<p><strong>ಹೊಸಪೇಟೆ:</strong> ನಿವೃತ್ತ ನ್ಯಾಯ ಮೂರ್ತಿ, ಮಾಜಿ ಲೋಕಾ ಯುಕ್ತ ಎನ್. ಸಂತೋಷ ಹೆಗ್ಡೆ, ನಿವೃತ್ತ ನ್ಯಾಯಾಧೀಶ, ಸಾಹಿತಿ ಕೋ.ಚೆನ್ನಬಸಪ್ಪ ಹಾಗೂಬೆಂಗಳೂರಿನ ಇಸ್ರೊ ಕೇಂದ್ರದ ನಿರ್ದೇಶಕ ಎಸ್.ಕೆ.ಶಿವಕುಮಾರ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ‘ನಾಡೋಜ’ ಗೌರವಕ್ಕೆ ಆಯ್ಕೆ ಯಾಗಿದ್ದಾರೆ.<br /> <br /> ಇದೇ 21ರಂದು ನಡೆಯುವ ವಿಶ್ವವಿದ್ಯಾಲಯದ ‘ನುಡಿಹಬ್ಬ’ ಕಾರ್ಯ ಕ್ರಮ ದಲ್ಲಿ ಈ ಮೂವರು ಗಣ್ಯರಿಗೆ ‘ನಾಡೋಜ’ ಗೌರವ ಪದವಿ ಪ್ರದಾನ ಮಾಡಲಾಗುವುದು ಎಂದು ಮಂಗಳ ವಾರ ಸುದ್ದಿಗೋಷ್ಠಿಯಲ್ಲಿ ವಿ.ವಿ. ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.<br /> <br /> ರಾಜ್ಯಪಾಲ ಎಚ್.ಆರ್.ಭಾರ ದ್ವಾಜ್, ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಪಾಲ್ಗೊಳ್ಳುವರು. ಹಿರಿಯ ಪತ್ರಕರ್ತ ನಾಗೇಶ ಹೆಗಡೆ ‘ನುಡಿಹಬ್ಬ’ದ ಭಾಷಣ ಮಾಡು ವರು ಎಂದು ಹೇಳಿದರು.<br /> <br /> ‘ಪ್ರಸಕ್ತ ಸಾಲಿನಲ್ಲಿ ‘ನಾಡೋಜ’ ಗೌರವವನ್ನು ಮೂವರಿಗೆ ಸೀಮಿತ ಗೊಳಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ನಿವೃತ್ತ ನ್ಯಾಯ ಮೂರ್ತಿ, ಮಾಜಿ ಲೋಕಾ ಯುಕ್ತ ಎನ್. ಸಂತೋಷ ಹೆಗ್ಡೆ, ನಿವೃತ್ತ ನ್ಯಾಯಾಧೀಶ, ಸಾಹಿತಿ ಕೋ.ಚೆನ್ನಬಸಪ್ಪ ಹಾಗೂಬೆಂಗಳೂರಿನ ಇಸ್ರೊ ಕೇಂದ್ರದ ನಿರ್ದೇಶಕ ಎಸ್.ಕೆ.ಶಿವಕುಮಾರ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ‘ನಾಡೋಜ’ ಗೌರವಕ್ಕೆ ಆಯ್ಕೆ ಯಾಗಿದ್ದಾರೆ.<br /> <br /> ಇದೇ 21ರಂದು ನಡೆಯುವ ವಿಶ್ವವಿದ್ಯಾಲಯದ ‘ನುಡಿಹಬ್ಬ’ ಕಾರ್ಯ ಕ್ರಮ ದಲ್ಲಿ ಈ ಮೂವರು ಗಣ್ಯರಿಗೆ ‘ನಾಡೋಜ’ ಗೌರವ ಪದವಿ ಪ್ರದಾನ ಮಾಡಲಾಗುವುದು ಎಂದು ಮಂಗಳ ವಾರ ಸುದ್ದಿಗೋಷ್ಠಿಯಲ್ಲಿ ವಿ.ವಿ. ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.<br /> <br /> ರಾಜ್ಯಪಾಲ ಎಚ್.ಆರ್.ಭಾರ ದ್ವಾಜ್, ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಪಾಲ್ಗೊಳ್ಳುವರು. ಹಿರಿಯ ಪತ್ರಕರ್ತ ನಾಗೇಶ ಹೆಗಡೆ ‘ನುಡಿಹಬ್ಬ’ದ ಭಾಷಣ ಮಾಡು ವರು ಎಂದು ಹೇಳಿದರು.<br /> <br /> ‘ಪ್ರಸಕ್ತ ಸಾಲಿನಲ್ಲಿ ‘ನಾಡೋಜ’ ಗೌರವವನ್ನು ಮೂವರಿಗೆ ಸೀಮಿತ ಗೊಳಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>