<p>ಹೊಸಪೇಟೆ: ‘ಪ್ರಸಕ್ತ ಸಾಲಿನ ‘ನಾಡೋಜ’ ಗೌರವ ಪದವಿಗೆ ಮೂವರು ಗಣ್ಯರನ್ನು ಮಾತ್ರ ಆಯ್ಕೆ ಮಾಡಲಾಗಿದ್ದು, ಈ ಬಾರಿಯ ಆಯ್ಕೆಗೆ ಯಾವುದೇ ಅಪಸ್ವರ ಕೇಳಿ ಬಂದಿಲ್ಲ’ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ಸ್ಪಷ್ಟಪಡಿಸಿದರು.<br /> <br /> ವಿದ್ಯಾರಣ್ಯದಲ್ಲಿರುವ ಹಂಪಿ ಕನ್ನಡ ವಿ.ವಿ.ಯ ಕ್ರಿಯಾಶಕ್ತಿ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಈ ಹಿಂದೆ 6ರಿಂದ 7ಜನ ಗಣ್ಯರಿಗೆ ‘ನಾಡೋಜ’ ಗೌರವ ಪದವಿ ಪ್ರದಾನ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಈ ಸಂಖ್ಯೆಯನ್ನು ಮೂರಕ್ಕೆ ಸೀಮಿತಗೊಳಿಸಲಾಗಿದ್ದು, ವಿ.ವಿ.ಯ ಸಿಂಡಿಕೇಟ್ ಸದಸ್ಯರು ಹಾಗೂ ಆಯ್ಕೆ ಸಮಿತಿ ಸದಸ್ಯರು ಒಮ್ಮತದಿಂದ ಈ ಮೂವರು ಗಣ್ಯರನ್ನು ಆಯ್ಕೆ ಮಾಡಿದ್ದಾರೆ’ ಎಂದು ಅವರು ಹೇಳಿದರು.<br /> <br /> ‘ನ್ಯಾಯಾಂಗ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ ಹೆಗ್ಡೆ, ನಿವೃತ್ತ ನ್ಯಾಯಾಧೀಶ, ಸಾಹಿತಿ ಹಾಗೂ ಹೋರಾಟಗಾರ ಕೂಡ್ಲಿಗಿ ತಾಲ್ಲೂಕಿನ ಕೋ.ಚೆನ್ನಬಸಪ್ಪ ಹಾಗೂ ಬಾಹ್ಯಾಕಾಶ ಕ್ಷೇತ್ರದ ಖ್ಯಾತ ವಿಜ್ಞಾನಿ ಎಸ್.ಕೆ.ಶಿವಕುಮಾರ ಅವರನ್ನು ಈ ಬಾರಿಯ ‘ನಾಡೋಜ’ ಗೌರವ ಪದವಿ ಪ್ರದಾನಕ್ಕೆ ಆಯ್ಕೆ ಮಾಡಲಾಗಿದೆ’ ಎಂದರು.<br /> <br /> ‘ಪುಸ್ತಕ ಪ್ರಕಟಣೆಗಾಗಿ ಈ ಬಾರಿ ಇ–ಟೆಂಡರ್ ಮೂಲಕ ಮುದ್ರಣಕಾರರನ್ನು ಆಯ್ಕೆ ಮಾಡಬೇಕಾಗಿದೆ. ಈ ಕಾರಣದಿಂದ ಈ ಬಾರಿ ‘ನುಡಿಹಬ್ಬ’ದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ಅಲ್ಲದೆ ಈಗಾಗಲೇ ವಿ.ವಿ.ಯಲ್ಲಿ ಹಲವಾರು ರಾಷ್ಟ್ರೀಯ ವಿಚಾರ ಸಂಕಿರಣಗಳು ನಡೆದಿರುವುದರಿಂದ ‘ನುಡಿಹಬ್ಬ’ದ ಅಂಗವಾಗಿ ರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ಆಯೋಜಿಸಿರುವುದಿಲ್ಲ’ ಎಂದು ಅವರು ತಿಳಿಸಿದರು.<br /> <br /> ‘ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ತಮ್ಮ ಅಧಿಕಾರದ ಕೊನೆಯಲ್ಲಿ ಇರುವುದರಿಂದ ಈ ಬಾರಿ ವಿ.ವಿ. ಘಟಿಕೋತ್ಸವಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ.<br /> <br /> ಕುಲಸಚಿವ ಡಾ.ವಿಜಯ ಪೊಣಚ ತಂಬಂಡ, ಡೀನ್ಗಳಾದ ಡಾ.ಕೆ.ಎಂ.ಮೇತ್ರೆ, ಡಾ.ಡಿ.ಪಾಂಡುರಂಗಬಾಬು, ಡಾ.ಅಶೋಕಕುಮಾರ ರಂಜೇರೆ, ಡಾ.ಡಿ.