<p><strong>ಬೆಂಗಳೂರು:</strong> ‘ಗದ್ಯ ಹಾಗೂ ಪದ್ಯದ ಲಯ ವಿಭಿನ್ನವಾದುದು. ಗದ್ಯದ ಲಯ ನಡಿಗೆಯದ್ದು. ಪದ್ಯದ ಲಯ ನರ್ತನದ್ದು. ಪದ್ಯ ಮಯೂರ ನೃತ್ಯ ಇದ್ದಂತೆ’ ಎಂದು ಹಿರಿಯ ಲೇಖಕಿ ಮಾಲತಿ ಪಟ್ಟಣಶೆಟ್ಟಿ ಬಣ್ಣಿಸಿದರು.<br /> <br /> ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಆಶ್ರಯದಲ್ಲಿ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ 11ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನದಲ್ಲಿ ‘ಅನುರಣನ–ಮರೆಯಲಾಗದ ಮಹನೀಯರು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಸುಗಮ ಸಂಗೀತ ವಿಶಿಷ್ಟವಾದುದು. ಸುಗಮ ಸಂಗೀತದ ಮೂಲಕ ಉತ್ತಮ ಕವಿತೆಗಳು ಜನರನ್ನು ತಲುಪಿದವು’ ಎಂದು ಅವರು ಹೇಳಿದರು.<br /> ಹಿರಿಯ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಮಾತನಾಡಿ, ‘ಜಿ.ಎಸ್.ಶಿವರುದ್ರಪ್ಪ ಅವರ ‘ಯಾವುದೀ ಪ್ರವಾಹ’ ಗೀತೆಯು ಸಮಾಜದಲ್ಲಿ ಹೊಸ ವೈಚಾರಿಕ ಕ್ರಾಂತಿಗೆ ಕಾರಣವಾಯಿತು’ ಎಂದರು.<br /> <br /> ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ಮತ್ತು ಮಾಲತಿ ಶರ್ಮ ಕಾರ್ಯಕ್ರಮ ನಿರೂಪಿಸಿದರು.ಸುಗಮ ಸಂಗೀತ ಕಾವ್ಯ ಗಾಯನ, ಕಾವ್ಯ<br /> ಪರಂಪರೆ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ ಮಹನೀಯರನ್ನು ಕಾರ್ಯಕ್ರಮದಲ್ಲಿ ನೆನಪಿಸಿಕೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗದ್ಯ ಹಾಗೂ ಪದ್ಯದ ಲಯ ವಿಭಿನ್ನವಾದುದು. ಗದ್ಯದ ಲಯ ನಡಿಗೆಯದ್ದು. ಪದ್ಯದ ಲಯ ನರ್ತನದ್ದು. ಪದ್ಯ ಮಯೂರ ನೃತ್ಯ ಇದ್ದಂತೆ’ ಎಂದು ಹಿರಿಯ ಲೇಖಕಿ ಮಾಲತಿ ಪಟ್ಟಣಶೆಟ್ಟಿ ಬಣ್ಣಿಸಿದರು.<br /> <br /> ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಆಶ್ರಯದಲ್ಲಿ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ 11ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನದಲ್ಲಿ ‘ಅನುರಣನ–ಮರೆಯಲಾಗದ ಮಹನೀಯರು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಸುಗಮ ಸಂಗೀತ ವಿಶಿಷ್ಟವಾದುದು. ಸುಗಮ ಸಂಗೀತದ ಮೂಲಕ ಉತ್ತಮ ಕವಿತೆಗಳು ಜನರನ್ನು ತಲುಪಿದವು’ ಎಂದು ಅವರು ಹೇಳಿದರು.<br /> ಹಿರಿಯ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಮಾತನಾಡಿ, ‘ಜಿ.ಎಸ್.ಶಿವರುದ್ರಪ್ಪ ಅವರ ‘ಯಾವುದೀ ಪ್ರವಾಹ’ ಗೀತೆಯು ಸಮಾಜದಲ್ಲಿ ಹೊಸ ವೈಚಾರಿಕ ಕ್ರಾಂತಿಗೆ ಕಾರಣವಾಯಿತು’ ಎಂದರು.<br /> <br /> ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ಮತ್ತು ಮಾಲತಿ ಶರ್ಮ ಕಾರ್ಯಕ್ರಮ ನಿರೂಪಿಸಿದರು.ಸುಗಮ ಸಂಗೀತ ಕಾವ್ಯ ಗಾಯನ, ಕಾವ್ಯ<br /> ಪರಂಪರೆ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ ಮಹನೀಯರನ್ನು ಕಾರ್ಯಕ್ರಮದಲ್ಲಿ ನೆನಪಿಸಿಕೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>