<p><strong>ಸಾಗರ:</strong> ‘ನಮ್ಮ ಗತಕಾಲ ಹೇಗಿತ್ತು ಎಂಬುದು ನಮಗೆ ಗೊತ್ತಿದ್ದರೆ ಇಂದು ಮತ್ತು ನಾಳೆ ಹೇಗೆ ನಡೆಯಬೇಕು ಎನ್ನುವುದರ ಕುರಿತು ಸ್ಪಷ್ಟ ಕಲ್ಪನೆ ರೂಪುಗೊಳ್ಳಲು ಸಾಧ್ಯ. ಸಾಮಾಜಿಕ ಬದಲಾವಣೆಗೆ ಇತಿಹಾಸದ ನೆನಪು ಅತ್ಯಗತ್ಯ’ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.<br /> <br /> ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಕೆಳದಿ ಉತ್ಸವ ಆಚರಣಾ ಸಮಿತಿ ಭಾನುವಾರ ಏರ್ಪಡಿಸಿದ್ದ ‘ಕೆಳದಿ ಉತ್ಸವ–2013’ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಇತಿಹಾಸದ ನೆನಪುಗಳು ಕೇವಲ ಉತ್ಸವಗಳಿಗೆ ಸೀಮಿತವಾಗಬಾರದು. ಕೆಳದಿ ಅರಸರು ಈ ನಾಡಿಗೆ ನೀಡಿರುವ ಕೊಡುಗೆಯ ಜತೆಗೆ ಈ ಭಾಗದ ಜನರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಜನಪದ–ಸಾಂಸ್ಕೃತಿಕ ಕಲೆಗಳ ಅಭ್ಯಾಸಕ್ಕೆ ಉತ್ಸವ ವೇದಿಕೆಯಾಗಲಿ ಎಂದರು.<br /> ಗ್ರಾಮೀಣ ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಗ್ರಾಮದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕಬೇಕು. ಈ ವ್ಯವಸ್ಥೆ ರೂಪಿಸಲು ಶಾಸಕರ ನಿಧಿಯಿಂದ ರೂ10ಲಕ್ಷ ನೆರವು ನೀಡಿ ವ್ಯಾಪಾರ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.<br /> <br /> ನಾಣ್ಯ ಹಾಗೂ ಛಾಯಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಸಮಾಜಕಲ್ಯಾಣ ಸಚಿವ ಎಚ್.ಆಂಜನೇಯ ಮಾತನಾಡಿ, ಕೆರೆ ಕಟ್ಟೆ ಕಟ್ಟಿಸುವ ಮೂಲಕ, ಹಲವು ಸುಧಾರಣೆಗಳನ್ನು ತರುವ ಮೂಲಕ ಕೆಳದಿ ಅರಸರು ಜನಪರ ಆಡಳಿತ ನೀಡಿದ್ದಾರೆ ಎಂದು ಸ್ಮರಿಸಿದರು.<br /> <br /> ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಸಾಮಾಜಿಕ ಸಮಸ್ಯೆಯನ್ನು ಬಗೆಹರಿಸುವ ಗುತ್ತಿಗೆಯನ್ನು ರಾಜಕಾರಣಿಗಳಿಗೆ ನೀಡಲಾಗಿದೆ ಎಂಬ ಮನೋಭಾವ ದೂರವಾಗಬೇಕಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಮಡಿಕೇರಿಯಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಸಾಹಿತಿ ಡಾ.ನಾ.ಡಿಸೋಜ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ನಮ್ಮ ಗತಕಾಲ ಹೇಗಿತ್ತು ಎಂಬುದು ನಮಗೆ ಗೊತ್ತಿದ್ದರೆ ಇಂದು ಮತ್ತು ನಾಳೆ ಹೇಗೆ ನಡೆಯಬೇಕು ಎನ್ನುವುದರ ಕುರಿತು ಸ್ಪಷ್ಟ ಕಲ್ಪನೆ ರೂಪುಗೊಳ್ಳಲು ಸಾಧ್ಯ. ಸಾಮಾಜಿಕ ಬದಲಾವಣೆಗೆ ಇತಿಹಾಸದ ನೆನಪು ಅತ್ಯಗತ್ಯ’ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.<br /> <br /> ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಕೆಳದಿ ಉತ್ಸವ ಆಚರಣಾ ಸಮಿತಿ ಭಾನುವಾರ ಏರ್ಪಡಿಸಿದ್ದ ‘ಕೆಳದಿ ಉತ್ಸವ–2013’ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಇತಿಹಾಸದ ನೆನಪುಗಳು ಕೇವಲ ಉತ್ಸವಗಳಿಗೆ ಸೀಮಿತವಾಗಬಾರದು. ಕೆಳದಿ ಅರಸರು ಈ ನಾಡಿಗೆ ನೀಡಿರುವ ಕೊಡುಗೆಯ ಜತೆಗೆ ಈ ಭಾಗದ ಜನರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಜನಪದ–ಸಾಂಸ್ಕೃತಿಕ ಕಲೆಗಳ ಅಭ್ಯಾಸಕ್ಕೆ ಉತ್ಸವ ವೇದಿಕೆಯಾಗಲಿ ಎಂದರು.<br /> ಗ್ರಾಮೀಣ ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಗ್ರಾಮದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕಬೇಕು. ಈ ವ್ಯವಸ್ಥೆ ರೂಪಿಸಲು ಶಾಸಕರ ನಿಧಿಯಿಂದ ರೂ10ಲಕ್ಷ ನೆರವು ನೀಡಿ ವ್ಯಾಪಾರ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.<br /> <br /> ನಾಣ್ಯ ಹಾಗೂ ಛಾಯಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಸಮಾಜಕಲ್ಯಾಣ ಸಚಿವ ಎಚ್.ಆಂಜನೇಯ ಮಾತನಾಡಿ, ಕೆರೆ ಕಟ್ಟೆ ಕಟ್ಟಿಸುವ ಮೂಲಕ, ಹಲವು ಸುಧಾರಣೆಗಳನ್ನು ತರುವ ಮೂಲಕ ಕೆಳದಿ ಅರಸರು ಜನಪರ ಆಡಳಿತ ನೀಡಿದ್ದಾರೆ ಎಂದು ಸ್ಮರಿಸಿದರು.<br /> <br /> ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಸಾಮಾಜಿಕ ಸಮಸ್ಯೆಯನ್ನು ಬಗೆಹರಿಸುವ ಗುತ್ತಿಗೆಯನ್ನು ರಾಜಕಾರಣಿಗಳಿಗೆ ನೀಡಲಾಗಿದೆ ಎಂಬ ಮನೋಭಾವ ದೂರವಾಗಬೇಕಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಮಡಿಕೇರಿಯಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಸಾಹಿತಿ ಡಾ.ನಾ.ಡಿಸೋಜ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>