<p><strong>ಬೆಂಗಳೂರು:</strong> ಕುಟುಕು ಕಾರ್ಯಾಚರಣೆಗೆ ತೆರಳಿದ್ದ ವೇಳೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿ ನ್ಯೂಸ್9 ಆಂಗ್ಲ ಸುದ್ದಿವಾಹಿನಿಯ ವರದಿಗಾರರು ನೀಡಿದ್ದ ದೂರಿನ ಸಂಬಂಧ ಸದಾಶಿವನಗರ ಪೊಲೀಸರು ಸೋಮವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ.<br /> <br /> ಆದರೆ, ಎಫ್ಐಆರ್ನ ಆರೋಪಿಗಳ ವಿವರದ ಕಾಲಂನಲ್ಲಿ ‘ಅಪರಿಚಿತರು’ ಎಂದು ನಮೂದಿಸಲಾಗಿದೆ.<br /> ‘ನ್ಯೂಸ್ 9 ಆಂಗ್ಲ’ ಸುದ್ದಿವಾಹಿನಿಯ ವರದಿಗಾರರಾದ ಶ್ರೇಯಸ್ ಮತ್ತು ಶ್ವೇತಾಪ್ರಭು ಅವರು ಮಾ.10ರಂದು ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಕುಟುಕು ಕಾರ್ಯಾಚರಣೆಗೆ ತೆರಳಿದ್ದರು.<br /> <br /> ಶ್ರೇಯಸ್ ಮತ್ತು ಶ್ವೇತಾಪ್ರಭು ಅವರು ತಮಗೆ ₨ 6 ಲಕ್ಷ ಲಂಚ ನೀಡಲು ಬಂದಿದ್ದರು ಎಂದು ಆರೋಪಿಸಿ ಡಿ.ಕೆ.ಶಿವಕುಮಾರ್, ಆ ಇಬ್ಬರನ್ನು ಸದಾಶಿವನಗರ ಪೊಲೀಸರಿಗೆ ಹಿಡಿದುಕೊಟ್ಟಿದ್ದರು.<br /> <br /> ನಂತರ ಆ ವರದಿಗಾರರು, ‘ಡಿ.ಕೆ.ಶಿವಕುಮಾರ್ ಮತ್ತು ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು’ ಎಂದು ಆರೋಪಿಸಿ ಮಾ.11ರಂದು ಪ್ರತಿದೂರು ನೀಡಿದ್ದರು. ಅಲ್ಲದೇ, ‘ಡಿ.ಕೆ.ಶಿವಕುಮಾರ್ ಮತ್ತು ಬೆಂಬಲಿಗರು ತಮ್ಮ ಮಾನಭಂಗಕ್ಕೆ ಯತ್ನಿಸಿದ್ದರು’ ಎಂದು ಶ್ವೇತಾಪ್ರಭು ದೂರಿನಲ್ಲಿ ಆರೋಪಿಸಿದ್ದರು.<br /> <br /> ‘ಕಾನೂನು ಮತ್ತು ಸುವ್ಯವಸ್ಥೆ (ಪೂರ್ವ) ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಅವರು ಪ್ರಕರಣದ ಪೂರ್ವಭಾವಿ ವಿಚಾರಣೆ ನಡೆಸಿ ವರದಿ ನೀಡಿದ್ದರು. ಆ ವರದಿಯ ಬಗ್ಗೆ ನಗರ ಪೊಲೀಸ್ ಕಮಿಷನರ್ ಅವರು ಕಾನೂನು ತಜ್ಞರ ಅಭಿಪ್ರಾಯ ಪಡೆದು, ಘಟನೆ ಸಂಬಂಧ ಅಪರಿಚಿತರ ವಿರುದ್ಧ ಹಲ್ಲೆ, ಮಾನಭಂಗ, ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದರು. ಆ ಆದೇಶದನ್ವಯ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ‘ಇಡೀ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆಯಬೇಕಿದ್ದರಿಂದ ಪ್ರಕರಣ ದಾಖಲಿಸುವುದು ವಿಳಂಬವಾಯಿತು’ ಎಂದು ಪೊಲೀಸರು ಎಫ್ಐಆರ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕುಟುಕು