<p><strong>ನವದೆಹಲಿ (ಪಿಟಿಐ):</strong> ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿರುವ ಬಿಜೆಪಿ, ‘ಪ್ರಧಾನಿಯಾಗಿ ಮೋದಿ’ ಘೋಷ ವಾಕ್ಯದೊಂದಿಗೆ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿದೆ.ಮಂಗಳವಾರ ನಡೆದ ಬಿಜೆಪಿ ಆಡಳಿತದಲ್ಲಿರುವ ಐದು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮತ್ತು ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.<br /> <br /> <strong>ಒಂದು ಓಟು, ಒಂದು ನೋಟು:</strong> ಚುನಾವಣಾ ಪ್ರಚಾರಕಾರ್ಯಕ್ಕೆ ‘ಒಂದು ಓಟು, ಒಂದು ನೋಟು’ ಎಂಬ ಮತ್ತೊಂದು ಘೋಷ ವಾಕ್ಯವನ್ನೂ ಬಿಜೆಪಿ ಸಿದ್ಧಪಡಿಸಿದೆ. ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಕನಿಷ್ಠ ₨10ರಿಂದ ಗರಿಷ್ಠ ₨1,000 ವರೆಗೆ ದೇಣಿಗೆಯನ್ನು ಶ್ರೀಸಾಮಾನ್ಯರಿಂದ ಸಂಗ್ರಹಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಹೇಳಿದರು.<br /> <br /> ಮತದಾರರನ್ನು ಚುನಾವಣಾ ಪ್ರಚಾರ ವೆಚ್ಚದಲ್ಲಿ ಪಾಲುದಾರನ್ನಾಗಿ ಮಾಡಿಕೊಳ್ಳಲು ಬಿಜೆಪಿ ಈ ಕಾರ್ಯತಂತ್ರ ರೂಪಿಸಿದೆ. ಇಂತಹದ್ದೇ ಕಾರ್ಯತಂತ್ರವನ್ನು ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿರುವ ಬಿಜೆಪಿ, ‘ಪ್ರಧಾನಿಯಾಗಿ ಮೋದಿ’ ಘೋಷ ವಾಕ್ಯದೊಂದಿಗೆ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿದೆ.ಮಂಗಳವಾರ ನಡೆದ ಬಿಜೆಪಿ ಆಡಳಿತದಲ್ಲಿರುವ ಐದು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮತ್ತು ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.<br /> <br /> <strong>ಒಂದು ಓಟು, ಒಂದು ನೋಟು:</strong> ಚುನಾವಣಾ ಪ್ರಚಾರಕಾರ್ಯಕ್ಕೆ ‘ಒಂದು ಓಟು, ಒಂದು ನೋಟು’ ಎಂಬ ಮತ್ತೊಂದು ಘೋಷ ವಾಕ್ಯವನ್ನೂ ಬಿಜೆಪಿ ಸಿದ್ಧಪಡಿಸಿದೆ. ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಕನಿಷ್ಠ ₨10ರಿಂದ ಗರಿಷ್ಠ ₨1,000 ವರೆಗೆ ದೇಣಿಗೆಯನ್ನು ಶ್ರೀಸಾಮಾನ್ಯರಿಂದ ಸಂಗ್ರಹಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಹೇಳಿದರು.<br /> <br /> ಮತದಾರರನ್ನು ಚುನಾವಣಾ ಪ್ರಚಾರ ವೆಚ್ಚದಲ್ಲಿ ಪಾಲುದಾರನ್ನಾಗಿ ಮಾಡಿಕೊಳ್ಳಲು ಬಿಜೆಪಿ ಈ ಕಾರ್ಯತಂತ್ರ ರೂಪಿಸಿದೆ. ಇಂತಹದ್ದೇ ಕಾರ್ಯತಂತ್ರವನ್ನು ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>