<p><strong>ಚಿತ್ರದುರ್ಗ:</strong> ಲೋಕಸಭಾ ಚುನಾವಣೆ ಯಲ್ಲಿ ಚಿತ್ರದುರ್ಗದಿಂದ ಸ್ಪರ್ಧೆ ಮಾಡುವುದಾಗಿ ಛಲವಾದಿ ಮಹಾಸಂಸ್ಥಾನ ಮಠದ ಬಸವನಾಗಿ ದೇವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕತೆ, ಭ್ರಷ್ಟಾಚಾರ ಇಲ್ಲದೆ ಸೇವೆ ಸಲ್ಲಿಸುವ ಪಕ್ಷದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದು, ಸದ್ಯಕ್ಕೆ ಬಿಜೆಪಿ ಮುಖಂಡರಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.<br /> <br /> ಬಿಜೆಪಿ ವರಿಷ್ಠರು ಈಚೆಗೆ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಜನಾರ್ದನಸ್ವಾಮಿ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಯಾರಿಗೆ ಟಿಕೆಟ್ ನೀಡಬೇಕು ಎಂಬ ನಿರ್ಧಾರವಾಗಿಲ್ಲ ಎಂದು ಉತ್ತರಿಸಿದರು.<br /> <br /> ಛಲವಾದಿ ಗುರುಪೀಠದ ಪೀಠಾಧ್ಯಕ್ಷನಾಗಿ ಧಾರ್ಮಿಕ ಕಾರ್ಯದ ಜತೆಯಲ್ಲಿ ರಾಜಕೀಯವಾಗಿ ಜನಸೇವೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ತೀರ್ಮಾನ ಕೈಗೊಂಡಿದ್ದು, ಸ್ಪರ್ಧೆ ಖಚಿತ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಲೋಕಸಭಾ ಚುನಾವಣೆ ಯಲ್ಲಿ ಚಿತ್ರದುರ್ಗದಿಂದ ಸ್ಪರ್ಧೆ ಮಾಡುವುದಾಗಿ ಛಲವಾದಿ ಮಹಾಸಂಸ್ಥಾನ ಮಠದ ಬಸವನಾಗಿ ದೇವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕತೆ, ಭ್ರಷ್ಟಾಚಾರ ಇಲ್ಲದೆ ಸೇವೆ ಸಲ್ಲಿಸುವ ಪಕ್ಷದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದು, ಸದ್ಯಕ್ಕೆ ಬಿಜೆಪಿ ಮುಖಂಡರಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.<br /> <br /> ಬಿಜೆಪಿ ವರಿಷ್ಠರು ಈಚೆಗೆ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಜನಾರ್ದನಸ್ವಾಮಿ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಯಾರಿಗೆ ಟಿಕೆಟ್ ನೀಡಬೇಕು ಎಂಬ ನಿರ್ಧಾರವಾಗಿಲ್ಲ ಎಂದು ಉತ್ತರಿಸಿದರು.<br /> <br /> ಛಲವಾದಿ ಗುರುಪೀಠದ ಪೀಠಾಧ್ಯಕ್ಷನಾಗಿ ಧಾರ್ಮಿಕ ಕಾರ್ಯದ ಜತೆಯಲ್ಲಿ ರಾಜಕೀಯವಾಗಿ ಜನಸೇವೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ತೀರ್ಮಾನ ಕೈಗೊಂಡಿದ್ದು, ಸ್ಪರ್ಧೆ ಖಚಿತ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>