ಕಾರ್ಯಾಚರಣೆಗೆ ತೆರಳಿದ್ದ ವೇಳೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿ ನ್ಯೂಸ್9 ಆಂಗ್ಲ ಸುದ್ದಿವಾಹಿನಿಯ ವರದಿಗಾರರು ನೀಡಿದ್ದ ದೂರಿನ ಸಂಬಂಧ ಸದಾಶಿವನಗರ ಪೊಲೀಸರು ಸೋಮವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ.<br /> <br /> ಆದರೆ, ಎಫ್ಐಆರ್ನ ಆರೋಪಿಗಳ ವಿವರದ ಕಾಲಂನಲ್ಲಿ ‘ಅಪರಿಚಿತರು’ ಎಂದು ನಮೂದಿಸಲಾಗಿದೆ.<br /> ‘ನ್ಯೂಸ್ 9 ಆಂಗ್ಲ’ ಸುದ್ದಿವಾಹಿನಿಯ ವರದಿಗಾರರಾದ ಶ್ರೇಯಸ್ ಮತ್ತು ಶ್ವೇತಾಪ್ರಭು ಅವರು ಮಾ.10ರಂದು ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಕುಟುಕು ಕಾರ್ಯಾಚರಣೆಗೆ ತೆರಳಿದ್ದರು.<br /> <br /> ಶ್ರೇಯಸ್ ಮತ್ತು ಶ್ವೇತಾಪ್ರಭು ಅವರು ತಮಗೆ ₨ 6 ಲಕ್ಷ ಲಂಚ ನೀಡಲು ಬಂದಿದ್ದರು ಎಂದು ಆರೋಪಿಸಿ ಡಿ.ಕೆ.ಶಿವಕುಮಾರ್, ಆ ಇಬ್ಬರನ್ನು ಸದಾಶಿವನಗರ ಪೊಲೀಸರಿಗೆ ಹಿಡಿದುಕೊಟ್ಟಿದ್ದರು.<br /> <br /> ನಂತರ ಆ ವರದಿಗಾರರು, ‘ಡಿ.ಕೆ.ಶಿವಕುಮಾರ್ ಮತ್ತು ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು’ ಎಂದು ಆರೋಪಿಸಿ ಮಾ.11ರಂದು ಪ್ರತಿದೂರು ನೀಡಿದ್ದರು. ಅಲ್ಲದೇ, ‘ಡಿ.ಕೆ.ಶಿವಕುಮಾರ್ ಮತ್ತು ಬೆಂಬಲಿಗರು ತಮ್ಮ ಮಾನಭಂಗಕ್ಕೆ ಯತ್ನಿಸಿದ್ದರು’ ಎಂದು ಶ್ವೇತಾಪ್ರಭು ದೂರಿನಲ್ಲಿ ಆರೋಪಿಸಿದ್ದರು.<br /> <br /> ‘ಕಾನೂನು ಮತ್ತು ಸುವ್ಯವಸ್ಥೆ (ಪೂರ್ವ) ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಅವರು ಪ್ರಕರಣದ ಪೂರ್ವಭಾವಿ ವಿಚಾರಣೆ ನಡೆಸಿ ವರದಿ ನೀಡಿದ್ದರು. ಆ ವರದಿಯ ಬಗ್ಗೆ ನಗರ ಪೊಲೀಸ್ ಕಮಿಷನರ್ ಅವರು ಕಾನೂನು ತಜ್ಞರ ಅಭಿಪ್ರಾಯ ಪಡೆದು, ಘಟನೆ ಸಂಬಂಧ ಅಪರಿಚಿತರ ವಿರುದ್ಧ ಹಲ್ಲೆ, ಮಾನಭಂಗ, ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದರು. ಆ ಆದೇಶದನ್ವಯ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ‘ಇಡೀ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆಯಬೇಕಿದ್ದರಿಂದ ಪ್ರಕರಣ ದಾಖಲಿಸುವುದು ವಿಳಂಬವಾಯಿತು’ ಎಂದು ಪೊಲೀಸರು ಎಫ್ಐಆರ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>