ಮೀನಾಕ್ಷಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ‘ಪ್ರಸಕ್ತ ಸಾಲಿನ ‘ನಾಡೋಜ’ ಗೌರವ ಪದವಿಗೆ ಮೂವರು ಗಣ್ಯರನ್ನು ಮಾತ್ರ ಆಯ್ಕೆ ಮಾಡಲಾಗಿದ್ದು, ಈ ಬಾರಿಯ ಆಯ್ಕೆಗೆ ಯಾವುದೇ ಅಪಸ್ವರ ಕೇಳಿ ಬಂದಿಲ್ಲ’ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ಸ್ಪಷ್ಟಪಡಿಸಿದರು.<br /> <br /> ವಿದ್ಯಾರಣ್ಯದಲ್ಲಿರುವ ಹಂಪಿ ಕನ್ನಡ ವಿ.ವಿ.ಯ ಕ್ರಿಯಾಶಕ್ತಿ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಈ ಹಿಂದೆ 6ರಿಂದ 7ಜನ ಗಣ್ಯರಿಗೆ ‘ನಾಡೋಜ’ ಗೌರವ ಪದವಿ ಪ್ರದಾನ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಈ ಸಂಖ್ಯೆಯನ್ನು ಮೂರಕ್ಕೆ ಸೀಮಿತಗೊಳಿಸಲಾಗಿದ್ದು, ವಿ.ವಿ.ಯ ಸಿಂಡಿಕೇಟ್ ಸದಸ್ಯರು ಹಾಗೂ ಆಯ್ಕೆ ಸಮಿತಿ ಸದಸ್ಯರು ಒಮ್ಮತದಿಂದ ಈ ಮೂವರು ಗಣ್ಯರನ್ನು ಆಯ್ಕೆ ಮಾಡಿದ್ದಾರೆ’ ಎಂದು ಅವರು ಹೇಳಿದರು.<br /> <br /> ‘ನ್ಯಾಯಾಂಗ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ ಹೆಗ್ಡೆ, ನಿವೃತ್ತ ನ್ಯಾಯಾಧೀಶ, ಸಾಹಿತಿ ಹಾಗೂ ಹೋರಾಟಗಾರ ಕೂಡ್ಲಿಗಿ ತಾಲ್ಲೂಕಿನ ಕೋ.ಚೆನ್ನಬಸಪ್ಪ ಹಾಗೂ ಬಾಹ್ಯಾಕಾಶ ಕ್ಷೇತ್ರದ ಖ್ಯಾತ ವಿಜ್ಞಾನಿ ಎಸ್.ಕೆ.ಶಿವಕುಮಾರ ಅವರನ್ನು ಈ ಬಾರಿಯ ‘ನಾಡೋಜ’ ಗೌರವ ಪದವಿ ಪ್ರದಾನಕ್ಕೆ ಆಯ್ಕೆ ಮಾಡಲಾಗಿದೆ’ ಎಂದರು.<br /> <br /> ‘ಪುಸ್ತಕ ಪ್ರಕಟಣೆಗಾಗಿ ಈ ಬಾರಿ ಇ–ಟೆಂಡರ್ ಮೂಲಕ ಮುದ್ರಣಕಾರರನ್ನು ಆಯ್ಕೆ ಮಾಡಬೇಕಾಗಿದೆ. ಈ ಕಾರಣದಿಂದ ಈ ಬಾರಿ ‘ನುಡಿಹಬ್ಬ’ದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ಅಲ್ಲದೆ ಈಗಾಗಲೇ ವಿ.ವಿ.ಯಲ್ಲಿ ಹಲವಾರು ರಾಷ್ಟ್ರೀಯ ವಿಚಾರ ಸಂಕಿರಣಗಳು ನಡೆದಿರುವುದರಿಂದ ‘ನುಡಿಹಬ್ಬ’ದ ಅಂಗವಾಗಿ ರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ಆಯೋಜಿಸಿರುವುದಿಲ್ಲ’ ಎಂದು ಅವರು ತಿಳಿಸಿದರು.<br /> <br /> ‘ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ತಮ್ಮ ಅಧಿಕಾರದ ಕೊನೆಯಲ್ಲಿ ಇರುವುದರಿಂದ ಈ ಬಾರಿ ವಿ.ವಿ. ಘಟಿಕೋತ್ಸವಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ.<br /> <br /> ಕುಲಸಚಿವ ಡಾ.ವಿಜಯ ಪೊಣಚ ತಂಬಂಡ, ಡೀನ್ಗಳಾದ ಡಾ.ಕೆ.ಎಂ.ಮೇತ್ರೆ, ಡಾ.ಡಿ.ಪಾಂಡುರಂಗಬಾಬು, ಡಾ.ಅಶೋಕಕುಮಾರ ರಂಜೇರೆ, ಡಾ.ಡಿ.ಮೀನಾಕ್ಷಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>