<p>ಮಾನ್ವಿ: ಜಾತಿ ಕಟ್ಟಳೆಯಿಲ್ಲದೆ ಸಂಗೀತ ಶಿಕ್ಷಣ ನೀಡುವ ಮೂಲಕ ಅಪಾರ ಸಂಖ್ಯೆ ಅಂಧರ ಬಾಳಿಗೆ ಬೆಳಕು ಮೂಡಿಸಿದ ಗದುಗಿನ ಪಂಡಿತ ಪುಟ್ಟರಾಜ ಗವಾಯಿಗಳ ಸೇವೆ ಅನನ್ಯವಾದದ್ದು ಎಂದು ಉಪನ್ಯಾಸಕ ರೇವಣಸಿದ್ದಯ್ಯ ಹಿರೇಮಠ ಹೇಳಿದರು.<br /> <br /> ಪಟ್ಟಣದ ವೆಂಕಟೇಶ್ವರ ಪ್ರೌಢಶಾಲೆಯಲ್ಲಿ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪಂಡಿತ ಪುಟ್ಟರಾಜ ಗವಾಯಿಗಳ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ‘ಪುಟ್ಟರಾಜ ಗವಾಯಿಗಳ ಬದುಕು ಮತ್ತು ಸಾಧನೆ’ ಕುರಿತು ಉಪನ್ಯಾಸ ನೀಡಿದರು.<br /> <br /> ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಪಂಡಿತ ಪುಟ್ಟರಾಜ ಗವಾಯಿಗಳ ಬದುಕು ಮತ್ತು ಸಾಧನೆ ಸದಾ ಸ್ಮರಣೀಯ ಹಾಗೂ ಮಾದರಿಯಾಗಿದೆ ಎಂದು ಹೇಳಿದರು.<br /> <br /> ಸಂಗೀತ ಕಲಾವಿದ ಅಮೃತಗೌಡ ಶಾಡಲಗೇರಿ ಅವರಿಗೆ ಸಮಿತಿಯ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸರ್ಕಾರದಿಂದ ಈಚೆಗೆ ರಾಜ್ಯ ಲಲಿತ ಕಲಾ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುವ ವಾಜೀದ್ ಸಾಜಿದ್ ಹಾಗೂ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಅಂಬಯ್ಯ ನುಲಿ ಅವರನ್ನು ಸನ್ಮಾನಿಸಲಾಯಿತು.<br /> <br /> ಎಸ್ಎಂವಿಒ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಮಹಾಂತೇಶ ಓಲೇಕಾರ, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಈ.ನರಸಿಂಹ, ಶಾಲೆಯ ಮುಖ್ಯಶಿಕ್ಷಕ ಶಂಕ್ರಪ್ಪ, ಸಂಗೀತ ಕಲಾವಿದ ಡಿ. ವೆಂಕೋಬ ಹಾಜರಿದ್ದರು.<br /> <br /> ಸಮಿತಿ ರಾಜ್ಯ ಘಟಕದ ಸದಸ್ಯ ರಮೇಶಬಾಬು ಯಾಳಗಿ ಪ್ರಾಸ್ತಾವಿಕ ಮಾತನಾಡಿದರು. ಮೂಕಪ್ಪ ಕಟ್ಟಿಮನಿ ನಿರೂಪಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್.ಚೆನ್ನಬಸವರಾಜ ಸ್ವಾಗತಿಸಿದರು. ಖಜಾಂಚಿ ಮಂಜುನಾಥ ಕಮತರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ಜಾತಿ ಕಟ್ಟಳೆಯಿಲ್ಲದೆ ಸಂಗೀತ ಶಿಕ್ಷಣ ನೀಡುವ ಮೂಲಕ ಅಪಾರ ಸಂಖ್ಯೆ ಅಂಧರ ಬಾಳಿಗೆ ಬೆಳಕು ಮೂಡಿಸಿದ ಗದುಗಿನ ಪಂಡಿತ ಪುಟ್ಟರಾಜ ಗವಾಯಿಗಳ ಸೇವೆ ಅನನ್ಯವಾದದ್ದು ಎಂದು ಉಪನ್ಯಾಸಕ ರೇವಣಸಿದ್ದಯ್ಯ ಹಿರೇಮಠ ಹೇಳಿದರು.<br /> <br /> ಪಟ್ಟಣದ ವೆಂಕಟೇಶ್ವರ ಪ್ರೌಢಶಾಲೆಯಲ್ಲಿ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪಂಡಿತ ಪುಟ್ಟರಾಜ ಗವಾಯಿಗಳ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ‘ಪುಟ್ಟರಾಜ ಗವಾಯಿಗಳ ಬದುಕು ಮತ್ತು ಸಾಧನೆ’ ಕುರಿತು ಉಪನ್ಯಾಸ ನೀಡಿದರು.<br /> <br /> ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಪಂಡಿತ ಪುಟ್ಟರಾಜ ಗವಾಯಿಗಳ ಬದುಕು ಮತ್ತು ಸಾಧನೆ ಸದಾ ಸ್ಮರಣೀಯ ಹಾಗೂ ಮಾದರಿಯಾಗಿದೆ ಎಂದು ಹೇಳಿದರು.<br /> <br /> ಸಂಗೀತ ಕಲಾವಿದ ಅಮೃತಗೌಡ ಶಾಡಲಗೇರಿ ಅವರಿಗೆ ಸಮಿತಿಯ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸರ್ಕಾರದಿಂದ ಈಚೆಗೆ ರಾಜ್ಯ ಲಲಿತ ಕಲಾ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುವ ವಾಜೀದ್ ಸಾಜಿದ್ ಹಾಗೂ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಅಂಬಯ್ಯ ನುಲಿ ಅವರನ್ನು ಸನ್ಮಾನಿಸಲಾಯಿತು.<br /> <br /> ಎಸ್ಎಂವಿಒ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಮಹಾಂತೇಶ ಓಲೇಕಾರ, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಈ.ನರಸಿಂಹ, ಶಾಲೆಯ ಮುಖ್ಯಶಿಕ್ಷಕ ಶಂಕ್ರಪ್ಪ, ಸಂಗೀತ ಕಲಾವಿದ ಡಿ. ವೆಂಕೋಬ ಹಾಜರಿದ್ದರು.<br /> <br /> ಸಮಿತಿ ರಾಜ್ಯ ಘಟಕದ ಸದಸ್ಯ ರಮೇಶಬಾಬು ಯಾಳಗಿ ಪ್ರಾಸ್ತಾವಿಕ ಮಾತನಾಡಿದರು. ಮೂಕಪ್ಪ ಕಟ್ಟಿಮನಿ ನಿರೂಪಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್.ಚೆನ್ನಬಸವರಾಜ ಸ್ವಾಗತಿಸಿದರು. ಖಜಾಂಚಿ ಮಂಜುನಾಥ ಕಮತರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>