<p>ಶಿರಾ: ಲೈಂಗಿಕ ಕಿರುಕುಳ ನೀಡಿದ ಪಟ್ಟನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಪಿ.ಪಾಂಡುರಂಗಯ್ಯ ವಿಷಯ ಬಹಿರಂಗ ಪಡಿಸದಂತೆ ತಮ್ಮ ಮಗಳಿಗೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈಗಲೂ ಆತನ ಬೆಂಬಲಿಗರು ಜೀವ ಬೆದರಿಕೆಯೊಡ್ಡುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿನಿ ತಂದೆ ದೂರಿದ್ದಾರೆ.<br /> <br /> ‘ಪೊಲೀಸರಿಂದ ಪ್ರಕರಣ ವಾಪಸ್ ತೆಗೆದುಕೊಳ್ಳಬೇಕು. ಆಗ ನಾವು ನಿಮಗೆ ಕೇಳಿದಷ್ಟು ಹಣ ಕೊಡುತ್ತೇವೆ. ಇಲ್ಲದಿದ್ದರೆ ಎಲ್ಲಿಯಾದರೂ ಒಬ್ಬನೇ ಓಡಾಡುವುದು ಕಷ್ಟ ಎಂದು ಆರೋಪಿ ಪಾಂಡುರಂಗಯ್ಯ ಬೆಂಬಲಿಗರೊಬ್ಬರು ನೇರ ನನಗೆ ಪ್ರಾಣ ಬೆದರಿಕೆ ಹಾಕಿದರು’ ಎಂದು ವಿದ್ಯಾರ್ಥಿನಿ ತಂದೆ ಮಂಗಳವಾರ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ‘ಆದರೆ ನನಗೆ ಹಣ ಬೇಡ. ನನ್ನ ಮಗಳಿಗೆ ನ್ಯಾಯ ಬೇಕು. ನನ್ನ ಒಂದು ಹೆಣ ಬೀಳಿಸಬಹುದಷ್ಟೇ. ಆದರೆ ನನ್ನ ಮಗಳಾದರೂ ಬದುಕಿದ್ದು ನ್ಯಾಯ ಪಡೆಯುತ್ತಾಳೆ’ ಎಂದು ಹೇಳಿದ್ದಾಗಿ ಅವರು ಹೇಳಿದರು.<br /> <br /> ‘ಈ ಹಿಂದೆ ಲೈಂಗಿಕ ಕಿರುಕುಳ ನೀಡಿದ ದಿನವೇ ಪ್ರಾಂಶುಪಾಲರು ತಮ್ಮ ಮಗಳಿಗೆ ಈ ವಿಷಯ ನಿಮ್ಮ ತಂದೆ-–ತಾಯಿ ಅಥವಾ ಬೇರೆ ಯಾರಿಗೆ ಹೇಳಿದರೂ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಸಾಯಿಸಿ ಬುಕ್ಕಾಪಟ್ಟಣದ ಅರಣ್ಯ ಪ್ರದೇಶಕ್ಕೆ ಎಸೆದು ಬರುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಆ ವಿಷಯವನ್ನು ಈಗಾಗಲೇ ಪೊಲೀಸರು ಹಾಗೂ ನ್ಯಾಯಾಲಯಕ್ಕೆ ತಿಳಿಸಿದ್ದೇವೆ’ ಎಂದು ಅವರು ಹೇಳಿದರು.<br /> <br /> ನಿಲ್ಲದ ವದಂತಿ: ಪ್ರಕರಣ ಬೆಳಕಿಗೆ ಬಂದ ಕೂಡಲೇ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಆರೋಪಿ ಪ್ರಾಂಶುಪಾಲ ಬಿ.ಪಿ.ಪಾಂಡರಂಗಯ್ಯ ಅಡಗು ತಾಣಗಳ ಬಗ್ಗೆ ತಾಲ್ಲೂಕಿನಲ್ಲಿ ಮತ್ತಷ್ಟು ವದಂತಿಗಳು ಹರಿದಾಡುತ್ತಿದ್ದು, ಈಗಾಗಲೇ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಮನೆ ತೊರೆದು ಆಂಧ್ರದ ಹಿಂದೂಪುರದಲ್ಲಿ ಅಡಗಿದ್ದಾರೆ ಎಂಬ ವದಂತಿ ಕೇಳಿಬಂದಿವೆ.<br /> <br /> ಆದರೆ ಈವರೆಗೂ ಆರೋಪಿ ಬಂಧಿಸದ ಪೊಲೀಸರು ಪ್ರಭಾವಿ ವ್ಯಕ್ತಿಗಳ ಮರ್ಜಿಗೆ ಒಳಗಾಗಿ ನ್ಯಾಯಾಲಯದಿಂದ ಜಾಮೀನು ಪಡೆಯಲಿ ಎಂದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ಲೈಂಗಿಕ ಕಿರುಕುಳ ನೀಡಿದ ಪಟ್ಟನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಪಿ.