<p><strong>ಬೆಂಗಳೂರು:</strong> ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರ ಶೀಘ್ರದಲ್ಲೇ ಜಾರಿ ಮಾಡಬೇಕು. ಆಶ್ಲೀಲ ಸಿನಿಮಾಗಳನ್ನು ನಿಷೇಧಿಸಲು ಮುಂದಾಗಬೇಕು ಎಂದು ಹಿರಿಯ ರಂಗಕರ್ಮಿ ಎಚ್.ಜಿ.ಸೋಮಶೇಖರ್ ರಾವ್ ಒತ್ತಾಯಿಸಿದ್ದಾರೆ.<br /> <br /> ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ತಡೆ ಹಾಗೂ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಸರ್ಕಾರಕ್ಕೆ ಒತ್ತಾಯಿಸಿ ಬೆಂಗಳೂರಿನ ಟೌನ್ಹಾಲ್ನಲ್ಲಿ ಮಂಗಳವಾರ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ಸೇರಿದಂತೆ ಹಲವು ಸಂಸ್ಥೆಗಳು ಜಂಟಿಯಾಗಿ ಏರ್ಪಡಿಸಿದ್ದ ‘ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಅತ್ಯಾಚಾರ, ಅನ್ಯಾಯಗಳು ಅಂತ್ಯವಾಗಿಲ್ಲ. ನಿರ್ಭಯಳ ಮೇಲೆ ನಡೆದ ದೌರ್ಜನ್ಯ ಅಮಾನವೀಯ. ಆಕೆಯ ಆಕ್ರಂದನ ಭಾರತದಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದಲ್ಲಿ ಪ್ರತಿ 7 ನಿಮಿಷಗಳಿಗೊಮ್ಮೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ’ ಎಂದು ಕಳವಳ ವ್ಯಕ್ತಪಡಿಸಿದರು.<br /> <br /> ನಂತರ ಮಾತನಾಡಿದ ಎಐಎಂಎಸ್ಎಸ್ ಅಖಿಲ ಭಾರತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಜಿ.ಜಯಲಕ್ಷ್ಮಿ, ನಿರ್ಭಯ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗಿದೆ. ಈ ಪ್ರಕರಣದಲ್ಲಿ ಆಕೆಗೆ ಪೂರ್ಣ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರಿಯಬೇಕು.ಈ ಪ್ರಕರಣದ ಬಳಿಕ ದೆಹಲಿಯಲ್ಲಿ ಅತ್ಯಾಚಾರ ಪ್ರಕರಣಗಳು 5 ಪಟ್ಟು ಹೆಚ್ಚಾಗಿವೆ.<br /> <br /> ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರನ್ನೇ ಅಪರಾಧಿಗಳೆಂಬಂತೆ ಚಿತ್ರಿಸಲಾಗುತ್ತಿದೆ ಎಂದರು. ಹೋರಾಟದಿಂದ ಸಮಾಜ ಪರಿವರ್ತನೆ ಮಾಡಲು ಸಾಧ್ಯ. ಹೋರಾಟದ ಮನೋಭಾವ ಯುವಜನಾಂಗವನ್ನು ಬದಲಾಯಿಸುತ್ತದೆ. ಹೋರಾಟ ಹೆಚ್ಚು ಹೆಚ್ಚಾದಂತೆ ಉತ್ತಮ ಸಮಾಜ ರೂಪುಗೊಳ್ಳುತ್ತದೆ ಎಂದು ಯುವಜನಾಂಗಕ್ಕೆ ಅನ್ಯಾಯದ ವಿರುದ್ಧ ಹೋರಾಡಲು ಕರೆ ನೀಡಿದರು.<br /> <br /> ರಾಜ್ಯ ಎಐಎಂಎಸ್ಎಸ್ ಕಾರ್ಯದರ್ಶಿ ಅಪರ್ಣಾ.ಬಿ.ಆರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಡಾ.ಸುಧಾ ಕಾಮತ್, ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಶನ್ ಅಖಿಲ ಭಾರತ ಅಧ್ಯಕ್ಷರಾದ ಡಾ.ಬಿ.ಆರ್.ಮಂಜುನಾಥ್, ಎಐಡಿವೈಓ ರಾಜ್ಯಾಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ, ರಂಗಕರ್ಮಿ ಅಲ್ಲಂಪ್ರಭು ಬೆಟ್ಟದೂರು, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ರಾಜ್ಯಾಧ್ಯಕ್ಷ ವಿ.ಎನ್.ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.<br /> <br /> ಇತ್ತೀಚೆಗೆ ಹೃದಯಾಘಾತದಿಂದ ಮೃತರಾದ ಸಾಮಾಜಿಕ ಹೋರಾಟಗಾರ್ತಿ ಪ್ರತಿಭಾಕುಮಾರಿಯವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.<br /> <br /> ಇದಕ್ಕು ಮೊದಲು ಟೌನ್ಹಾಲ್ನ ಮುಂಭಾಗದಲ್ಲಿ ವಿದ್ಯಾರ್ಥಿಗಳು, ಸರ್ಕಾರ ನಿರ್ಭಯ ಪ್ರಕರಣದಿಂದ ಎಚ್ಚೆತ್ತು ಅತೀ ಶೀಘ್ರ ಮಹಿಳೆಯರ ದೌರ್ಜನ್ಯ ತಡೆ ಕಾಯ್ದೆಗಳನ್ನು, ನ್ಯಾ. ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಜಾರಿ ತರುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರ ಶೀಘ್ರದಲ್ಲೇ ಜಾರಿ ಮಾಡಬೇಕು. ಆಶ್ಲೀಲ ಸಿನಿಮಾಗಳನ್ನು ನಿಷೇಧಿಸಲು ಮುಂದಾಗಬೇಕು ಎಂದು ಹಿರಿಯ ರಂಗಕರ್ಮಿ ಎಚ್.ಜಿ.ಸೋಮಶೇಖರ್ ರಾವ್ ಒತ್ತಾಯಿಸಿದ್ದಾರೆ.<br /> <br /> ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ತಡೆ ಹಾಗೂ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಸರ್ಕಾರಕ್ಕೆ ಒತ್ತಾಯಿಸಿ ಬೆಂಗಳೂರಿನ ಟೌನ್ಹಾಲ್ನಲ್ಲಿ ಮಂಗಳವಾರ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ಸೇರಿದಂತೆ ಹಲವು ಸಂಸ್ಥೆಗಳು ಜಂಟಿಯಾಗಿ ಏರ್ಪಡಿಸಿದ್ದ ‘ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಅತ್ಯಾಚಾರ, ಅನ್ಯಾಯಗಳು ಅಂತ್ಯವಾಗಿಲ್ಲ. ನಿರ್ಭಯಳ ಮೇಲೆ ನಡೆದ ದೌರ್ಜನ್ಯ ಅಮಾನವೀಯ. ಆಕೆಯ ಆಕ್ರಂದನ ಭಾರತದಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದಲ್ಲಿ ಪ್ರತಿ 7 ನಿಮಿಷಗಳಿಗೊಮ್ಮೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ’ ಎಂದು ಕಳವಳ ವ್ಯಕ್ತಪಡಿಸಿದರು.<br /> <br /> ನಂತರ ಮಾತನಾಡಿದ ಎಐಎಂಎಸ್ಎಸ್ ಅಖಿಲ ಭಾರತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಜಿ.ಜಯಲಕ್ಷ್ಮಿ, ನಿರ್ಭಯ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗಿದೆ. ಈ ಪ್ರಕರಣದಲ್ಲಿ ಆಕೆಗೆ ಪೂರ್ಣ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರಿಯಬೇಕು.ಈ ಪ್ರಕರಣದ ಬಳಿಕ ದೆಹಲಿಯಲ್ಲಿ ಅತ್ಯಾಚಾರ ಪ್ರಕರಣಗಳು 5 ಪಟ್ಟು ಹೆಚ್ಚಾಗಿವೆ.<br /> <br /> ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಮಹಿಳೆಯರನ್ನೇ ಅಪರಾಧಿಗಳೆಂಬಂತೆ ಚಿತ್ರಿಸಲಾಗುತ್ತಿದೆ ಎಂದರು. ಹೋರಾಟದಿಂದ ಸಮಾಜ ಪರಿವರ್ತನೆ ಮಾಡಲು ಸಾಧ್ಯ. ಹೋರಾಟದ ಮನೋಭಾವ ಯುವಜನಾಂಗವನ್ನು ಬದಲಾಯಿಸುತ್ತದೆ. ಹೋರಾಟ ಹೆಚ್ಚು ಹೆಚ್ಚಾದಂತೆ ಉತ್ತಮ ಸಮಾಜ ರೂಪುಗೊಳ್ಳುತ್ತದೆ ಎಂದು ಯುವಜನಾಂಗಕ್ಕೆ ಅನ್ಯಾಯದ ವಿರುದ್ಧ ಹೋರಾಡಲು ಕರೆ ನೀಡಿದರು.<br /> <br /> ರಾಜ್ಯ ಎಐಎಂಎಸ್ಎಸ್ ಕಾರ್ಯದರ್ಶಿ ಅಪರ್ಣಾ.ಬಿ.ಆರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಡಾ.ಸುಧಾ ಕಾಮತ್, ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಶನ್ ಅಖಿಲ ಭಾರತ ಅಧ್ಯಕ್ಷರಾದ ಡಾ.ಬಿ.ಆರ್.ಮಂಜುನಾಥ್, ಎಐಡಿವೈಓ ರಾಜ್ಯಾಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ, ರಂಗಕರ್ಮಿ ಅಲ್ಲಂಪ್ರಭು ಬೆಟ್ಟದೂರು, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ರಾಜ್ಯಾಧ್ಯಕ್ಷ ವಿ.ಎನ್.ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.<br /> <br /> ಇತ್ತೀಚೆಗೆ ಹೃದಯಾಘಾತದಿಂದ ಮೃತರಾದ ಸಾಮಾಜಿಕ ಹೋರಾಟಗಾರ್ತಿ ಪ್ರತಿಭಾಕುಮಾರಿಯವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.<br /> <br /> ಇದಕ್ಕು ಮೊದಲು ಟೌನ್ಹಾಲ್ನ ಮುಂಭಾಗದಲ್ಲಿ ವಿದ್ಯಾರ್ಥಿಗಳು, ಸರ್ಕಾರ ನಿರ್ಭಯ ಪ್ರಕರಣದಿಂದ ಎಚ್ಚೆತ್ತು ಅತೀ ಶೀಘ್ರ ಮಹಿಳೆಯರ ದೌರ್ಜನ್ಯ ತಡೆ ಕಾಯ್ದೆಗಳನ್ನು, ನ್ಯಾ. ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಜಾರಿ ತರುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>