<p>ಬೀದರ್: ಜಿಲ್ಲೆಯ ಪೊಲೀಸ್ ಸಿಬ್ಬಂದಿಗಾಗಿ ಮೂರು ದಿನ ನಡೆದ ವಾರ್ಷಿಕ ಕ್ರೀಡಾಕೂಟ ಬುಧವಾರ ಸಮಾರೋಪಗೊಂಡಿದ್ದು, ಒತ್ತಡದ ಕಾರ್ಯ ಬದುಕಿನ ನಡುವೆ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ಮನರಂಜನೆ, ಆರಾಮದಾಯಕ ಅನುಭವವನ್ನು ಒದಗಿಸಿತು.<br /> <br /> ಕೊನೆಯ ದಿನ ಪೊಲೀಸ್ ಅಧಿಕಾರಿಗಳು, ಪ್ರಮುಖರಿಗಾಗಿ ನಗುವ ಸ್ಪರ್ಧೆ, ಸಿಬ್ಬಂದಿಯ ಕುಟುಂಬ ಸದಸ್ಯರಿಗಾಗಿ ಮಡಕೆ ಒಡೆಯುವ ಸ್ಪರ್ಧೆ, ಮಾಧ್ಯಮ ಪ್ರತಿನಿಧಿಗಳಿಗಾಗಿ ಬಲೂನು ಊದಿ, ಒಡೆಯುವ ಸ್ಪರ್ಧೆಯನ್ನು ಆಯೋಜಿಸಿದ್ದು ಸಭಿಕರಿಗೆ ರಂಜನೆ ಒದಗಿಸಿತು.<br /> ಜಿಲ್ಲೆಯ ಐದು ತಾಲ್ಲೂಕುಗಳಿಂದ ಒಟ್ಟು ಆರು ತಂಡಗಳು ಮೂರು ದಿನ ಕಾಲ ನಡೆದ ಆಟೋಟ, ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.<br /> <br /> ವಿಜೇತರಿಗೆ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮಹಮ್ಮದ್ ವಜೀರ್ ಅಹಮ್ಮದ್ ಅವರು ಬಹುಮಾನ ವಿತರಿಸಿದರು.<br /> ‘ಪೊಲೀಸ್ ಸಿಬ್ಬಂದಿ ಕರ್ತವ್ಯದ ಜೊತೆಗೆ ಉತ್ತಮ ದೈಹಿಕ ಸಾಮರ್ಥ್ಯವನ್ನು ಕಾಯ್ದುಕೊಳ್ಳಲು ಒತ್ತು ನೀಡಬೇಕು’ ಎಂದು ಪ್ರಶಸ್ತಿ ವಿತರಿಸಿದ ವಜೀರ್ ಅಹಮ್ಮದ್ ಹೇಳಿದರು.<br /> <br /> ಮೂರು ದಿನ ನಡೆದ ಈ ಕ್ರೀಡಾಕೂಟವು ಸಿಬ್ಬಂದಿ ಪರಸ್ಪರ ಮುಖಾಮುಖಿಯಾಗಲು, ಪರಸ್ಪರರ ನಡುವೆ ಬಾಂಧವ್ಯ ಗಟ್ಟಿಯಾಗಲು ನೆರವಾಗಿದೆ ಎಂದರು. ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಜಿಲ್ಲೆಯ ಪೊಲೀಸ್ ಸಿಬ್ಬಂದಿಗಾಗಿ ಮೂರು ದಿನ ನಡೆದ ವಾರ್ಷಿಕ ಕ್ರೀಡಾಕೂಟ ಬುಧವಾರ ಸಮಾರೋಪಗೊಂಡಿದ್ದು, ಒತ್ತಡದ ಕಾರ್ಯ ಬದುಕಿನ ನಡುವೆ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ಮನರಂಜನೆ, ಆರಾಮದಾಯಕ ಅನುಭವವನ್ನು ಒದಗಿಸಿತು.<br /> <br /> ಕೊನೆಯ ದಿನ ಪೊಲೀಸ್ ಅಧಿಕಾರಿಗಳು, ಪ್ರಮುಖರಿಗಾಗಿ ನಗುವ ಸ್ಪರ್ಧೆ, ಸಿಬ್ಬಂದಿಯ ಕುಟುಂಬ ಸದಸ್ಯರಿಗಾಗಿ ಮಡಕೆ ಒಡೆಯುವ ಸ್ಪರ್ಧೆ, ಮಾಧ್ಯಮ ಪ್ರತಿನಿಧಿಗಳಿಗಾಗಿ ಬಲೂನು ಊದಿ, ಒಡೆಯುವ ಸ್ಪರ್ಧೆಯನ್ನು ಆಯೋಜಿಸಿದ್ದು ಸಭಿಕರಿಗೆ ರಂಜನೆ ಒದಗಿಸಿತು.<br /> ಜಿಲ್ಲೆಯ ಐದು ತಾಲ್ಲೂಕುಗಳಿಂದ ಒಟ್ಟು ಆರು ತಂಡಗಳು ಮೂರು ದಿನ ಕಾಲ ನಡೆದ ಆಟೋಟ, ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.<br /> <br /> ವಿಜೇತರಿಗೆ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮಹಮ್ಮದ್ ವಜೀರ್ ಅಹಮ್ಮದ್ ಅವರು ಬಹುಮಾನ ವಿತರಿಸಿದರು.<br /> ‘ಪೊಲೀಸ್ ಸಿಬ್ಬಂದಿ ಕರ್ತವ್ಯದ ಜೊತೆಗೆ ಉತ್ತಮ ದೈಹಿಕ ಸಾಮರ್ಥ್ಯವನ್ನು ಕಾಯ್ದುಕೊಳ್ಳಲು ಒತ್ತು ನೀಡಬೇಕು’ ಎಂದು ಪ್ರಶಸ್ತಿ ವಿತರಿಸಿದ ವಜೀರ್ ಅಹಮ್ಮದ್ ಹೇಳಿದರು.<br /> <br /> ಮೂರು ದಿನ ನಡೆದ ಈ ಕ್ರೀಡಾಕೂಟವು ಸಿಬ್ಬಂದಿ ಪರಸ್ಪರ ಮುಖಾಮುಖಿಯಾಗಲು, ಪರಸ್ಪರರ ನಡುವೆ ಬಾಂಧವ್ಯ ಗಟ್ಟಿಯಾಗಲು ನೆರವಾಗಿದೆ ಎಂದರು. ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>