ಪಾಂಡುರಂಗಯ್ಯ ವಿಷಯ ಬಹಿರಂಗ ಪಡಿಸದಂತೆ ತಮ್ಮ ಮಗಳಿಗೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈಗಲೂ ಆತನ ಬೆಂಬಲಿಗರು ಜೀವ ಬೆದರಿಕೆಯೊಡ್ಡುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿನಿ ತಂದೆ ದೂರಿದ್ದಾರೆ.<br /> <br /> ‘ಪೊಲೀಸರಿಂದ ಪ್ರಕರಣ ವಾಪಸ್ ತೆಗೆದುಕೊಳ್ಳಬೇಕು. ಆಗ ನಾವು ನಿಮಗೆ ಕೇಳಿದಷ್ಟು ಹಣ ಕೊಡುತ್ತೇವೆ. ಇಲ್ಲದಿದ್ದರೆ ಎಲ್ಲಿಯಾದರೂ ಒಬ್ಬನೇ ಓಡಾಡುವುದು ಕಷ್ಟ ಎಂದು ಆರೋಪಿ ಪಾಂಡುರಂಗಯ್ಯ ಬೆಂಬಲಿಗರೊಬ್ಬರು ನೇರ ನನಗೆ ಪ್ರಾಣ ಬೆದರಿಕೆ ಹಾಕಿದರು’ ಎಂದು ವಿದ್ಯಾರ್ಥಿನಿ ತಂದೆ ಮಂಗಳವಾರ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ‘ಆದರೆ ನನಗೆ ಹಣ ಬೇಡ. ನನ್ನ ಮಗಳಿಗೆ ನ್ಯಾಯ ಬೇಕು. ನನ್ನ ಒಂದು ಹೆಣ ಬೀಳಿಸಬಹುದಷ್ಟೇ. ಆದರೆ ನನ್ನ ಮಗಳಾದರೂ ಬದುಕಿದ್ದು ನ್ಯಾಯ ಪಡೆಯುತ್ತಾಳೆ’ ಎಂದು ಹೇಳಿದ್ದಾಗಿ ಅವರು ಹೇಳಿದರು.<br /> <br /> ‘ಈ ಹಿಂದೆ ಲೈಂಗಿಕ ಕಿರುಕುಳ ನೀಡಿದ ದಿನವೇ ಪ್ರಾಂಶುಪಾಲರು ತಮ್ಮ ಮಗಳಿಗೆ ಈ ವಿಷಯ ನಿಮ್ಮ ತಂದೆ-–ತಾಯಿ ಅಥವಾ ಬೇರೆ ಯಾರಿಗೆ ಹೇಳಿದರೂ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಸಾಯಿಸಿ ಬುಕ್ಕಾಪಟ್ಟಣದ ಅರಣ್ಯ ಪ್ರದೇಶಕ್ಕೆ ಎಸೆದು ಬರುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಆ ವಿಷಯವನ್ನು ಈಗಾಗಲೇ ಪೊಲೀಸರು ಹಾಗೂ ನ್ಯಾಯಾಲಯಕ್ಕೆ ತಿಳಿಸಿದ್ದೇವೆ’ ಎಂದು ಅವರು ಹೇಳಿದರು.<br /> <br /> ನಿಲ್ಲದ ವದಂತಿ: ಪ್ರಕರಣ ಬೆಳಕಿಗೆ ಬಂದ ಕೂಡಲೇ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಆರೋಪಿ ಪ್ರಾಂಶುಪಾಲ ಬಿ.ಪಿ.ಪಾಂಡರಂಗಯ್ಯ ಅಡಗು ತಾಣಗಳ ಬಗ್ಗೆ ತಾಲ್ಲೂಕಿನಲ್ಲಿ ಮತ್ತಷ್ಟು ವದಂತಿಗಳು ಹರಿದಾಡುತ್ತಿದ್ದು, ಈಗಾಗಲೇ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಮನೆ ತೊರೆದು ಆಂಧ್ರದ ಹಿಂದೂಪುರದಲ್ಲಿ ಅಡಗಿದ್ದಾರೆ ಎಂಬ ವದಂತಿ ಕೇಳಿಬಂದಿವೆ.<br /> <br /> ಆದರೆ ಈವರೆಗೂ ಆರೋಪಿ ಬಂಧಿಸದ ಪೊಲೀಸರು ಪ್ರಭಾವಿ ವ್ಯಕ್ತಿಗಳ ಮರ್ಜಿಗೆ ಒಳಗಾಗಿ ನ್ಯಾಯಾಲಯದಿಂದ ಜಾಮೀನು ಪಡೆಯಲಿ ಎಂದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>