<p><strong>ಬೆಂಗಳೂರು: </strong>ಉದ್ಯಮಿಗಳು ಒಂದು ಪ್ರದೇಶದಲ್ಲಿ ಬಂಡವಾಳ ತೊಡಗಿಸುವಾಗ ಮುಖ್ಯವಾಗಿ ಗುಣಮಟ್ಟ, ವೆಚ್ಚ ಮತ್ತು ಸರಬರಾಜು ವ್ಯವಸ್ಥೆ ಸೌಲಭ್ಯಗಳು ಇವೆಯೇ ಎಂದು ಪರಿಶೀಲಿಸುತ್ತಾರೆ. ಆದರೆ, ಈ ಭಾಗದಲ್ಲಿ ಕಂಡು ಬರುವ ಮುಖ್ಯ ಸಮಸ್ಯೆ ಎಂದರೆ, ವಾಣಿ ಜ್ಯೋದ್ಯಮ ಚಟುವಟಿಕೆ ಸುಲಭ ಸಾಧ್ಯ ವಾಗದೇ ಇರುವುದು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕೊರತೆ ಇದೆ ಎಂದು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿ.ನ ಅಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೇಳಿದರು.<br /> <br /> ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ನಗರದಲ್ಲಿ ಆಯೋಜಿಸಿದ್ದ ‘ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮಾವೇಶ-; ವಿಷನ್ ೨೦೨೦’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನಕಾರಾತ್ಮಕ ಅಂಶಗಳ ನಡುವೆಯೂ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ಪ್ರತಿಭಾವಂತರ ಲಭ್ಯತೆ, ಉತ್ತಮ ತರಬೇತಿ ಸಂಸ್ಥೆಗಳು, ಉದ್ಯಮ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ದೊಡ್ಡದಾದ ಮಾರುಕಟ್ಟೆ ಸಕಾರಾತ್ಮಕ ಅಂಶಗಳಾಗಿವೆ ಎಂದರು. ‘ಸಿಐಐ’ ಕರ್ನಾಟಕ ಘಟಕ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಉದ್ಯಮಿಗಳು ಒಂದು ಪ್ರದೇಶದಲ್ಲಿ ಬಂಡವಾಳ ತೊಡಗಿಸುವಾಗ ಮುಖ್ಯವಾಗಿ ಗುಣಮಟ್ಟ, ವೆಚ್ಚ ಮತ್ತು ಸರಬರಾಜು ವ್ಯವಸ್ಥೆ ಸೌಲಭ್ಯಗಳು ಇವೆಯೇ ಎಂದು ಪರಿಶೀಲಿಸುತ್ತಾರೆ. ಆದರೆ, ಈ ಭಾಗದಲ್ಲಿ ಕಂಡು ಬರುವ ಮುಖ್ಯ ಸಮಸ್ಯೆ ಎಂದರೆ, ವಾಣಿ ಜ್ಯೋದ್ಯಮ ಚಟುವಟಿಕೆ ಸುಲಭ ಸಾಧ್ಯ ವಾಗದೇ ಇರುವುದು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕೊರತೆ ಇದೆ ಎಂದು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿ.ನ ಅಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೇಳಿದರು.<br /> <br /> ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ನಗರದಲ್ಲಿ ಆಯೋಜಿಸಿದ್ದ ‘ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮಾವೇಶ-; ವಿಷನ್ ೨೦೨೦’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನಕಾರಾತ್ಮಕ ಅಂಶಗಳ ನಡುವೆಯೂ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ಪ್ರತಿಭಾವಂತರ ಲಭ್ಯತೆ, ಉತ್ತಮ ತರಬೇತಿ ಸಂಸ್ಥೆಗಳು, ಉದ್ಯಮ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ದೊಡ್ಡದಾದ ಮಾರುಕಟ್ಟೆ ಸಕಾರಾತ್ಮಕ ಅಂಶಗಳಾಗಿವೆ ಎಂದರು. ‘ಸಿಐಐ’ ಕರ್ನಾಟಕ ಘಟಕ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>