<p>ಬೆಂಗಳೂರು: ‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಡಿಜಿಟಲ್ನಂತಹ ತಂತ್ರಜ್ಞಾನದ ನೆರವು ಪಡೆದು ಶಾಲಾ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಬೇಕು’ ಎಂದು ಯುನೆಸ್ಕೊದ ಕಲಿಕೆ ಹಾಗೂ ಸಾಕ್ಷರತೆ ವಿಭಾಗದ ಮುಖ್ಯಸ್ಥ ಪ್ರೊ.ಡೇನಿಯಲ್ ವ್ಯಾಗ್ನರ್ ಸಲಹೆ ನೀಡಿದರು.<br /> <br /> ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ‘2015ರ ಬಳಿಕ ಶಿಕ್ಷಣ ಗುಣಮಟ್ಟದ ಪುನರ್ಚಿಂತನೆ’ ಕುರಿತು ಅವರು ಉಪನ್ಯಾಸ ನೀಡಿದರು.<br /> <br /> ‘ಭಾರತದಂತಹ ದೇಶಗಳಲ್ಲಿ ಶಿಕ್ಷಣದಲ್ಲಿ ಡಿಜಿಟಲ್ ತಂತ್ರಜ್ಞಾನ ಬಳಸಿಕೊಳ್ಳಲು ಅಪೂರ್ವ ಅವಕಾಶ ಇದೆ. ತಂತ್ರಜ್ಞಾನದ ತೀವ್ರ ಪ್ರಗತಿಯ ಈ ಕಾಲದಲ್ಲಿ ಸಾಂಪ್ರದಾಯಿಕ ಶಿಕ್ಷಣ ಪದ್ಧತಿಯನ್ನೇ ಅವಲಂಬಿಸುವುದು ಸೂಕ್ತ ಅಲ್ಲ. ಅರ್ಥಶಾಸ್ತ್ರದಂತಹ ಪಠ್ಯಕ್ರಮಗಳನ್ನು ಶಿಕ್ಷಕರ ನೆರವಿಲ್ಲದೆ ಪಾಠ ಮಾಡಬಹುದು’ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ‘ಸಮಾಜದ ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ. ಈ ವಿಷಯದಲ್ಲಿ ತಾರತಮ್ಯ ನಡೆಸಬಾರದು. ಸಾರ್ವಜನಿಕರಲ್ಲಿ ಶಿಕ್ಷಣದ ಅವಶ್ಯಕತೆ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ ಶಾಲಾ ಚಟುವಟಿಕೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು’ ಎಂದರು.<br /> <br /> ‘ಬಹುತೇಕ ಸರ್ಕಾರಗಳು ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುತ್ತಿವೆ. ಈ ಅನುದಾನ ಸದ್ಭಳಕೆಯಾಗುವಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಡಿಜಿಟಲ್ನಂತಹ ತಂತ್ರಜ್ಞಾನದ ನೆರವು ಪಡೆದು ಶಾಲಾ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪಾಠ ಮಾಡಬೇಕು’ ಎಂದು ಯುನೆಸ್ಕೊದ ಕಲಿಕೆ ಹಾಗೂ ಸಾಕ್ಷರತೆ ವಿಭಾಗದ ಮುಖ್ಯಸ್ಥ ಪ್ರೊ.ಡೇನಿಯಲ್ ವ್ಯಾಗ್ನರ್ ಸಲಹೆ ನೀಡಿದರು.<br /> <br /> ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ‘2015ರ ಬಳಿಕ ಶಿಕ್ಷಣ ಗುಣಮಟ್ಟದ ಪುನರ್ಚಿಂತನೆ’ ಕುರಿತು ಅವರು ಉಪನ್ಯಾಸ ನೀಡಿದರು.<br /> <br /> ‘ಭಾರತದಂತಹ ದೇಶಗಳಲ್ಲಿ ಶಿಕ್ಷಣದಲ್ಲಿ ಡಿಜಿಟಲ್ ತಂತ್ರಜ್ಞಾನ ಬಳಸಿಕೊಳ್ಳಲು ಅಪೂರ್ವ ಅವಕಾಶ ಇದೆ. ತಂತ್ರಜ್ಞಾನದ ತೀವ್ರ ಪ್ರಗತಿಯ ಈ ಕಾಲದಲ್ಲಿ ಸಾಂಪ್ರದಾಯಿಕ ಶಿಕ್ಷಣ ಪದ್ಧತಿಯನ್ನೇ ಅವಲಂಬಿಸುವುದು ಸೂಕ್ತ ಅಲ್ಲ. ಅರ್ಥಶಾಸ್ತ್ರದಂತಹ ಪಠ್ಯಕ್ರಮಗಳನ್ನು ಶಿಕ್ಷಕರ ನೆರವಿಲ್ಲದೆ ಪಾಠ ಮಾಡಬಹುದು’ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ‘ಸಮಾಜದ ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ. ಈ ವಿಷಯದಲ್ಲಿ ತಾರತಮ್ಯ ನಡೆಸಬಾರದು. ಸಾರ್ವಜನಿಕರಲ್ಲಿ ಶಿಕ್ಷಣದ ಅವಶ್ಯಕತೆ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ ಶಾಲಾ ಚಟುವಟಿಕೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು’ ಎಂದರು.<br /> <br /> ‘ಬಹುತೇಕ ಸರ್ಕಾರಗಳು ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುತ್ತಿವೆ. ಈ ಅನುದಾನ ಸದ್ಭಳಕೆಯಾಗುವಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>