<p><strong>ಸಿಂದಗಿ: </strong>ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಆರಂಭಿಸಿರುವ ಮಹಾಸಂಪರ್ಕ ಅಭಿಯಾನ ಕಾರ್ಯಾಗಾರ ಕಾರ್ಯಕರ್ತರಿಗೆ ಅತ್ಯಂತ ಮಹತ್ವಪೂರ್ಣದ್ದು ಎಂದು ಬಿಜೆಪಿಯ ಮಹಾಸಂಪರ್ಕ ಅಭಿಯಾನ ರಾಜ್ಯ ಸಹ–ಪ್ರಮುಖ, ಬೆಳಗಾವಿ ಮಾಜಿ ಶಾಸಕ ಅಭಯ ಪಾಟೀಲ ಹೇಳಿದರು.<br /> <br /> ನಗರದ ಜ್ಯೋತಿ ಕಲ್ಯಾಣಮಂಟಪದಲ್ಲಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಮಹಾಸಂಪರ್ಕ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಿಂದಗಿ ಮತಕ್ಷೇತ್ರಕ್ಕೆ ನಿಗದಿಪಡಿಸಿದ್ದ 48 ಸಾವಿರ ಸದಸ್ಯತ್ವ ಗುರಿ ತಲುಪಿರುವುದು ಸಂತಸದ ವಿಷಯ. ಈ 48 ಸಾವಿರ ಸದಸ್ಯರ ಮನೆ, ಮನೆಗೆ ಹೋಗಿ ಪಾರ್ಮ್ ಗಳನ್ನು ಭರ್ತಿ ಮಾಡಿಕೊಂಡು ಬಂದಾಗಲೇ ಸದಸ್ಯತ್ವ ಕಾರ್ಯ ಪೂರ್ಣಗೊಳ್ಳುವುದು ಎಂದರು.<br /> <br /> ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಮೇಶ ಭೂಸನೂರ ಪ್ರಸ್ತುತ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಲಿದ್ದು, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮುಗಿದ ಮೇಲೆ ಅಭಿಯಾನ ಕಾರ್ಯಾಗಾರ ಆಯೋಜನೆ ಮಾಡಬೇಕಿತ್ತು ಎಂದು ತಿಳಿಸಿದರು.<br /> <br /> ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿದ ಶಾಸಕರು ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತ್ಯಂತ ಚುರುಕಾಗಿತ್ತು. ಈಗ ಅಷ್ಟೇ ನಿಧಾನವಾಗಿದೆ ಎಂದರು. ಬಿಜೆಪಿ ಪ್ರಮುಖರಾದ ಮಲ್ಲಿಕಾರ್ಜುನ ಜೋಗೂರ, ಮಹಿಬೂಬಸಾಬ ನದಾಫ, ಬಸವರಾಜ ಸಜ್ಜನ ಅವರನ್ನು ಅಭಯ ಪಾಟೀಲ ಗೌರವಿಸಿದರು.<br /> <br /> ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ ಕಿರಣಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖಂಡರಾದ ಅಶೋಕ ಅಲ್ಲಾಪೂರ, ಎಂ.ಎಸ್.ಮಠ, ಶ್ರೀಮಂತ ದುದ್ದಗಿ, ರಾಜಶೇಖರ ಪೂಜಾರ, ನಾಗೇಂದ್ರ ಮಾಯಾವಂಶಿ, ಚಿದಾನಂದ ಚಲವಾದಿ ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನಕಾರ್ಯದರ್ಶಿ ಸಿದ್ದು ಬುಳ್ಳಾ ಸ್ವಾಗತಿಸಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ: </strong>ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಆರಂಭಿಸಿರುವ ಮಹಾಸಂಪರ್ಕ ಅಭಿಯಾನ ಕಾರ್ಯಾಗಾರ ಕಾರ್ಯಕರ್ತರಿಗೆ ಅತ್ಯಂತ ಮಹತ್ವಪೂರ್ಣದ್ದು ಎಂದು ಬಿಜೆಪಿಯ ಮಹಾಸಂಪರ್ಕ ಅಭಿಯಾನ ರಾಜ್ಯ ಸಹ–ಪ್ರಮುಖ, ಬೆಳಗಾವಿ ಮಾಜಿ ಶಾಸಕ ಅಭಯ ಪಾಟೀಲ ಹೇಳಿದರು.<br /> <br /> ನಗರದ ಜ್ಯೋತಿ ಕಲ್ಯಾಣಮಂಟಪದಲ್ಲಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಮಹಾಸಂಪರ್ಕ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಿಂದಗಿ ಮತಕ್ಷೇತ್ರಕ್ಕೆ ನಿಗದಿಪಡಿಸಿದ್ದ 48 ಸಾವಿರ ಸದಸ್ಯತ್ವ ಗುರಿ ತಲುಪಿರುವುದು ಸಂತಸದ ವಿಷಯ. ಈ 48 ಸಾವಿರ ಸದಸ್ಯರ ಮನೆ, ಮನೆಗೆ ಹೋಗಿ ಪಾರ್ಮ್ ಗಳನ್ನು ಭರ್ತಿ ಮಾಡಿಕೊಂಡು ಬಂದಾಗಲೇ ಸದಸ್ಯತ್ವ ಕಾರ್ಯ ಪೂರ್ಣಗೊಳ್ಳುವುದು ಎಂದರು.<br /> <br /> ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಮೇಶ ಭೂಸನೂರ ಪ್ರಸ್ತುತ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಲಿದ್ದು, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮುಗಿದ ಮೇಲೆ ಅಭಿಯಾನ ಕಾರ್ಯಾಗಾರ ಆಯೋಜನೆ ಮಾಡಬೇಕಿತ್ತು ಎಂದು ತಿಳಿಸಿದರು.<br /> <br /> ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿದ ಶಾಸಕರು ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತ್ಯಂತ ಚುರುಕಾಗಿತ್ತು. ಈಗ ಅಷ್ಟೇ ನಿಧಾನವಾಗಿದೆ ಎಂದರು. ಬಿಜೆಪಿ ಪ್ರಮುಖರಾದ ಮಲ್ಲಿಕಾರ್ಜುನ ಜೋಗೂರ, ಮಹಿಬೂಬಸಾಬ ನದಾಫ, ಬಸವರಾಜ ಸಜ್ಜನ ಅವರನ್ನು ಅಭಯ ಪಾಟೀಲ ಗೌರವಿಸಿದರು.<br /> <br /> ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ ಕಿರಣಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖಂಡರಾದ ಅಶೋಕ ಅಲ್ಲಾಪೂರ, ಎಂ.ಎಸ್.ಮಠ, ಶ್ರೀಮಂತ ದುದ್ದಗಿ, ರಾಜಶೇಖರ ಪೂಜಾರ, ನಾಗೇಂದ್ರ ಮಾಯಾವಂಶಿ, ಚಿದಾನಂದ ಚಲವಾದಿ ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನಕಾರ್ಯದರ್ಶಿ ಸಿದ್ದು ಬುಳ್ಳಾ ಸ್ವಾಗತಿಸಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>