<p><strong>ಕಾರವಾರ:</strong> ‘ಸೀಬರ್ಡ್ ನೌಕಾನೆಲೆ ಯೋಜನೆ ಪೂರ್ಣಗೊಂಡರೆ ದಕ್ಷಿಣ ಭಾರತ ಇನ್ನಷ್ಟು ಸುರಕ್ಷಿತವಾಗಲಿದ್ದು, ಇಲ್ಲಿನ ಸುತ್ತಲಿನ ಪ್ರದೇಶ ನಿರೀಕ್ಷೆಗೂ ಮೀರಿ ಅಭಿವೃದ್ಧಿಯಾಗಲಿದೆ’ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಅರ್ಗಾದ ಕದಂಬ ನೌಕಾನೆಲೆಯಲ್ಲಿ ನೌಕಾ ಸಪ್ತಾಹದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.<br /> <br /> ‘ಸೀಬರ್ಡ್ ನೌಕಾನೆಲೆ’ ಯೋಜನೆ ರಾಷ್ಟ್ರೀಯ ಯೋಜನೆ ಯಾಗಿದ್ದು, ಇದಕ್ಕಾಗಿ ಜನರು ತ್ಯಾಗ ಮಾಡಲೇ ಬೇಕು. ಇದು ದೇಶದ ರಕ್ಷಣೆ ಪ್ರಶ್ನೆ ಹೀಗಾಗಿ ಎಲ್ಲರೂ ಇದಕ್ಕೆ ಸಹಕರಿಸಬೇಕು’ ಎಂದರು.<br /> <br /> ‘ನಿರಾಶ್ರಿತರಿಗೆ ಪರಿಹಾರ ಸಿಕ್ಕೇ ಸಿಗುತ್ತದೆ. ಆದರೆ, ಇದರ ಜೊತೆಗೆ ದೇಶದ ಕರಾವಳಿಯ ಭದ್ರತೆಯನ್ನೂ ನೋಡಿಕೊಳ್ಳಬೇಕಾಗುತ್ತದೆ. ದೇಶದ ರಕ್ಷಣೆಯ ಬಗ್ಗೆಯೂ ಪ್ರಜೆಗಳು ಎಚ್ಚರ ವಹಿಸಬೇಕು’ ಎಂದು ನಿರಾಶ್ರಿತರ ಪರಿಹಾರದ ಕುರಿತ ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾಜ್ಯಪಾಲರು ಖಾರವಾಗಿ ಉತ್ತರಿಸಿದರು.<br /> <br /> ಕರ್ನಾಟಕ ನೌಕಾ ವಲಯದ ಮುಖ್ಯಸ್ಥ ರಿಯರ್ ಅಡ್ಮಿರಲ್ ಸಿ.ಎಸ್. ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಸೀಬರ್ಡ್ ನೌಕಾನೆಲೆ ಯೋಜನೆ ಪೂರ್ಣಗೊಂಡರೆ ದಕ್ಷಿಣ ಭಾರತ ಇನ್ನಷ್ಟು ಸುರಕ್ಷಿತವಾಗಲಿದ್ದು, ಇಲ್ಲಿನ ಸುತ್ತಲಿನ ಪ್ರದೇಶ ನಿರೀಕ್ಷೆಗೂ ಮೀರಿ ಅಭಿವೃದ್ಧಿಯಾಗಲಿದೆ’ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅಭಿಪ್ರಾಯಪಟ್ಟರು.<br /> <br /> ಇಲ್ಲಿನ ಅರ್ಗಾದ ಕದಂಬ ನೌಕಾನೆಲೆಯಲ್ಲಿ ನೌಕಾ ಸಪ್ತಾಹದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.<br /> <br /> ‘ಸೀಬರ್ಡ್ ನೌಕಾನೆಲೆ’ ಯೋಜನೆ ರಾಷ್ಟ್ರೀಯ ಯೋಜನೆ ಯಾಗಿದ್ದು, ಇದಕ್ಕಾಗಿ ಜನರು ತ್ಯಾಗ ಮಾಡಲೇ ಬೇಕು. ಇದು ದೇಶದ ರಕ್ಷಣೆ ಪ್ರಶ್ನೆ ಹೀಗಾಗಿ ಎಲ್ಲರೂ ಇದಕ್ಕೆ ಸಹಕರಿಸಬೇಕು’ ಎಂದರು.<br /> <br /> ‘ನಿರಾಶ್ರಿತರಿಗೆ ಪರಿಹಾರ ಸಿಕ್ಕೇ ಸಿಗುತ್ತದೆ. ಆದರೆ, ಇದರ ಜೊತೆಗೆ ದೇಶದ ಕರಾವಳಿಯ ಭದ್ರತೆಯನ್ನೂ ನೋಡಿಕೊಳ್ಳಬೇಕಾಗುತ್ತದೆ. ದೇಶದ ರಕ್ಷಣೆಯ ಬಗ್ಗೆಯೂ ಪ್ರಜೆಗಳು ಎಚ್ಚರ ವಹಿಸಬೇಕು’ ಎಂದು ನಿರಾಶ್ರಿತರ ಪರಿಹಾರದ ಕುರಿತ ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾಜ್ಯಪಾಲರು ಖಾರವಾಗಿ ಉತ್ತರಿಸಿದರು.<br /> <br /> ಕರ್ನಾಟಕ ನೌಕಾ ವಲಯದ ಮುಖ್ಯಸ್ಥ ರಿಯರ್ ಅಡ್ಮಿರಲ್ ಸಿ.ಎಸ್. ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>