯ ಎಂದರು.<br /> <br /> ಕೂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೀಲಮ್ಮ ಚನ್ನಬಸವಗೌಡ್ರ ಮುದಿಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕೆ.ಸದಾನಂದ, ವಿ.ಎಸ್.ಎಸ್. ಬ್ಯಾಂಕಿನ ಕೂಡಲ ಶಾಖೆಯ ಉಪಾಧ್ಯಕ್ಷ ಸಂಗಪ್ಪ ಹರವಿ, ಗ್ರಾಮಸ್ಥರಾದ ಮಹಾಬಳೇಶ್ವರಪ್ಪ ಮಾವಿನಮರದ, ಕಲ್ಮೇಶ ವಿಜಾಪುರ ಪಾಲ್ಗೊಂಡಿದ್ದರು.<br /> <br /> ಸಂಘದ ಮೇಲ್ವಿಚಾರಕ ಗಿರೀಶ ಸ್ವಾಗತಿಸಿದರು. ವೈ.ಎನ್.ಹೊಸಮನಿ ಕಾರ್ಯಕ್ರಮ ನಿರೂಪಿಸಿದರು. ಸುಮಾ ಕೂಡಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>