<p><strong>ರಾಮನಗರ:</strong> ಇಂದು ಸಮಾಜದಲ್ಲಿ ಬಹಳ ಬದಲಾವಣೆಗಳಾಗಿದ್ದರೂ ಹೆಣ್ಣು ಮಗು ಜನಿಸಿದರೆ ಶಾಪ ಎನ್ನುವ ಭಾವನೆ ಹೋಗಿಲ್ಲ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷೆ ಬಿ. ಅನುಸೂಯಮ್ಮ ವಿಷಾದಿಸಿದರು.<br /> <br /> ತಾಲ್ಲೂಕಿನ ಬಿಡದಿ ಹೋಬಳಿಯ ಗೌರಿಪುರ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಕುವೆಂಪು ಮಹಿಳಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ಸೋಮವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾವಂತ ಸಮುದಾಯದಲ್ಲಿಯೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಹೆಚ್ಚುತ್ತಿವೆ. ಇದಕ್ಕೆ ವರದಕ್ಷಿಣೆ ಪಿಡುಗು ಮತ್ತು ವಂಶೋದ್ಧಾರಕ ಬೇಕು ಎಂಬ ಮೂಢನಂಬಿಕೆಯೇ ಕಾರಣವಾದೆ ಎಂದರು.<br /> <br /> ಭಾರತ ಸೇವಾದಲದ ರಾಜ್ಯ ಕಾರ್ಯದರ್ಶಿ ಕಲ್ಪನಾ ಶಿವಣ್ಣ ಮಾತನಾಡಿ, ಮಹಿಳಾ ಪರ ಕಾನೂನು ಬಲಗೊಂಡಿದ್ದರೂ ಅವರ ಮೇಲಿನ ದೌರ್ಜನ್ಯ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ’ ಎಂದರು.<br /> <br /> ‘ಮಹಿಳೆಯರು ಧೈರ್ಯದಿಂದ ತಮ್ಮ ಎಲ್ಲಾ ಸಮಸ್ಯೆಗಳನ್ನು ಎದುರಿಸಬೇಕು. ಕಾನೂನಿನ ಬಗ್ಗೆ ಹೆಚ್ಚು ಹೆಚ್ಚಾಗಿ ಅರಿವು ಮೂಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಇಂದು ಸಮಾಜದಲ್ಲಿ ಬಹಳ ಬದಲಾವಣೆಗಳಾಗಿದ್ದರೂ ಹೆಣ್ಣು ಮಗು ಜನಿಸಿದರೆ ಶಾಪ ಎನ್ನುವ ಭಾವನೆ ಹೋಗಿಲ್ಲ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷೆ ಬಿ. ಅನುಸೂಯಮ್ಮ ವಿಷಾದಿಸಿದರು.<br /> <br /> ತಾಲ್ಲೂಕಿನ ಬಿಡದಿ ಹೋಬಳಿಯ ಗೌರಿಪುರ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಕುವೆಂಪು ಮಹಿಳಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ಸೋಮವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾವಂತ ಸಮುದಾಯದಲ್ಲಿಯೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಹೆಚ್ಚುತ್ತಿವೆ. ಇದಕ್ಕೆ ವರದಕ್ಷಿಣೆ ಪಿಡುಗು ಮತ್ತು ವಂಶೋದ್ಧಾರಕ ಬೇಕು ಎಂಬ ಮೂಢನಂಬಿಕೆಯೇ ಕಾರಣವಾದೆ ಎಂದರು.<br /> <br /> ಭಾರತ ಸೇವಾದಲದ ರಾಜ್ಯ ಕಾರ್ಯದರ್ಶಿ ಕಲ್ಪನಾ ಶಿವಣ್ಣ ಮಾತನಾಡಿ, ಮಹಿಳಾ ಪರ ಕಾನೂನು ಬಲಗೊಂಡಿದ್ದರೂ ಅವರ ಮೇಲಿನ ದೌರ್ಜನ್ಯ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ’ ಎಂದರು.<br /> <br /> ‘ಮಹಿಳೆಯರು ಧೈರ್ಯದಿಂದ ತಮ್ಮ ಎಲ್ಲಾ ಸಮಸ್ಯೆಗಳನ್ನು ಎದುರಿಸಬೇಕು. ಕಾನೂನಿನ ಬಗ್ಗೆ ಹೆಚ್ಚು ಹೆಚ್ಚಾಗಿ ಅರಿವು ಮೂಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>