<p><strong>ಬೆಂಗಳೂರು: </strong>ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ‘ನಾವು ಮತ್ತು ನಮ್ಮ ಮತ ಮಾರಾಟಕ್ಕಿಲ್ಲ ಆಂದೋಲನ’ ಹಮ್ಮಿಕೊಂಡಿದೆ. ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಂದೋಲನದ ನಿರ್ದೇಶಕಿ ಕವಿತಾ ರತ್ನಾ, ‘ಮತದಾರರ ಸ್ವಾಭಿಮಾನವನ್ನು ಎತ್ತಿ ಹಿಡಿಯುವುದು ಆಂದೋಲನದ ಉದ್ದೇಶವಾಗಿದೆ.<br /> <br /> ಡಿಜಿಟಲ್ ಮಾಧ್ಯಮ ಪ್ರಚಾರಾಂದೋಲನವನ್ನು ಆರಂಭಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲಿರುವ ಯುವ ಜನರನ್ನು ಚುನಾವಣೆ ಚರ್ಚೆಗೆ ಎಳೆಯಲು ಈ ಮಾಧ್ಯಮ ನೆರವಾಗಲಿದೆ’ ಎಂದರು. ‘ಮತದಾರರು ಹಣ, ಹೆಂಡ, ವಿವಿಧ ಗೃಹ ಬಳಕೆಯ ವಸ್ತುಗಳ ಆಮಿಷಕ್ಕೆ ಒಳಗಾಗಬಾರದು. ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಕುರಿತು ಆಂದೋಲನದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು’ ಎಂದು ಹೇಳಿದರು.<br /> <br /> ‘ಈಗಾಗಲೇ ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ ಮುಂತಾದೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಗುಲ್ಬರ್ಗ, ಗದಗ, ರಾಯಚೂರು, ಕೊಪ್ಪಳ, ಚಾಮರಾಜನಗರ, ಯಾದಗಿರಿ ಮತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ‘ನಾವು ಮತ್ತು ನಮ್ಮ ಮತ ಮಾರಾಟಕ್ಕಿಲ್ಲ ಆಂದೋಲನ’ ಹಮ್ಮಿಕೊಂಡಿದೆ. ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಂದೋಲನದ ನಿರ್ದೇಶಕಿ ಕವಿತಾ ರತ್ನಾ, ‘ಮತದಾರರ ಸ್ವಾಭಿಮಾನವನ್ನು ಎತ್ತಿ ಹಿಡಿಯುವುದು ಆಂದೋಲನದ ಉದ್ದೇಶವಾಗಿದೆ.<br /> <br /> ಡಿಜಿಟಲ್ ಮಾಧ್ಯಮ ಪ್ರಚಾರಾಂದೋಲನವನ್ನು ಆರಂಭಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲಿರುವ ಯುವ ಜನರನ್ನು ಚುನಾವಣೆ ಚರ್ಚೆಗೆ ಎಳೆಯಲು ಈ ಮಾಧ್ಯಮ ನೆರವಾಗಲಿದೆ’ ಎಂದರು. ‘ಮತದಾರರು ಹಣ, ಹೆಂಡ, ವಿವಿಧ ಗೃಹ ಬಳಕೆಯ ವಸ್ತುಗಳ ಆಮಿಷಕ್ಕೆ ಒಳಗಾಗಬಾರದು. ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಕುರಿತು ಆಂದೋಲನದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು’ ಎಂದು ಹೇಳಿದರು.<br /> <br /> ‘ಈಗಾಗಲೇ ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ ಮುಂತಾದೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಗುಲ್ಬರ್ಗ, ಗದಗ, ರಾಯಚೂರು, ಕೊಪ್ಪಳ, ಚಾಮರಾಜನಗರ, ಯಾದಗಿರಿ ಮತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>