<p>ಬೆಂಗಳೂರು: ‘ಬಿಬಿಎಂಪಿ ವಿಭಜನೆ ಚಿಂತನೆ ಕೈಬಿಟ್ಟು ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ನಗರದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು’ ಎಂದು ಬಿಬಿಎಂಪಿಯ ಜೆಡಿಎಸ್ ಪಕ್ಷದ ನಾಯಕ ಆರ್.ಪ್ರಕಾಶ್ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಭಜನೆ ಮಾಡುವುದರಿಂದ ಪಾಲಿಕೆಯ ಅಭಿವೃದ್ಧಿ ಸಾಧ್ಯ<br /> ವಿಲ್ಲ. ಬದಲಿಗೆ ಆರ್ಥಿಕ, ಭೌಗೋಳಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ವಲಯ ಮಟ್ಟದಲ್ಲಿ ಕೆಎಎಸ್ ಅಧಿಕಾರಿಗಳ ಬದಲಿಗೆ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಅಧಿಕಾರ ವಿಕೇಂದ್ರೀಕರಣಗೊಳಿಸಬೇಕು’ ಎಂದರು.<br /> <br /> ‘ಪಾಲಿಕೆಯ ವೈದ್ಯಕೀಯ ಪರಿಹಾರ ನಿಧಿಗೆ ಬಂದಿರುವ 4 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡುವುದಾಗಿ ಕಳೆದ ಬಾರಿ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮೇಯರ್ ಭರವಸೆ ನೀಡಿದ್ದರು. ಆದರೆ, ಈವರೆಗೂ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.<br /> <br /> ‘ಈಗ ಹಳೆಯ ಅರ್ಜಿಗಳ ಜತೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಆದ್ದರಿಂದ ತ್ವರಿತವಾಗಿ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು’ ಎಂದರು.<br /> <br /> ನಗರದ ಅಭಿವೃದ್ಧಿಗಾಗಿ ಮತ್ತು ಪಾಲಿಕೆಯಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ಪಾವತಿಸಲು ₨ 1,600 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಇದು ಪಾಲಿಕೆ ಆರ್ಥಿಕವಾಗಿ ದುರ್ಬಲವಾಗಿರುವುದಕ್ಕೆ ಸಾಕ್ಷಿ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬಿಬಿಎಂಪಿ ವಿಭಜನೆ ಚಿಂತನೆ ಕೈಬಿಟ್ಟು ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ನಗರದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು’ ಎಂದು ಬಿಬಿಎಂಪಿಯ ಜೆಡಿಎಸ್ ಪಕ್ಷದ ನಾಯಕ ಆರ್.ಪ್ರಕಾಶ್ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಭಜನೆ ಮಾಡುವುದರಿಂದ ಪಾಲಿಕೆಯ ಅಭಿವೃದ್ಧಿ ಸಾಧ್ಯ<br /> ವಿಲ್ಲ. ಬದಲಿಗೆ ಆರ್ಥಿಕ, ಭೌಗೋಳಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ವಲಯ ಮಟ್ಟದಲ್ಲಿ ಕೆಎಎಸ್ ಅಧಿಕಾರಿಗಳ ಬದಲಿಗೆ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಅಧಿಕಾರ ವಿಕೇಂದ್ರೀಕರಣಗೊಳಿಸಬೇಕು’ ಎಂದರು.<br /> <br /> ‘ಪಾಲಿಕೆಯ ವೈದ್ಯಕೀಯ ಪರಿಹಾರ ನಿಧಿಗೆ ಬಂದಿರುವ 4 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡುವುದಾಗಿ ಕಳೆದ ಬಾರಿ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮೇಯರ್ ಭರವಸೆ ನೀಡಿದ್ದರು. ಆದರೆ, ಈವರೆಗೂ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.<br /> <br /> ‘ಈಗ ಹಳೆಯ ಅರ್ಜಿಗಳ ಜತೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಆದ್ದರಿಂದ ತ್ವರಿತವಾಗಿ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು’ ಎಂದರು.<br /> <br /> ನಗರದ ಅಭಿವೃದ್ಧಿಗಾಗಿ ಮತ್ತು ಪಾಲಿಕೆಯಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ಪಾವತಿಸಲು ₨ 1,600 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಇದು ಪಾಲಿಕೆ ಆರ್ಥಿಕವಾಗಿ ದುರ್ಬಲವಾಗಿರುವುದಕ್ಕೆ ಸಾಕ್ಷಿ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>