<p>ಭಾಲ್ಕಿ: ರಾಷ್ಟ್ರದ ಏಕತೆಗೆ ಹೋರಾಟ ಮಾಡಿದ ಸರ್ದಾರ್ ವಲ್ಲಭಭಾಯಿ ಪಟೇಲರ ಆದರ್ಶ ಎಲ್ಲರಿಗೂ ಮಾದರಿಯಾಗಬೇಕು. ಎಲ್ಲೆಡೆ ರಾಷ್ಟ್ರಭಕ್ತಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. <br /> <br /> ಭಾಲ್ಕಿಯ ಸರ್ದಾರ್ ಪಟೇಲರ ವೃತ್ತದಲ್ಲಿ ಭಾನುವಾರ ನಡೆದ ವಲ್ಲಭಭಾಯಿ ಪಟೇಲರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪುತ್ಥಳಿಯ ಅಡಿಪಾಯಕ್ಕೆ ಚಾಲನೆ ನೀಡಿ ಮಾತನಾಡಿದರು.<br /> <br /> ಸಾನ್ನಿಧ್ಯ ವಹಿಸಿದ್ದ ಹುಲಸೂರು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ಯುವಕರು ತತ್ವಸಿದ್ಧಾಂತಗಳಿಗೆ ಬದ್ಧತೆ ಇಟ್ಟು ಶ್ರಮಿಸಬೇಕು ಎಂದರು.<br /> <br /> ಲಾಡಗೇರಿಯ ಗಂಗಾಧರ ಸ್ವಾಮೀಜಿ, ಶಿವಣಿಯ ಹಾವಗಿಲಿಂಗ ಸ್ವಾಮೀಜಿ, ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಶಿವಯ್ಯ ಸ್ವಾಮಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸೂರಜ್ಸಿಂಗ್ ಠಾಕೂರ, ಚಂದ್ರಕಾಂತ ಬಿರಾದಾರ ಮಾತನಾಡಿದರು.<br /> <br /> ಸರ್ದಾರ ಪಟೇಲ್ ಅಧ್ಯಯನ ಕೇಂದ್ರ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇಂದ್ರದ ಸಂಚಾಲಕ ಓಂಪ್ರಕಾಶ ರೊಟ್ಟೆ ಸ್ವಾಗತಿಸಿದರು. ರಾಜಕುಮಾರ ಹೆಬ್ಬಾಳೆ ನಿರೂಪಿಸಿದರು. ಶಿವಪುತ್ರ ಧಾಬಶೆಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ರಾಷ್ಟ್ರದ ಏಕತೆಗೆ ಹೋರಾಟ ಮಾಡಿದ ಸರ್ದಾರ್ ವಲ್ಲಭಭಾಯಿ ಪಟೇಲರ ಆದರ್ಶ ಎಲ್ಲರಿಗೂ ಮಾದರಿಯಾಗಬೇಕು. ಎಲ್ಲೆಡೆ ರಾಷ್ಟ್ರಭಕ್ತಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. <br /> <br /> ಭಾಲ್ಕಿಯ ಸರ್ದಾರ್ ಪಟೇಲರ ವೃತ್ತದಲ್ಲಿ ಭಾನುವಾರ ನಡೆದ ವಲ್ಲಭಭಾಯಿ ಪಟೇಲರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪುತ್ಥಳಿಯ ಅಡಿಪಾಯಕ್ಕೆ ಚಾಲನೆ ನೀಡಿ ಮಾತನಾಡಿದರು.<br /> <br /> ಸಾನ್ನಿಧ್ಯ ವಹಿಸಿದ್ದ ಹುಲಸೂರು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ಯುವಕರು ತತ್ವಸಿದ್ಧಾಂತಗಳಿಗೆ ಬದ್ಧತೆ ಇಟ್ಟು ಶ್ರಮಿಸಬೇಕು ಎಂದರು.<br /> <br /> ಲಾಡಗೇರಿಯ ಗಂಗಾಧರ ಸ್ವಾಮೀಜಿ, ಶಿವಣಿಯ ಹಾವಗಿಲಿಂಗ ಸ್ವಾಮೀಜಿ, ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಶಿವಯ್ಯ ಸ್ವಾಮಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸೂರಜ್ಸಿಂಗ್ ಠಾಕೂರ, ಚಂದ್ರಕಾಂತ ಬಿರಾದಾರ ಮಾತನಾಡಿದರು.<br /> <br /> ಸರ್ದಾರ ಪಟೇಲ್ ಅಧ್ಯಯನ ಕೇಂದ್ರ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇಂದ್ರದ ಸಂಚಾಲಕ ಓಂಪ್ರಕಾಶ ರೊಟ್ಟೆ ಸ್ವಾಗತಿಸಿದರು. ರಾಜಕುಮಾರ ಹೆಬ್ಬಾಳೆ ನಿರೂಪಿಸಿದರು. ಶಿವಪುತ್ರ ಧಾಬಶೆಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>