<p><strong>ಬಸವಕಲ್ಯಾಣ: </strong>ಸತ್ಯ ಮತ್ತು ಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಶ್ರೀನಿವಾಸಮೂರ್ತಿ ಹೇಳಿದರು.<br /> <br /> ಇಲ್ಲಿನ ಬಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.<br /> ಗುರು, ಹಿರಿಯರಿಗೆ ಗೌರವ ನೀಡಬೇಕು. ಸತತವಾಗಿ ಅಧ್ಯಯನ ನಡೆಸಿ ಜ್ಞಾನ ಸಂಪಾದಿಸಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಸವರಾಜ ಪಾಟೀಲ ಅಟ್ಟೂರ್ ಮಾತನಾಡಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಈ ಪ್ರದೇಶದ ಯುವಕರು ಉತ್ತಮ ವಿದ್ಯಾಭ್ಯಾಸ ಪಡೆದು ಮುನ್ನಡೆ ಸಾಧಿಸಬೇಕು ಎಂದು ಹೇಳಿದರು.<br /> <br /> ಡಾ.ಅನಂತರಾಜು ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ದಿಲೀಪಕುಮಾರ ತಾಳಂಪಳ್ಳಿ, ಸಂಸ್ಥೆ ಖಜಾಂಚಿ ಲಿಂಗರಾಜ ಪಾಟೀಲ ಅಟ್ಟೂರ್, ಸಂತೋಷ ತಾಳಂಪಳ್ಳಿ, ವೀರಶೆಟ್ಟಿ ಖೇಣಿ, ವಿಮಲಾಬಾಯಿ ಬಿರಾದಾರ ಇದ್ದರು.<br /> <br /> ಪ್ರಾಚಾರ್ಯ ಜಿ.ಎಂ.ಪಾಟೀಲ ಸ್ವಾಗತಿಸಿದರು. ಸುವರ್ಣಲತಾ ಹಿರೇಮಠ ನಿರೂಪಿಸಿದರು. ವಿನೋದಾರೆಡ್ಡಿ ವಂದಿಸಿದರು. ಅರುಣಕುಮಾರ ಯಲಾಲ್ ಮತ್ತು ಸಂತೋಷ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ಸತ್ಯ ಮತ್ತು ಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಶ್ರೀನಿವಾಸಮೂರ್ತಿ ಹೇಳಿದರು.<br /> <br /> ಇಲ್ಲಿನ ಬಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.<br /> ಗುರು, ಹಿರಿಯರಿಗೆ ಗೌರವ ನೀಡಬೇಕು. ಸತತವಾಗಿ ಅಧ್ಯಯನ ನಡೆಸಿ ಜ್ಞಾನ ಸಂಪಾದಿಸಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಸವರಾಜ ಪಾಟೀಲ ಅಟ್ಟೂರ್ ಮಾತನಾಡಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಈ ಪ್ರದೇಶದ ಯುವಕರು ಉತ್ತಮ ವಿದ್ಯಾಭ್ಯಾಸ ಪಡೆದು ಮುನ್ನಡೆ ಸಾಧಿಸಬೇಕು ಎಂದು ಹೇಳಿದರು.<br /> <br /> ಡಾ.ಅನಂತರಾಜು ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ದಿಲೀಪಕುಮಾರ ತಾಳಂಪಳ್ಳಿ, ಸಂಸ್ಥೆ ಖಜಾಂಚಿ ಲಿಂಗರಾಜ ಪಾಟೀಲ ಅಟ್ಟೂರ್, ಸಂತೋಷ ತಾಳಂಪಳ್ಳಿ, ವೀರಶೆಟ್ಟಿ ಖೇಣಿ, ವಿಮಲಾಬಾಯಿ ಬಿರಾದಾರ ಇದ್ದರು.<br /> <br /> ಪ್ರಾಚಾರ್ಯ ಜಿ.ಎಂ.ಪಾಟೀಲ ಸ್ವಾಗತಿಸಿದರು. ಸುವರ್ಣಲತಾ ಹಿರೇಮಠ ನಿರೂಪಿಸಿದರು. ವಿನೋದಾರೆಡ್ಡಿ ವಂದಿಸಿದರು. ಅರುಣಕುಮಾರ ಯಲಾಲ್ ಮತ್ತು ಸಂತೋಷ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>